ಬ್ರೇಕಿಂಗ್ ನ್ಯೂಸ್
11-04-24 10:56 pm HK NEWS ದೇಶ - ವಿದೇಶ
ವಯನಾಡ್, ಎ.11: ವಯನಾಡ್ ಲೋಕಸಭಾ ಕ್ಷೇತ್ರದ ಜನತೆ ತನ್ನನ್ನು ಆಯ್ಕೆ ಮಾಡಿದರೆ, ಟಿಪ್ಪು ನೆನಪಿಸುವ ಸುಲ್ತಾನ್ ಬತ್ತೇರಿ ಹೆಸರನ್ನು ಗಣಪತಿ ವಟ್ಟಾಂ ಎಂಬುದಾಗಿ ಬದಲಾಯಿಸುತ್ತೇನೆ ಎಂದು ಕೇರಳ ಬಿಜೆಪಿ ಅಧ್ಯಕ್ಷ, ವಯನಾಡ್ ಕ್ಷೇತ್ರದ ಅಭ್ಯರ್ಥಿ ಕೆ.ಸುರೇಂದ್ರನ್ ಹೇಳಿದ್ದು ಪರ- ವಿರೋಧ ರಾಜಕೀಯ ವಾಕ್ಸಮರಕ್ಕೆ ಎಡೆಮಾಡಿಕೊಟ್ಟಿದೆ.
ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಹಾಲಿ ಸಂಸದ ರಾಹುಲ್ ಗಾಂಧಿ ಅಖಾಡಕ್ಕಿಳಿದಿದ್ದು, ಬಿಜೆಪಿಯಿಂದ ಕೆ.ಸುರೇಂದ್ರನ್ ಸ್ಪರ್ಧಿಸಿದ್ದಾರೆ. ಟಿಪ್ಪು ಇತಿಹಾಸವನ್ನು ಪ್ರಸ್ತಾಪಿಸಿದ ಸುರೇಂದ್ರನ್, ಮೈಸೂರನ್ನು ಆಳಿದ್ದ ಟಿಪ್ಪು ಸುಲ್ತಾನ್ ಅಂದು ವಯನಾಡ್ ಸೇರಿದಂತೆ ಕೇರಳದಲ್ಲಿ ಲಕ್ಷಾಂತರ ಮಂದಿ ಹಿಂದುಗಳನ್ನು ಮತಾಂತರ ಮಾಡಿದ್ದ. ಟಿಪ್ಪು ಸುಲ್ತಾನ್ ಯಾರು? ಆತ ವಯನಾಡಿಗೆ ಬಂದಿದ್ದು ಯಾವಾಗ, ಆತನಿಗೆ ಯಾಕೆ ಮಹತ್ವ ನೀಡಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.
ಇದು ಹಿಂದಿನಿಂದಲೂ ಗಣಪತಿ ವಟ್ಟಂ ಎಂದೇ ಜನಪ್ರಿಯವಾದ ಸ್ಥಳವಾಗಿದೆ. ಇಲ್ಲಿನ ಜನರಿಗೆ ಈ ಬಗ್ಗೆ ಅರಿವು ಇದೆ. ಕಾಂಗ್ರೆಸ್ ಮತ್ತು ಎಲ್ ಡಿಎಫ್ ಈಗಲೂ ಟಿಪ್ಪು ಸುಲ್ತಾನ್ ಜತೆಗಿದೆ. ಓಲೈಕೆ ಸರ್ಕಾರಗಳೇ ಇಲ್ಲಿನ ಹೆಸರನ್ನು ಬದಲಾಯಿಸಿ ಸುಲ್ತಾನ್ ಬತ್ತೇರಿ ಎಂದು ಮಾಡಿರುವುದಾಗಿ ಸುರೇಂದ್ರನ್ ಆರೋಪಿಸಿದರು.
ಟಿಪ್ಪು ಸುಲ್ತಾನ್ ಕೇರಳದಲ್ಲಿ ಹಲವಾರು ದೇವಾಲಯಗಳನ್ನು ಧ್ವಂಸಗೊಳಿಸಿದ್ದ ಎಂಬುದಕ್ಕೆ ದಾಖಲೆಗಳಿವೆ. ಕರ್ನಾಟಕದಲ್ಲಿ ಟಿಪ್ಪು ಜಯಂತಿ ಆಚರಿಸುವುದಕ್ಕೂ ನಮ್ಮ ಪಕ್ಷ ಆಕ್ಷೇಪ ಎತ್ತಿತ್ತು ಎಂದು ಸುರೇಂದ್ರನ್ ಹೇಳಿದ್ದಾರೆ.
Kerala BJP chief K Surendran, who has been fielded from Wayanad, stirred a controversy by saying that his priority would be to change the name of Sulthan Bathery town to Ganapathy Vattam if he was elected from the seat. Sulthan Bathery town is associated with Mysore ruler Tipu Sultan.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm