ಬ್ರೇಕಿಂಗ್ ನ್ಯೂಸ್
01-04-24 06:30 pm HK News Desk ದೇಶ - ವಿದೇಶ
ಢಾಕಾ, ಏ.01: ಬಾಯ್ಕಾಟ್ ಇಂಡಿಯಾ ಅಭಿಯಾನದ ಬಗ್ಗೆ ವಿಪಕ್ಷಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಭಾರತೀಯ ವಸ್ತುಗಳನ್ನು ಬಹಿಷ್ಕರಿಸುವ ವಿಪಕ್ಷಗಳ ನೈತಿಕತೆಯನ್ನು ಪ್ರಶ್ನಿಸಿದ್ದಾರೆ.
ಭಾರತೀಯ ವಸ್ತುಗಳನ್ನು ಬಹಿಷ್ಕರಿಸಿ ಎಂದು ಅಭಿಯಾನ ನಡೆಸುತ್ತಿರುವ ವಿಪಕ್ಷಗಳು, ಒಂದು ವೇಳೆ ಅವರು ಭಾರತೀಯ ಖಾದ್ಯ ಇಲ್ಲದೇ ಊಟೋಪಚಾರ ಮಾಡುತ್ತಿದ್ದಾರೆಯೇ ಎಂಬುದಾಗಿ ಉತ್ತರ ನೀಡಬೇಕಾಗಿದೆ ಎಂದು ಹಸೀನಾ ತಿರುಗೇಟು ನೀಡಿದ್ದಾರೆ.
ಬಾಯ್ಕಾಟ್ ಅಭಿಯಾನ ನಡೆಸುತ್ತಿರುವವರ ಎಷ್ಟು ಮಂದಿ ಪತ್ನಿಯರು ಭಾರತೀಯ ಸೀರೆಗಳನ್ನು ಉಟ್ಟುಕೊಂಡಿದ್ದಾರೆ? ಹಾಗಾದರೆ ಪತ್ನಿಯರು ತೊಟ್ಟ ಸೀರೆಯನ್ನು ಯಾಕೆ ಸುಟ್ಟು ಹಾಕಿಲ್ಲ? ಎಂದು ಹಸೀನಾ ಪ್ರಶ್ನಿಸಿದ್ದಾರೆ.
ಪ್ರಧಾನಿ ಶೇಖ್ ಹಸೀನಾ ಭಾರತದ ಜತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಜನವರಿ ತಿಂಗಳಿನಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಶೇಖ್ ಹಸೀನಾ ಪಕ್ಷ ಜಯಭೇರಿ ಬಾರಿಸುವ ಮೂಲಕ ಐದನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ಬಾಂಗ್ಲಾದೇಶ ಚುನಾವಣೆಯಲ್ಲಿ ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷವು ಪ್ರಚಂಡ ಗೆಲುವು ಸಾಧಿಸಿತ್ತು. 299 ಕ್ಷೇತ್ರಗಳಲ್ಲಿ ಅವಾಮಿ ಲೀಗ್ 216 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಈ ಸಂದರ್ಭದಲ್ಲಿ ವಿಪಕ್ಷಗಳು ಚುನಾವಣೆಯನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದವು. ತದನಂತರ ವಿಪಕ್ಷಗಳು Boycott India ಅಭಿಯಾನ ಆರಂಭಿಸಿದ್ದವು
ಈ ವರ್ಷದ ಆರಂಭದಲ್ಲಿ, ಬಾಂಗ್ಲಾದಲ್ಲಿ ಒಬ್ಬ ದೇಶಭ್ರಷ್ಟ ಬ್ಲಾಗರ್ ಎಕ್ಸ್ನಲ್ಲಿ ಹಾಕಿದ ಪೋಸ್ಟರ್ 'ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಿ' ಎಂದಿತ್ತು. ಅಂದಿನಿಂದ, ಈ ಅಭಿಯಾನವು ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡಲಾರಂಭಿಸಿದೆ. ಬಾಂಗ್ಲಾದೇಶದ ಆಂತರಿಕ ರಾಜಕೀಯದಲ್ಲಿ ಭಾರತದ ಆಪಾದಿತ ಹಸ್ತಕ್ಷೇಪವನ್ನು ವಿರೋಧಿಸಲು ಈ ಅಭಿಯಾನವನ್ನು ಪ್ರಾರಂಭಿಸಲಾಯಿತು.
Bangladesh Prime Minister Sheikh Hasina slammed the opposition party - Bangladesh Nationalist Party (BNP) - for making saree, a classic Indian garment, a matter of politics. The country's opposition party ran an anti-India campaign targetting sarees and other products, stating that they would burn their wives' Indian sarees.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm