ಬ್ರೇಕಿಂಗ್ ನ್ಯೂಸ್
11-04-24 10:56 pm HK NEWS ದೇಶ - ವಿದೇಶ
ವಯನಾಡ್, ಎ.11: ವಯನಾಡ್ ಲೋಕಸಭಾ ಕ್ಷೇತ್ರದ ಜನತೆ ತನ್ನನ್ನು ಆಯ್ಕೆ ಮಾಡಿದರೆ, ಟಿಪ್ಪು ನೆನಪಿಸುವ ಸುಲ್ತಾನ್ ಬತ್ತೇರಿ ಹೆಸರನ್ನು ಗಣಪತಿ ವಟ್ಟಾಂ ಎಂಬುದಾಗಿ ಬದಲಾಯಿಸುತ್ತೇನೆ ಎಂದು ಕೇರಳ ಬಿಜೆಪಿ ಅಧ್ಯಕ್ಷ, ವಯನಾಡ್ ಕ್ಷೇತ್ರದ ಅಭ್ಯರ್ಥಿ ಕೆ.ಸುರೇಂದ್ರನ್ ಹೇಳಿದ್ದು ಪರ- ವಿರೋಧ ರಾಜಕೀಯ ವಾಕ್ಸಮರಕ್ಕೆ ಎಡೆಮಾಡಿಕೊಟ್ಟಿದೆ.
ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಹಾಲಿ ಸಂಸದ ರಾಹುಲ್ ಗಾಂಧಿ ಅಖಾಡಕ್ಕಿಳಿದಿದ್ದು, ಬಿಜೆಪಿಯಿಂದ ಕೆ.ಸುರೇಂದ್ರನ್ ಸ್ಪರ್ಧಿಸಿದ್ದಾರೆ. ಟಿಪ್ಪು ಇತಿಹಾಸವನ್ನು ಪ್ರಸ್ತಾಪಿಸಿದ ಸುರೇಂದ್ರನ್, ಮೈಸೂರನ್ನು ಆಳಿದ್ದ ಟಿಪ್ಪು ಸುಲ್ತಾನ್ ಅಂದು ವಯನಾಡ್ ಸೇರಿದಂತೆ ಕೇರಳದಲ್ಲಿ ಲಕ್ಷಾಂತರ ಮಂದಿ ಹಿಂದುಗಳನ್ನು ಮತಾಂತರ ಮಾಡಿದ್ದ. ಟಿಪ್ಪು ಸುಲ್ತಾನ್ ಯಾರು? ಆತ ವಯನಾಡಿಗೆ ಬಂದಿದ್ದು ಯಾವಾಗ, ಆತನಿಗೆ ಯಾಕೆ ಮಹತ್ವ ನೀಡಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.
ಇದು ಹಿಂದಿನಿಂದಲೂ ಗಣಪತಿ ವಟ್ಟಂ ಎಂದೇ ಜನಪ್ರಿಯವಾದ ಸ್ಥಳವಾಗಿದೆ. ಇಲ್ಲಿನ ಜನರಿಗೆ ಈ ಬಗ್ಗೆ ಅರಿವು ಇದೆ. ಕಾಂಗ್ರೆಸ್ ಮತ್ತು ಎಲ್ ಡಿಎಫ್ ಈಗಲೂ ಟಿಪ್ಪು ಸುಲ್ತಾನ್ ಜತೆಗಿದೆ. ಓಲೈಕೆ ಸರ್ಕಾರಗಳೇ ಇಲ್ಲಿನ ಹೆಸರನ್ನು ಬದಲಾಯಿಸಿ ಸುಲ್ತಾನ್ ಬತ್ತೇರಿ ಎಂದು ಮಾಡಿರುವುದಾಗಿ ಸುರೇಂದ್ರನ್ ಆರೋಪಿಸಿದರು.
ಟಿಪ್ಪು ಸುಲ್ತಾನ್ ಕೇರಳದಲ್ಲಿ ಹಲವಾರು ದೇವಾಲಯಗಳನ್ನು ಧ್ವಂಸಗೊಳಿಸಿದ್ದ ಎಂಬುದಕ್ಕೆ ದಾಖಲೆಗಳಿವೆ. ಕರ್ನಾಟಕದಲ್ಲಿ ಟಿಪ್ಪು ಜಯಂತಿ ಆಚರಿಸುವುದಕ್ಕೂ ನಮ್ಮ ಪಕ್ಷ ಆಕ್ಷೇಪ ಎತ್ತಿತ್ತು ಎಂದು ಸುರೇಂದ್ರನ್ ಹೇಳಿದ್ದಾರೆ.
Kerala BJP chief K Surendran, who has been fielded from Wayanad, stirred a controversy by saying that his priority would be to change the name of Sulthan Bathery town to Ganapathy Vattam if he was elected from the seat. Sulthan Bathery town is associated with Mysore ruler Tipu Sultan.
10-06-25 09:24 pm
Bangalore Correspondent
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
CM Siddaramaiah, Delhi; ಮುಖ್ಯಮಂತ್ರಿ ಸಿದ್ದರಾಮಯ...
10-06-25 11:19 am
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
10-06-25 07:55 pm
Mangalore Correspondent
Mangalore, Ivan Dsouza, Congress: ಪೊಲೀಸರ ವಿರು...
10-06-25 07:30 pm
Rolling Right – Mangalore’s #1 Car Service Hu...
10-06-25 02:15 pm
Mangalore MUDA Commissioner Noor Zahara, Moha...
10-06-25 01:44 pm
ಸಿಂಗಾಪುರ ಕಂಟೇನರ್ ಹಡಗಿಗೆ ಬೆಂಕಿ ; ಚೈನಾ, ತೈವಾನ್...
09-06-25 11:03 pm
10-06-25 10:57 pm
Udupi Correspondent
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm
Bangalore Murder, Crime, Techie; ಕಾಮತೃಷೆ ತೀರಿ...
10-06-25 11:26 am
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm