ಬ್ರೇಕಿಂಗ್ ನ್ಯೂಸ್
01-04-24 06:30 pm HK News Desk ದೇಶ - ವಿದೇಶ
ಢಾಕಾ, ಏ.01: ಬಾಯ್ಕಾಟ್ ಇಂಡಿಯಾ ಅಭಿಯಾನದ ಬಗ್ಗೆ ವಿಪಕ್ಷಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಭಾರತೀಯ ವಸ್ತುಗಳನ್ನು ಬಹಿಷ್ಕರಿಸುವ ವಿಪಕ್ಷಗಳ ನೈತಿಕತೆಯನ್ನು ಪ್ರಶ್ನಿಸಿದ್ದಾರೆ.
ಭಾರತೀಯ ವಸ್ತುಗಳನ್ನು ಬಹಿಷ್ಕರಿಸಿ ಎಂದು ಅಭಿಯಾನ ನಡೆಸುತ್ತಿರುವ ವಿಪಕ್ಷಗಳು, ಒಂದು ವೇಳೆ ಅವರು ಭಾರತೀಯ ಖಾದ್ಯ ಇಲ್ಲದೇ ಊಟೋಪಚಾರ ಮಾಡುತ್ತಿದ್ದಾರೆಯೇ ಎಂಬುದಾಗಿ ಉತ್ತರ ನೀಡಬೇಕಾಗಿದೆ ಎಂದು ಹಸೀನಾ ತಿರುಗೇಟು ನೀಡಿದ್ದಾರೆ.
ಬಾಯ್ಕಾಟ್ ಅಭಿಯಾನ ನಡೆಸುತ್ತಿರುವವರ ಎಷ್ಟು ಮಂದಿ ಪತ್ನಿಯರು ಭಾರತೀಯ ಸೀರೆಗಳನ್ನು ಉಟ್ಟುಕೊಂಡಿದ್ದಾರೆ? ಹಾಗಾದರೆ ಪತ್ನಿಯರು ತೊಟ್ಟ ಸೀರೆಯನ್ನು ಯಾಕೆ ಸುಟ್ಟು ಹಾಕಿಲ್ಲ? ಎಂದು ಹಸೀನಾ ಪ್ರಶ್ನಿಸಿದ್ದಾರೆ.
ಪ್ರಧಾನಿ ಶೇಖ್ ಹಸೀನಾ ಭಾರತದ ಜತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಜನವರಿ ತಿಂಗಳಿನಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಶೇಖ್ ಹಸೀನಾ ಪಕ್ಷ ಜಯಭೇರಿ ಬಾರಿಸುವ ಮೂಲಕ ಐದನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ಬಾಂಗ್ಲಾದೇಶ ಚುನಾವಣೆಯಲ್ಲಿ ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷವು ಪ್ರಚಂಡ ಗೆಲುವು ಸಾಧಿಸಿತ್ತು. 299 ಕ್ಷೇತ್ರಗಳಲ್ಲಿ ಅವಾಮಿ ಲೀಗ್ 216 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಈ ಸಂದರ್ಭದಲ್ಲಿ ವಿಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದವು. ತದನಂತರ ವಿಪಕ್ಷಗಳು Boycott India ಅಭಿಯಾನ ಆರಂಭಿಸಿದ್ದವು
ಈ ವರ್ಷದ ಆರಂಭದಲ್ಲಿ, ಬಾಂಗ್ಲಾದಲ್ಲಿ ಒಬ್ಬ ದೇಶಭ್ರಷ್ಟ ಬ್ಲಾಗರ್ ಎಕ್ಸ್ನಲ್ಲಿ ಹಾಕಿದ ಪೋಸ್ಟರ್ 'ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಿ' ಎಂದಿತ್ತು. ಅಂದಿನಿಂದ, ಈ ಅಭಿಯಾನವು ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡಲಾರಂಭಿಸಿದೆ. ಬಾಂಗ್ಲಾದೇಶದ ಆಂತರಿಕ ರಾಜಕೀಯದಲ್ಲಿ ಭಾರತದ ಆಪಾದಿತ ಹಸ್ತಕ್ಷೇಪವನ್ನು ವಿರೋಧಿಸಲು ಈ ಅಭಿಯಾನವನ್ನು ಪ್ರಾರಂಭಿಸಲಾಯಿತು.
Bangladesh Prime Minister Sheikh Hasina slammed the opposition party - Bangladesh Nationalist Party (BNP) - for making saree, a classic Indian garment, a matter of politics. The country's opposition party ran an anti-India campaign targetting sarees and other products, stating that they would burn their wives' Indian sarees.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm