ಬ್ರೇಕಿಂಗ್ ನ್ಯೂಸ್
13-04-24 09:17 pm HK NEWS ದೇಶ - ವಿದೇಶ
ನವದೆಹಲಿ, ಎ.13: ಪಾಕಿಸ್ಥಾನ- ಅಫ್ಘಾನಿಸ್ತಾನ ಗಡಿಭಾಗದ ಖೈಬರ್ ಪಂಕ್ತುಖ್ವಾ ಪ್ರಾಂತ್ಯದಲ್ಲಿದ್ದ ಅತಿ ಪುರಾತನ ಬೃಹತ್ ಹಿಂದು ದೇವಾಲಯವನ್ನು ನೆಲಸಮ ಮಾಡಲಾಗಿದೆ.
ಕೇದಾರನಾಥ ದೇವಾಲಯ ಮಾದರಿಯ ಗೋಪುರವುಳ್ಳ ಬೃಹತ್ ದೇವಸ್ಥಾನ 1947ರಿಂದಲೇ ಪಾಳು ಬಿದ್ದ ಸ್ಥಿತಿಯಲ್ಲಿತ್ತು. ಸ್ವಾತಂತ್ರ್ಯ ಕಾಲದಲ್ಲಿ ಭಾರತ- ಪಾಕಿಸ್ಥಾನ ವಿಂಗಡಣೆಯಾದಾಗ ಎರಡೂ ರಾಷ್ಟ್ರಗಳಿಂದ ಬಹಳಷ್ಟು ಹಿಂದು- ಮುಸ್ಲಿಮರು ಅತ್ತಿತ್ತ ವಲಸೆ ಹೋಗಿದ್ದರು. ಈ ದೇವಸ್ಥಾನಕ್ಕೆ ಸಂಬಂಧಪಟ್ಟ ಹಿಂದುಗಳೂ ಪಾಕಿಸ್ತಾನ ಬಿಟ್ಟು ಭಾರತಕ್ಕೆ ಬಂದಿದ್ದರು. ದೇವಸ್ಥಾನ ಮತ್ತು ಗೋಪುರ ಮಾತ್ರ ಹಾಗೆಯೇ ಉಳಿದುಕೊಂಡಿತ್ತು. ಸ್ಥಳೀಯ ಕಿಡಿಗೇಡಿಗಳು ಗೋಪುರದ ಇಟ್ಟಿಗೆ, ಕಲ್ಲುಗಳನ್ನು ಒಂದೊಂದಾಗಿಯೇ ಒಡೆದು ವಿಘ್ನಗೊಳಿಸಿದ್ದರೂ ಬೃಹತ್ ದೇವಸ್ಥಾನದ ಮಾದರಿ ಉಳಿದಿತ್ತು.
ಲಾಂಡಿ ಕೋಟಾಲ್ ಬಾಝಾರ್ ಎನ್ನುವ ಪ್ರದೇಶದಲ್ಲಿದ್ದ ದೇವಸ್ಥಾನವನ್ನು ಇದೀಗ ಪೂರ್ತಿ ನೆಲಸಮ ಮಾಡಲಾಗಿದ್ದು, ಅಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಸ್ಥಳೀಯರು ಮುಂದಾಗಿದ್ದಾರೆ. 1992ರಲ್ಲಿ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನೆಲಸಮ ಮಾಡಿದ್ದಕ್ಕೆ ಪ್ರತಿಯಾಗಿ ಈ ದೇವಸ್ಥಾನವನ್ನೂ ಕೆಡವಿ ಹಾಕಲು ಕಿಡಿಗೇಡಿಗಳು ಮುಂದಾಗಿದ್ದರು. ಕಲ್ಲಿನ ಬೃಹತ್ ಶಿಲಾಮಂದಿರ ಆಗಿದ್ದರಿಂದ ಅರೆಬರೆಯಾಗಿ ದೇವಸ್ಥಾನದ ಗೋಪುರ ಉಳಿದುಕೊಂಡಿತ್ತು. ಸ್ಥಳೀಯರು ಖೈಬರ್ ಟೆಂಪಲ್ ಎಂದೇ ಉಲ್ಲೇಖ ಮಾಡುತ್ತಿದ್ದರು.
ಪ್ರಾಚ್ಯವಸ್ತು ಇಲಾಖೆಗೆ ಸಂಬಂಧಪಟ್ಟ ಸ್ಮಾರಕಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕೆಂದು ಪಾಕಿಸ್ತಾನದಲ್ಲಿಯೂ ಕಾನೂನು ಇದ್ದರೂ ಅದನ್ನು ಪಾಲನೆ ಮಾಡುತ್ತಿಲ್ಲ ಎಂದು ಪಾಕಿಸ್ತಾನ್ ಹಿಂದು ಮಂದಿರ ಮ್ಯಾನೇಜ್ಮೆಂಟಿನ ಹಾರೂನ್ ಸಾರಬ್ದಿಯಾಲ್ ಹೇಳಿದ್ದಾರೆ. ಸ್ಥಳೀಯ ಜಿಲ್ಲಾಡಳಿತ ದಾಖಲೆಯಲ್ಲಿ ಇಂದು ಮಂದಿರವೆಂದು ಉಲ್ಲೇಖ ಇಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪಾಕಿಸ್ತಾನದ ಡಾನ್ ಪತ್ರಿಕೆ ಮತ್ತು ಭಾರತದ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
A historical Hindu temple near the Pakistan-Afghanistan border has been demolished and construction for a commercial complex has started at the site in the Khyber Pakhtunkhwa province that was closed since 1947 when the original occupants migrated to India.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm