ಬ್ರೇಕಿಂಗ್ ನ್ಯೂಸ್
11-04-24 01:46 pm HK NEWS DESK ದೇಶ - ವಿದೇಶ
ಚಂಡೀಗಢ, ಏ 11: ಶಾಲಾ ಬಸ್ವೊಂದು ಮಗುಚಿ ಎಂಟು ವಿದ್ಯಾರ್ಥಿಗಳು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಮಹೇಂದ್ರಗಢದಲ್ಲಿ ನಡೆದಿದೆ.
ಮಹೇಂದ್ರಗಢದ ಉನ್ಹಾನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 15 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಜಿಆರ್ ಎಲ್ ಶಾಲೆಯ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್, ಎದುರಲ್ಲಿದ್ದ ಮತ್ತೊಂದು ವಾಹನವನ್ನು ಓವರ್ಟೇಕ್ ಮಾಡಲು ಹೋಗಿ ಈ ಘಟನೆ ನಡೆದಿದೆ. ನಾಲ್ಕನೇ ತರಗತಿಯಿಂದ 10ನೇ ತರಗತಿಯವರೆಗಿನ ಸುಮಾರು 35ರಿಂದ 40 ವಿದ್ಯಾರ್ಥಿಗಳು ಬಸ್ ನಲ್ಲಿದ್ದರು.

ಗಾಯಗೊಂಡ ಮಕ್ಕಳು ಪ್ರಸ್ತುತ ತುರ್ತು ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ. ಹೆಚ್ಚು ತೀವ್ರತರವಾದ ಪ್ರಕರಣಗಳನ್ನು ರೇವಾರಿಯಲ್ಲಿರುವ ವಿಶೇಷ ಸೌಲಭ್ಯಕ್ಕೆ ವರ್ಗಾಯಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದು, ಮೃತರು ಮತ್ತು ಗಾಯಗೊಂಡ ವಿದ್ಯಾರ್ಥಿಗಳ ಗುರುತು ಪತ್ತೆಯಾಗಿಲ್ಲ.
ಬಸ್ ಚಾಲಕನನ್ನು ಬಂಧಿಸಲಾಗಿದೆ. ಆತನನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿದ ಬಳಿಕವಷ್ಟೇ ಪಾನಮತ್ತನಾಗಿದ್ದಾನೆಯೇ ಎಂಬುದು ತಿಳಿದು ಬರಲಿದೆ. ನಿರ್ಲಕ್ಷ್ಯದ ಚಾಲನೆ ಬಗ್ಗೆಯೂ ದೂರುಗಳು ಬಂದಿವೆ. ಈ ಕುರಿತು ತನಿಖೆ ನಡೆಸಲಾಗುತ್ತದೆ' ಎಂದು ಮಹೇಂದ್ರಗಢ ಪೊಲೀಸ್ ವರಿಷ್ಠಾಧಿಕಾರಿ ಅರ್ಶ್ ವರ್ಮಾ ತಿಳಿಸಿದ್ದಾರೆ.
ಹರಿಯಾಣದ ಶಿಕ್ಷಣ ಸಚಿವ ಸೀಮಾ ತ್ರಿಕಾ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.
At least eight children were killed and 13 others injured after a school bus carrying 30 children overturned in Haryana's Mahendergarh on Thursday morning
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm