ಬ್ರೇಕಿಂಗ್ ನ್ಯೂಸ್
13-04-24 09:17 pm HK NEWS ದೇಶ - ವಿದೇಶ
ನವದೆಹಲಿ, ಎ.13: ಪಾಕಿಸ್ಥಾನ- ಅಫ್ಘಾನಿಸ್ತಾನ ಗಡಿಭಾಗದ ಖೈಬರ್ ಪಂಕ್ತುಖ್ವಾ ಪ್ರಾಂತ್ಯದಲ್ಲಿದ್ದ ಅತಿ ಪುರಾತನ ಬೃಹತ್ ಹಿಂದು ದೇವಾಲಯವನ್ನು ನೆಲಸಮ ಮಾಡಲಾಗಿದೆ.
ಕೇದಾರನಾಥ ದೇವಾಲಯ ಮಾದರಿಯ ಗೋಪುರವುಳ್ಳ ಬೃಹತ್ ದೇವಸ್ಥಾನ 1947ರಿಂದಲೇ ಪಾಳು ಬಿದ್ದ ಸ್ಥಿತಿಯಲ್ಲಿತ್ತು. ಸ್ವಾತಂತ್ರ್ಯ ಕಾಲದಲ್ಲಿ ಭಾರತ- ಪಾಕಿಸ್ಥಾನ ವಿಂಗಡಣೆಯಾದಾಗ ಎರಡೂ ರಾಷ್ಟ್ರಗಳಿಂದ ಬಹಳಷ್ಟು ಹಿಂದು- ಮುಸ್ಲಿಮರು ಅತ್ತಿತ್ತ ವಲಸೆ ಹೋಗಿದ್ದರು. ಈ ದೇವಸ್ಥಾನಕ್ಕೆ ಸಂಬಂಧಪಟ್ಟ ಹಿಂದುಗಳೂ ಪಾಕಿಸ್ತಾನ ಬಿಟ್ಟು ಭಾರತಕ್ಕೆ ಬಂದಿದ್ದರು. ದೇವಸ್ಥಾನ ಮತ್ತು ಗೋಪುರ ಮಾತ್ರ ಹಾಗೆಯೇ ಉಳಿದುಕೊಂಡಿತ್ತು. ಸ್ಥಳೀಯ ಕಿಡಿಗೇಡಿಗಳು ಗೋಪುರದ ಇಟ್ಟಿಗೆ, ಕಲ್ಲುಗಳನ್ನು ಒಂದೊಂದಾಗಿಯೇ ಒಡೆದು ವಿಘ್ನಗೊಳಿಸಿದ್ದರೂ ಬೃಹತ್ ದೇವಸ್ಥಾನದ ಮಾದರಿ ಉಳಿದಿತ್ತು.
ಲಾಂಡಿ ಕೋಟಾಲ್ ಬಾಝಾರ್ ಎನ್ನುವ ಪ್ರದೇಶದಲ್ಲಿದ್ದ ದೇವಸ್ಥಾನವನ್ನು ಇದೀಗ ಪೂರ್ತಿ ನೆಲಸಮ ಮಾಡಲಾಗಿದ್ದು, ಅಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಸ್ಥಳೀಯರು ಮುಂದಾಗಿದ್ದಾರೆ. 1992ರಲ್ಲಿ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನೆಲಸಮ ಮಾಡಿದ್ದಕ್ಕೆ ಪ್ರತಿಯಾಗಿ ಈ ದೇವಸ್ಥಾನವನ್ನೂ ಕೆಡವಿ ಹಾಕಲು ಕಿಡಿಗೇಡಿಗಳು ಮುಂದಾಗಿದ್ದರು. ಕಲ್ಲಿನ ಬೃಹತ್ ಶಿಲಾಮಂದಿರ ಆಗಿದ್ದರಿಂದ ಅರೆಬರೆಯಾಗಿ ದೇವಸ್ಥಾನದ ಗೋಪುರ ಉಳಿದುಕೊಂಡಿತ್ತು. ಸ್ಥಳೀಯರು ಖೈಬರ್ ಟೆಂಪಲ್ ಎಂದೇ ಉಲ್ಲೇಖ ಮಾಡುತ್ತಿದ್ದರು.
ಪ್ರಾಚ್ಯವಸ್ತು ಇಲಾಖೆಗೆ ಸಂಬಂಧಪಟ್ಟ ಸ್ಮಾರಕಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕೆಂದು ಪಾಕಿಸ್ತಾನದಲ್ಲಿಯೂ ಕಾನೂನು ಇದ್ದರೂ ಅದನ್ನು ಪಾಲನೆ ಮಾಡುತ್ತಿಲ್ಲ ಎಂದು ಪಾಕಿಸ್ತಾನ್ ಹಿಂದು ಮಂದಿರ ಮ್ಯಾನೇಜ್ಮೆಂಟಿನ ಹಾರೂನ್ ಸಾರಬ್ದಿಯಾಲ್ ಹೇಳಿದ್ದಾರೆ. ಸ್ಥಳೀಯ ಜಿಲ್ಲಾಡಳಿತ ದಾಖಲೆಯಲ್ಲಿ ಇಂದು ಮಂದಿರವೆಂದು ಉಲ್ಲೇಖ ಇಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪಾಕಿಸ್ತಾನದ ಡಾನ್ ಪತ್ರಿಕೆ ಮತ್ತು ಭಾರತದ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
A historical Hindu temple near the Pakistan-Afghanistan border has been demolished and construction for a commercial complex has started at the site in the Khyber Pakhtunkhwa province that was closed since 1947 when the original occupants migrated to India.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm