ಬ್ರೇಕಿಂಗ್ ನ್ಯೂಸ್
13-04-24 09:17 pm HK NEWS ದೇಶ - ವಿದೇಶ
ನವದೆಹಲಿ, ಎ.13: ಪಾಕಿಸ್ಥಾನ- ಅಫ್ಘಾನಿಸ್ತಾನ ಗಡಿಭಾಗದ ಖೈಬರ್ ಪಂಕ್ತುಖ್ವಾ ಪ್ರಾಂತ್ಯದಲ್ಲಿದ್ದ ಅತಿ ಪುರಾತನ ಬೃಹತ್ ಹಿಂದು ದೇವಾಲಯವನ್ನು ನೆಲಸಮ ಮಾಡಲಾಗಿದೆ.
ಕೇದಾರನಾಥ ದೇವಾಲಯ ಮಾದರಿಯ ಗೋಪುರವುಳ್ಳ ಬೃಹತ್ ದೇವಸ್ಥಾನ 1947ರಿಂದಲೇ ಪಾಳು ಬಿದ್ದ ಸ್ಥಿತಿಯಲ್ಲಿತ್ತು. ಸ್ವಾತಂತ್ರ್ಯ ಕಾಲದಲ್ಲಿ ಭಾರತ- ಪಾಕಿಸ್ಥಾನ ವಿಂಗಡಣೆಯಾದಾಗ ಎರಡೂ ರಾಷ್ಟ್ರಗಳಿಂದ ಬಹಳಷ್ಟು ಹಿಂದು- ಮುಸ್ಲಿಮರು ಅತ್ತಿತ್ತ ವಲಸೆ ಹೋಗಿದ್ದರು. ಈ ದೇವಸ್ಥಾನಕ್ಕೆ ಸಂಬಂಧಪಟ್ಟ ಹಿಂದುಗಳೂ ಪಾಕಿಸ್ತಾನ ಬಿಟ್ಟು ಭಾರತಕ್ಕೆ ಬಂದಿದ್ದರು. ದೇವಸ್ಥಾನ ಮತ್ತು ಗೋಪುರ ಮಾತ್ರ ಹಾಗೆಯೇ ಉಳಿದುಕೊಂಡಿತ್ತು. ಸ್ಥಳೀಯ ಕಿಡಿಗೇಡಿಗಳು ಗೋಪುರದ ಇಟ್ಟಿಗೆ, ಕಲ್ಲುಗಳನ್ನು ಒಂದೊಂದಾಗಿಯೇ ಒಡೆದು ವಿಘ್ನಗೊಳಿಸಿದ್ದರೂ ಬೃಹತ್ ದೇವಸ್ಥಾನದ ಮಾದರಿ ಉಳಿದಿತ್ತು.
ಲಾಂಡಿ ಕೋಟಾಲ್ ಬಾಝಾರ್ ಎನ್ನುವ ಪ್ರದೇಶದಲ್ಲಿದ್ದ ದೇವಸ್ಥಾನವನ್ನು ಇದೀಗ ಪೂರ್ತಿ ನೆಲಸಮ ಮಾಡಲಾಗಿದ್ದು, ಅಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಸ್ಥಳೀಯರು ಮುಂದಾಗಿದ್ದಾರೆ. 1992ರಲ್ಲಿ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನೆಲಸಮ ಮಾಡಿದ್ದಕ್ಕೆ ಪ್ರತಿಯಾಗಿ ಈ ದೇವಸ್ಥಾನವನ್ನೂ ಕೆಡವಿ ಹಾಕಲು ಕಿಡಿಗೇಡಿಗಳು ಮುಂದಾಗಿದ್ದರು. ಕಲ್ಲಿನ ಬೃಹತ್ ಶಿಲಾಮಂದಿರ ಆಗಿದ್ದರಿಂದ ಅರೆಬರೆಯಾಗಿ ದೇವಸ್ಥಾನದ ಗೋಪುರ ಉಳಿದುಕೊಂಡಿತ್ತು. ಸ್ಥಳೀಯರು ಖೈಬರ್ ಟೆಂಪಲ್ ಎಂದೇ ಉಲ್ಲೇಖ ಮಾಡುತ್ತಿದ್ದರು.
ಪ್ರಾಚ್ಯವಸ್ತು ಇಲಾಖೆಗೆ ಸಂಬಂಧಪಟ್ಟ ಸ್ಮಾರಕಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕೆಂದು ಪಾಕಿಸ್ತಾನದಲ್ಲಿಯೂ ಕಾನೂನು ಇದ್ದರೂ ಅದನ್ನು ಪಾಲನೆ ಮಾಡುತ್ತಿಲ್ಲ ಎಂದು ಪಾಕಿಸ್ತಾನ್ ಹಿಂದು ಮಂದಿರ ಮ್ಯಾನೇಜ್ಮೆಂಟಿನ ಹಾರೂನ್ ಸಾರಬ್ದಿಯಾಲ್ ಹೇಳಿದ್ದಾರೆ. ಸ್ಥಳೀಯ ಜಿಲ್ಲಾಡಳಿತ ದಾಖಲೆಯಲ್ಲಿ ಇಂದು ಮಂದಿರವೆಂದು ಉಲ್ಲೇಖ ಇಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪಾಕಿಸ್ತಾನದ ಡಾನ್ ಪತ್ರಿಕೆ ಮತ್ತು ಭಾರತದ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
A historical Hindu temple near the Pakistan-Afghanistan border has been demolished and construction for a commercial complex has started at the site in the Khyber Pakhtunkhwa province that was closed since 1947 when the original occupants migrated to India.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 11:31 am
Mangalore Correspondent
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm