ಬ್ರೇಕಿಂಗ್ ನ್ಯೂಸ್
01-04-24 10:02 pm HK News Desk ದೇಶ - ವಿದೇಶ
ಕೋಜಿಕ್ಕೋಡ್, ಎ.1: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ ಕ್ರಮವನ್ನು ಖಂಡಿಸಿ ಬಿಜೆಪಿ ವಿರೋಧಿ ಶಕ್ತಿಗಳು ದೆಹಲಿಯಲ್ಲಿ ಪ್ರತಿಭಟಿಸಿದ್ದು ಒಗ್ಗಟ್ಟಿನ ನಡೆಯಾಗಿದೆ. ಇದು ಲೋಕಸಭೆ ಚುನಾವಣೆಯಲ್ಲಿ ಪರಿಣಾಮ ಬೀರಲಿದೆ. ಬಿಜೆಪಿ ವಿರುದ್ಧ ದೇಶದಲ್ಲಿ ಬಲವಾದ ಎಚ್ಚರಿಕೆ ಮೂಡಿಸುವಲ್ಲಿ ಸಫಲವಾಗಿದೆ. ಇದೇ ಸಂದರ್ಭದಲ್ಲಿ ಕೇಜ್ರಿವಾಲ್ ಬಂಧನ ಕ್ರಮದಿಂದ ಕಾಂಗ್ರೆಸ್ ಪಾಠವನ್ನೂ ಕಲಿಯಬೇಕಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಕೇಜ್ರಿವಾಲ್ ಬಂಧನ ವಿರುದ್ಧ ಇಂಡಿಯಾ ಒಕ್ಕೂಟದ ವಿಪಕ್ಷಗಳು ದೆಹಲಿಯ ರಾಮಲೀಲಾ ಮೈದಾನದಲ್ಲಿ ಒಗ್ಗಟ್ಟು ಪ್ರದರ್ಶಿಸಿದ್ದವು. ಈ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ, ಕಾಂಗ್ರೆಸ್ ನಡೆಯ ಬಗ್ಗೆ ಆಕ್ಷೇಪಿಸುತ್ತಾ ಈ ಘಟನೆ ಆ ಪಕ್ಷಕ್ಕೆ ಪಾಠವಾಗಬೇಕು ಎಂದು ವೇದಾಂತದ ಉಪದೇಶ ಮಾಡಿದ್ದಾರೆ.
ಕಾಂಗ್ರೆಸ್ಸೇತರ ಪಕ್ಷವನ್ನು ಬಿಜೆಪಿ ಟಾರ್ಗೆಟ್ ಮಾಡಿದ ಪ್ರತಿ ಸಂದರ್ಭದಲ್ಲಿಯೂ ಕಾಂಗ್ರೆಸ್, ಬಿಜೆಪಿಗೆ ಬೆಂಬಲವಾಗಿ ನಿಲ್ಲುತ್ತ ಬಂದಿದೆ ಎಂದಿರುವ ಪಿಣರಾಯಿ ವಿಜಯನ್, ಕೇಜ್ರಿವಾಲ್ ಎಪಿಸೋಡ್ ಕಾಂಗ್ರೆಸಿನ ಈ ನಡೆಯನ್ನು ಎತ್ತಿ ತೋರಿಸಲು ಉತ್ತಮ ಉದಾಹರಣೆಯಾಗಿದೆ. ಲಿಕ್ಕರ್ ವಿಚಾರದಲ್ಲಿ ದೆಹಲಿ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಬಂದಾಗ, ಸಿಎಂ ಕೇಜ್ರಿವಾಲ್ ವಿರುದ್ಧ ದಾಳಿ ಮಾಡಲು ಆರಂಭಿಸಿದ್ದೇ ಕಾಂಗ್ರೆಸ್. ಆನಂತರ, ಕಾಂಗ್ರೆಸ್ ನಾಯಕರೇ ಈ ವಿಚಾರದಲ್ಲಿ ಪೊಲೀಸ್ ದೂರು ನೀಡಿದ್ದರು. ಇದರಿಂದಾಗಿ ಕೇಸಿಗೆ ಸಂಬಂಧಿಸಿ ತನಿಖೆಗೆ ಇಡಿ ಅಧಿಕಾರಿಗಳು ಎಂಟ್ರಿ ಕೊಡಲು ಕಾರಣವಾಗಿತ್ತು.
ಸಚಿವ ಮನೀಶ್ ಸಿಸೋಡಿಯ ಅರೆಸ್ಟ್ ಆದ ಬೆನ್ನಲ್ಲೇ ಕಾಂಗ್ರೆಸಿನವರು ಕೇಜ್ರಿವಾಲ್ ಅರೆಸ್ಟ್ ಯಾವಾಗ ಎಂದು ಕೇಳಲು ಆರಂಭಿಸಿದರು. ಕೇಜ್ರಿವಾಲ್ ಬಂಧನ ಆಗೋ ವರೆಗೂ ಈ ಮಾತನ್ನು ಕೇಳುತ್ತಲೇ ಬಂದಿದ್ದರು. ಆಮೂಲಕ ಬಿಜೆಪಿ ಪರವಾಗಿಯೇ ಕಾಂಗ್ರೆಸ್ ನಾಯಕರ ವರ್ತನೆ ಇತ್ತು. ಈಗ ಕಾಂಗ್ರೆಸ್ ತನ್ನ ನಿಲುವಲ್ಲಿ ಬದಲಾವಣೆ ಮಾಡಿರಬಹುದು. ಕಾಂಗ್ರೆಸ್ ನಾಯಕರಿಗೆ ಪ್ರಾಮಾಣಿಕತೆ ಇದ್ದರೆ ತಮ್ಮ ಈ ಮೊದಲಿನ ನಿಲುವು ತಪ್ಪಾಗಿತ್ತು ಎಂಬುದನ್ನು ಒಪ್ಪಿಕೊಳ್ಳಬೇಕು ಎಂದು ಪಿಣರಾಯಿ ವಿಜಯನ್ ತಿವಿದಿದ್ದಾರೆ.
ಆಡಳಿತದಲ್ಲಿರುವ ಸರಕಾರಗಳು ರಾಜಕಾರಣಿಗಳನ್ನು ಟಾರ್ಗೆಟ್ ಮಾಡಿದಾಗ, ಅಂಥ ಸಂದರ್ಭದಲ್ಲಿ ರಾಜಕೀಯದಿಂದಲೇ ದೂರ ಸರಿಯೋದು ಸರಿಯಾದ ನಡೆಯಲ್ಲ. ಆಡಳಿತದ ನಡೆಯನ್ನು ವಿರೋಧಿಸಿ ಹೋರಾಟ ಮಾಡುವ ಎದೆಗಾರಿಕೆಯನ್ನು ರಾಜಕಾರಣಿಗಳು ತೋರಿಸಬೇಕು. ಬೆದರಿಕೆ ಬಂದಾಗ ಪಕ್ಷವನ್ನು ತ್ಯಜಿಸುವುದು, ಇನ್ನೊಂದು ಪಕ್ಷವನ್ನು ಸೇರುವುದು ಒಪ್ಪತಕ್ಕ ವಿಚಾರ ಅಲ್ಲ. ದೇಶದ ಹಿತದೃಷ್ಟಿಯಿಂದ ಕಾಂಗ್ರೆಸ್ ಇಂತಹ ಸಂದರ್ಭ ಬಂದಾಗೆಲ್ಲ ಖಚಿತವಾದ ನಿಲುವನ್ನು ತೆಗೆದುಕೊಳ್ಳಬೇಕು ಎಂದು ಪಿಣರಾಯಿ ಸಲಹೆ ಮಾಡಿದ್ದಾರೆ.
The unity among 18 anti-BJP parties, who gathered in New Delhi to protest the arrest of Delhi Chief Minister Arvind Kejriwal, showed signs of fracture a day later when veteran CPI(M) leader and Kerala Chief Minister Pinarayi Vijayan on Monday accused the Congress of demanding the ED probe into the Delhi liquor excise policy case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm