ಬ್ರೇಕಿಂಗ್ ನ್ಯೂಸ್
01-04-24 06:53 pm HK News Desk ದೇಶ - ವಿದೇಶ
ನವದೆಹಲಿ, ಏ.1: ಲಿಕ್ಕರ್ ಪಾಲಿಸಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಈಗ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಕೇಜ್ರಿವಾಲ್ ಅವರನ್ನು ಸೋಮವಾರ ರೌಸ್ ಅವೆನ್ಯೂ ನ್ಯಾಯಾಲಯದಲ್ಲಿ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಲಯವು ಏಪ್ರಿಲ್ 15ರವರೆಗೆ ಬಂಧನ ಅವಧಿಯನ್ನು ವಿಸ್ತರಿಸಿದೆ.
ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಆಮ್ ಆದ್ಮಿ ಪಕ್ಷದ ನಾಯಕರು ಜೈಲು ಪಾಲಾಗಿದ್ದಾರೆ. ಮಾತ್ರವಲ್ಲದೆ ಹೊರ ಬರುವ ಅವರ ಪ್ರಯತ್ನಗಳು ವಿಫಲವಾಗುತ್ತಲೇ ಇವೆ. ಇದರಿಂದಾಗಿ ಲೋಕಸಭಾ ಚುನಾವಣೆಯ ಬಗ್ಗೆ ಆಮ್ ಆದ್ಮಿ ಪಕ್ಷದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಇಂದು ರೌಸ್ ಅವೆನ್ಯೂ ನ್ಯಾಯಾಲಯದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಲಾಯಿತು. ಬಿಗಿ ಭದ್ರತೆಯ ನಡುವೆ ಜಾರಿ ನಿರ್ದೇಶನಾಲಯ (ಇಡಿ) ಮುಖ್ಯಮಂತ್ರಿಯನ್ನು ನ್ಯಾಯಾಲಯಕ್ಕೆ ಕರೆತಂದಿತು. ಕೇಜ್ರಿವಾಲ್ ಅವರು ಕೋರ್ಟ್ ಆವರಣಕ್ಕೆ ಪ್ರವೇಶಿಸುವ ವೇಳೆ ಪ್ರಧಾನಿ ಮೋದಿ ಅವರನ್ನು ಟೀಕಿಸಿದರು.
ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಕೇಜ್ರಿವಾಲ್ ಮಾಧ್ಯಮಗಳಿಗೆ ಹೇಳಿಕೆ ನೀಡಿ, ಪ್ರಧಾನಿ ಮಾಡುತ್ತಿರುವ ಕೆಲಸ ದೇಶಕ್ಕೆ ಒಳ್ಳೆಯದಲ್ಲ. ಮೋದಿ ಅವರು ಸರಿಯಾದ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು. ಇದೆಲ್ಲದರ ನಡುವೆ ದೆಹಲಿ ಸಿಎಂ ಕೇಜ್ರಿವಾಲ್ ಅವರು ಜೈಲಿನಿಂದಲೇ ಶ್ರೀರಾಮನ ಜಪಮಾಡುತ್ತಿದ್ದಾರೆ.
ಲೋಕಸಭಾ ಚುನಾವಣೆ ಕಥೆ ಏನು?
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ಕೇಜ್ರಿವಾಲ್ ಪತ್ನಿ ಹಾಗೂ ಆಪ್ ನಾಯಕರು ಆರೋಪಿಸಿದ್ದಾರೆ. ಲೋಕಸಭಾ ಚುನಾವಣೆಯ ವೇಳೆ ಕೇಜ್ರಿವಾಲ್ ಅವರನ್ನು ಬಂಧಿಸಿ ಗೆಲ್ಲುವ ಸಂಚು ರೂಪಿಸಲಾಗಿದೆ ಎಂದು ದೂರಲಾಗಿದೆ.
ಹೀಗಾಗಿ ಆಪ್ ಪಕ್ಷದ ಮುಂದಿನ ನಡೆ ಏನು ಎನ್ನುವ ಬಗ್ಗೆ ಕೇಜ್ರಿವಾಲ್ ಅವರು ಜೈಲಿನಿಂದಲೇ ತೀರ್ಮಾನಿಸುತ್ತಿದ್ದಾರೆ. ಇದು ಚುನಾವಣೆಯ ಮೇಲೆ ಹೊಡೆತ ಬೀಳಲಿದಿಯಾ ಅಥವಾ ಕೇಜ್ರಿವಾಲ್ ಅವರನ್ನು ಬಂಧನದಿಂದ ಹೊರ ಬಿಡಿಸಿಕೊಂಡು ಬರಲಾಗುತ್ತಾ ? ಮತದಾರರ ಮತ ಯಾರಿಗೆ ಎನ್ನುವುದನ್ನು ಕಾದು ನೋಡಬೇಕಿದೆ.
Delhi Chief Minister Arvind Kejriwal was sent to judicial custody till April 15 on April 1. He was produced before Special Judge Kaveri Baweja in a Delhi court in a jam-packed courtroom after his Enforcement Directorate (ED) custodial remand ended in the Excise policy-linked money laundering case.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm