ಬ್ರೇಕಿಂಗ್ ನ್ಯೂಸ್
07-04-24 02:41 pm HK News Desk ದೇಶ - ವಿದೇಶ
ಕಾಸರಗೋಡು, ಎ.6: ನಾಲ್ಕು ತಿಂಗಳ ಹೆಣ್ಣು ಮಗುವನ್ನು ಕೊಲೆಗೈದು ತಾಯಿ ತನ್ನ ಕೈಯ ನರವನ್ನು ಕತ್ತರಿಸಿಕೊಂಡು ಬಳಿಕ ನೇಣು ಬಿಗಿದು ಆತ್ಮಹತ್ಯೆಗೈದ ದಾರುಣ ಘಟನೆ ಕಾಸರಗೋಡಿನ ಮುಳ್ಳೇರಿಯಾದಲ್ಲಿ ನಡೆದಿದೆ.
ಮೂಲತಃ ಇಡುಕ್ಕಿ ಜಿಲ್ಲೆಯ ತೊಡುಪುಳ ನಿವಾಸಿ ಶರತ್ ಅವರ ಪತ್ನಿ ಬಿಂದು (28) ಆತ್ಮಹತ್ಯೆ ಮಾಡಿಕೊಂಡವರು. ಈಕೆಯ ಗಂಡ ಶರತ್ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇವರಿಗೆ ನಾಲ್ಕು ತಿಂಗಳ ಹೆಣ್ಣು ಮಗುವಿತ್ತು. ಮಗುವನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಿಂದು ಇಡುಕ್ಕಿ ಜಿಲ್ಲೆಯ ತೊಡುಪುಳದ ಪತಿಯ ಮನೆಯಿಂದ ಪುತ್ರಿ ಶ್ರೀನಂದಾ ಮತ್ತು ಪುತ್ರ ಶ್ರೀಹರಿಯೊಂದಿಗೆ ಮಾ.31ರಂದು ಕಾಸರಗೋಡು ಜಿಲ್ಲೆಯ ಮುಳಿಯಾರು ಬಳಿಯ ಕೋಪಾಳಕೊಚ್ಚಿ ಎಂಬಲ್ಲಿಗೆ ಸಂಬಂಧಿಕರ ಮನೆಗೆ ಬಂದಿದ್ದರು.
ಎ.5ರಂದು ಮಧ್ಯಾಹ್ನ ಬಿಂದು ಮನೆಯ ಪಕ್ಕದ ಮರದಲ್ಲಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೈಯ ನರ ಕತ್ತರಿಸಲ್ಪಟ್ಟು ರಕ್ತ ಸೋರುತ್ತಿತ್ತು. ಇದೇ ವೇಳೆ ನಾಲ್ಕು ತಿಂಗಳ ಮಗು ಶ್ರೀನಂದಾ ಕೊಠಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಕಂಡುಬಂದಿತ್ತು. ಮನೆಯವರು ಕೂಡಲೇ ಮಗುವನ್ನು ಚೆಂಗಳ ಸಹಕಾರಿ ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.
ಬಿಂದು ಮತ್ತು ಶರತ್ ಅವರ ವಿವಾಹ ಆರು ವರ್ಷಗಳ ಹಿಂದೆ ನಡೆದಿತ್ತು. ಕಾಸರಗೋಡು ಡಿವೈಎಸ್ಪಿ ಜಯನ್ ಡೊಮಿನಿಕ್ ಹಾಗೂ ಆದೂರು ಪೊಲೀಸ್ ಇನ್ಸ್ಪೆಕ್ಟರ್ ಸಂಜಯ್ ಕುಮಾರ್ ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಗಿದೆ. ಸಾವಿಗೆ ಕಾರಣ ಇನ್ನಷ್ಟೇ ತಿಳಿಯ ಬೇಕಿದ್ದು, ಪತಿಯ ಮೇಲಿನ ಸಿಟ್ಟಿನಲ್ಲಿ ಪತ್ನಿ ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಶಂಕೆ ವ್ಯಕ್ತವಾಗಿದೆ.
In a gruesome incident, a Muliyar native, Bindhu (28) killed her four-month-old infant Srinanda, and died by suicide.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 11:31 am
Mangalore Correspondent
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm