ಬ್ರೇಕಿಂಗ್ ನ್ಯೂಸ್
07-04-24 02:41 pm HK News Desk ದೇಶ - ವಿದೇಶ
ಕಾಸರಗೋಡು, ಎ.6: ನಾಲ್ಕು ತಿಂಗಳ ಹೆಣ್ಣು ಮಗುವನ್ನು ಕೊಲೆಗೈದು ತಾಯಿ ತನ್ನ ಕೈಯ ನರವನ್ನು ಕತ್ತರಿಸಿಕೊಂಡು ಬಳಿಕ ನೇಣು ಬಿಗಿದು ಆತ್ಮಹತ್ಯೆಗೈದ ದಾರುಣ ಘಟನೆ ಕಾಸರಗೋಡಿನ ಮುಳ್ಳೇರಿಯಾದಲ್ಲಿ ನಡೆದಿದೆ.
ಮೂಲತಃ ಇಡುಕ್ಕಿ ಜಿಲ್ಲೆಯ ತೊಡುಪುಳ ನಿವಾಸಿ ಶರತ್ ಅವರ ಪತ್ನಿ ಬಿಂದು (28) ಆತ್ಮಹತ್ಯೆ ಮಾಡಿಕೊಂಡವರು. ಈಕೆಯ ಗಂಡ ಶರತ್ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇವರಿಗೆ ನಾಲ್ಕು ತಿಂಗಳ ಹೆಣ್ಣು ಮಗುವಿತ್ತು. ಮಗುವನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಿಂದು ಇಡುಕ್ಕಿ ಜಿಲ್ಲೆಯ ತೊಡುಪುಳದ ಪತಿಯ ಮನೆಯಿಂದ ಪುತ್ರಿ ಶ್ರೀನಂದಾ ಮತ್ತು ಪುತ್ರ ಶ್ರೀಹರಿಯೊಂದಿಗೆ ಮಾ.31ರಂದು ಕಾಸರಗೋಡು ಜಿಲ್ಲೆಯ ಮುಳಿಯಾರು ಬಳಿಯ ಕೋಪಾಳಕೊಚ್ಚಿ ಎಂಬಲ್ಲಿಗೆ ಸಂಬಂಧಿಕರ ಮನೆಗೆ ಬಂದಿದ್ದರು.
ಎ.5ರಂದು ಮಧ್ಯಾಹ್ನ ಬಿಂದು ಮನೆಯ ಪಕ್ಕದ ಮರದಲ್ಲಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೈಯ ನರ ಕತ್ತರಿಸಲ್ಪಟ್ಟು ರಕ್ತ ಸೋರುತ್ತಿತ್ತು. ಇದೇ ವೇಳೆ ನಾಲ್ಕು ತಿಂಗಳ ಮಗು ಶ್ರೀನಂದಾ ಕೊಠಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಕಂಡುಬಂದಿತ್ತು. ಮನೆಯವರು ಕೂಡಲೇ ಮಗುವನ್ನು ಚೆಂಗಳ ಸಹಕಾರಿ ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.
ಬಿಂದು ಮತ್ತು ಶರತ್ ಅವರ ವಿವಾಹ ಆರು ವರ್ಷಗಳ ಹಿಂದೆ ನಡೆದಿತ್ತು. ಕಾಸರಗೋಡು ಡಿವೈಎಸ್ಪಿ ಜಯನ್ ಡೊಮಿನಿಕ್ ಹಾಗೂ ಆದೂರು ಪೊಲೀಸ್ ಇನ್ಸ್ಪೆಕ್ಟರ್ ಸಂಜಯ್ ಕುಮಾರ್ ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಗಿದೆ. ಸಾವಿಗೆ ಕಾರಣ ಇನ್ನಷ್ಟೇ ತಿಳಿಯ ಬೇಕಿದ್ದು, ಪತಿಯ ಮೇಲಿನ ಸಿಟ್ಟಿನಲ್ಲಿ ಪತ್ನಿ ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಶಂಕೆ ವ್ಯಕ್ತವಾಗಿದೆ.
In a gruesome incident, a Muliyar native, Bindhu (28) killed her four-month-old infant Srinanda, and died by suicide.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm