ಬ್ರೇಕಿಂಗ್ ನ್ಯೂಸ್
01-04-24 06:53 pm HK News Desk ದೇಶ - ವಿದೇಶ
ನವದೆಹಲಿ, ಏ.1: ಲಿಕ್ಕರ್ ಪಾಲಿಸಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಈಗ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಕೇಜ್ರಿವಾಲ್ ಅವರನ್ನು ಸೋಮವಾರ ರೌಸ್ ಅವೆನ್ಯೂ ನ್ಯಾಯಾಲಯದಲ್ಲಿ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಲಯವು ಏಪ್ರಿಲ್ 15ರವರೆಗೆ ಬಂಧನ ಅವಧಿಯನ್ನು ವಿಸ್ತರಿಸಿದೆ.
ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಆಮ್ ಆದ್ಮಿ ಪಕ್ಷದ ನಾಯಕರು ಜೈಲು ಪಾಲಾಗಿದ್ದಾರೆ. ಮಾತ್ರವಲ್ಲದೆ ಹೊರ ಬರುವ ಅವರ ಪ್ರಯತ್ನಗಳು ವಿಫಲವಾಗುತ್ತಲೇ ಇವೆ. ಇದರಿಂದಾಗಿ ಲೋಕಸಭಾ ಚುನಾವಣೆಯ ಬಗ್ಗೆ ಆಮ್ ಆದ್ಮಿ ಪಕ್ಷದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಇಂದು ರೌಸ್ ಅವೆನ್ಯೂ ನ್ಯಾಯಾಲಯದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಲಾಯಿತು. ಬಿಗಿ ಭದ್ರತೆಯ ನಡುವೆ ಜಾರಿ ನಿರ್ದೇಶನಾಲಯ (ಇಡಿ) ಮುಖ್ಯಮಂತ್ರಿಯನ್ನು ನ್ಯಾಯಾಲಯಕ್ಕೆ ಕರೆತಂದಿತು. ಕೇಜ್ರಿವಾಲ್ ಅವರು ಕೋರ್ಟ್ ಆವರಣಕ್ಕೆ ಪ್ರವೇಶಿಸುವ ವೇಳೆ ಪ್ರಧಾನಿ ಮೋದಿ ಅವರನ್ನು ಟೀಕಿಸಿದರು.
ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಕೇಜ್ರಿವಾಲ್ ಮಾಧ್ಯಮಗಳಿಗೆ ಹೇಳಿಕೆ ನೀಡಿ, ಪ್ರಧಾನಿ ಮಾಡುತ್ತಿರುವ ಕೆಲಸ ದೇಶಕ್ಕೆ ಒಳ್ಳೆಯದಲ್ಲ. ಮೋದಿ ಅವರು ಸರಿಯಾದ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು. ಇದೆಲ್ಲದರ ನಡುವೆ ದೆಹಲಿ ಸಿಎಂ ಕೇಜ್ರಿವಾಲ್ ಅವರು ಜೈಲಿನಿಂದಲೇ ಶ್ರೀರಾಮನ ಜಪಮಾಡುತ್ತಿದ್ದಾರೆ.
ಲೋಕಸಭಾ ಚುನಾವಣೆ ಕಥೆ ಏನು?
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ಕೇಜ್ರಿವಾಲ್ ಪತ್ನಿ ಹಾಗೂ ಆಪ್ ನಾಯಕರು ಆರೋಪಿಸಿದ್ದಾರೆ. ಲೋಕಸಭಾ ಚುನಾವಣೆಯ ವೇಳೆ ಕೇಜ್ರಿವಾಲ್ ಅವರನ್ನು ಬಂಧಿಸಿ ಗೆಲ್ಲುವ ಸಂಚು ರೂಪಿಸಲಾಗಿದೆ ಎಂದು ದೂರಲಾಗಿದೆ.
ಹೀಗಾಗಿ ಆಪ್ ಪಕ್ಷದ ಮುಂದಿನ ನಡೆ ಏನು ಎನ್ನುವ ಬಗ್ಗೆ ಕೇಜ್ರಿವಾಲ್ ಅವರು ಜೈಲಿನಿಂದಲೇ ತೀರ್ಮಾನಿಸುತ್ತಿದ್ದಾರೆ. ಇದು ಚುನಾವಣೆಯ ಮೇಲೆ ಹೊಡೆತ ಬೀಳಲಿದಿಯಾ ಅಥವಾ ಕೇಜ್ರಿವಾಲ್ ಅವರನ್ನು ಬಂಧನದಿಂದ ಹೊರ ಬಿಡಿಸಿಕೊಂಡು ಬರಲಾಗುತ್ತಾ ? ಮತದಾರರ ಮತ ಯಾರಿಗೆ ಎನ್ನುವುದನ್ನು ಕಾದು ನೋಡಬೇಕಿದೆ.
Delhi Chief Minister Arvind Kejriwal was sent to judicial custody till April 15 on April 1. He was produced before Special Judge Kaveri Baweja in a Delhi court in a jam-packed courtroom after his Enforcement Directorate (ED) custodial remand ended in the Excise policy-linked money laundering case.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm