ಬ್ರೇಕಿಂಗ್ ನ್ಯೂಸ್
14-04-24 03:19 pm HK NEWS ದೇಶ - ವಿದೇಶ
ನವದೆಹಲಿ, ಎ.14: ಇರಾನ್ ಕಡೆಯಿಂದ ಇಸ್ರೇಲಿನತ್ತ ವಾಯು ದಾಳಿ ಆರಂಭಗೊಂಡಿದೆ. ಶನಿವಾರ ರಾತ್ರಿ ಡ್ರೋಣ್, ಕ್ಷಿಪಣಿ ದಾಳಿಯಾಗಿದ್ದು, ಇಸ್ರೇಲ್ ಅದನ್ನು ಸಮರ್ಥವಾಗಿ ಪುಡಿಗಟ್ಟಿದೆ. ಇಸ್ರೇಲ್ ಮಿಲಿಟರಿ ಪ್ರಕಾರ, ಇರಾನ್ ಕಡೆಯಿಂದ 120 ಡ್ರೋಣ್, 30ಕ್ಕೂ ಹೆಚ್ಚು ಕ್ರೂಸ್ ಮಿಸೈಲ್ ಮತ್ತು 120ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಮಿಸೈಲ್ ದಾಳಿಯಾಗಿದೆ.
ಇದೇ ವೇಳೆ, ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಇಸ್ರೇಲ್ ಮೇಲಿನ ದಾಳಿಯನ್ನು ಖಂಡಿಸಿದ್ದು, ನಮ್ಮ ಬೆಂಬಲ ಇಸ್ರೇಲ್ ದೇಶಕ್ಕಿದೆ. ಇರಾನ್ ಕಡೆಯ ಮಿಸೈಲ್ ಗಳನ್ನು ಪುಡಿಗಟ್ಟುತ್ತೇವೆ ಎಂದಿದ್ದಾರೆ. ಜೋ ಬಿಡೆನ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ.

ಇರಾನ್ ದಾಳಿ ಬೆನ್ನಲ್ಲೇ ಇಸ್ರೇಲ್ ಮಿಲಿಟರಿ ಹೆಡ್ ಕ್ವಾರ್ಟರ್ ಟೆಲ್ ಅವೀವ್ ನಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಸಂಪುಟದ ಜೊತೆಗೆ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಹೇಳಿಕೆ ಬಿಡುಗಡೆ ಮಾಡಿದ್ದು, ಇಸ್ರೇಲ್ ಪಾಲಿಸುವ ತತ್ವ ಕ್ಲೀಯರ್ ಆಗಿದೆ. ನಮಗೆ ಯಾರು ಹಾನಿ ಮಾಡುತ್ತಾರೋ ಅವರ ಮೇಲೆ ನಾವು ಹಾನಿ ಮಾಡುತ್ತೇವೆ. ಯಾವುದೇ ರೀತಿಯ ಬೆದರಿಕೆಯನ್ನು ನಾವು ಎದುರಿಸುತ್ತೇವೆ. ಯಾವುದೇ ಸ್ಥಿತಿಯನ್ನು ಎದುರಿಸಲು ಸರ್ವ ಸನ್ನದ್ಧ ಇದ್ದೇವೆ ಎಂದು ಹೇಳಿದ್ದಾರೆ.
ಕ್ಷಿಪಣಿ ದಾಳಿಯನ್ನು ಎದುರಿಸಲು ನಮ್ಮ ಸೇನೆಯನ್ನು ಸಜ್ಜುಗೊಳಿಸಲಾಗಿದೆ. ಎದುರಿಸುವುದಕ್ಕೆ ಮತ್ತು ಪ್ರತಿ ದಾಳಿ ನಡೆಸುವುದಕ್ಕೆ ನಮ್ಮವರು ಸಿದ್ಧರಾಗಿದ್ದಾರೆ. ಈ ಹಂತದಲ್ಲಿ ನಮ್ಮ ಬೆಂಬಲಕ್ಕೆ ಬಂದಿರುವ ಅಮೆರಿಕ, ಯುಕೆ, ಫ್ರಾನ್ಸ್, ಜರ್ಮನಿ ಮತ್ತಿತರ ದೇಶಗಳಿಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ. ಇದೇ ವೇಳೆ, ಯುಕೆ ಪ್ರಧಾನಿ ರಿಷಿ ಸುನಕ್ ಇರಾನ್ ದಾಳಿಯನ್ನು ಖಂಡಿಸಿದ್ದು, ನಾವು ಇಸ್ರೇಲ್ ಜೊತೆಗಿದ್ದೇವೆ ಎಂದು ಹೇಳಿದ್ದಾರೆ. ಭಾರತ ಮಾತ್ರ ಯುದ್ಧ ಅನಗತ್ಯ, ಎರಡೂ ಕಡೆಯವರು ಶಾಂತಿ ಸ್ಥಾಪನೆಗೆ ಪ್ರಯತ್ನಿಸಬೇಕು ಎಂದು ಹೇಳಿದೆ.
Iran launched more than 200 drones and missiles at Israel in an unprecedented attack late Saturday, the Israeli army announced, in a major escalation of the long-running covert war between the regional foes. Iran's proxies and allies also carried out coordinated attacks on Israeli positions as sirens sounded in many places and AFP correspondents heard blasts in the skies above Jerusalem early Sunday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm