ಬ್ರೇಕಿಂಗ್ ನ್ಯೂಸ್
14-04-24 03:19 pm HK NEWS ದೇಶ - ವಿದೇಶ
ನವದೆಹಲಿ, ಎ.14: ಇರಾನ್ ಕಡೆಯಿಂದ ಇಸ್ರೇಲಿನತ್ತ ವಾಯು ದಾಳಿ ಆರಂಭಗೊಂಡಿದೆ. ಶನಿವಾರ ರಾತ್ರಿ ಡ್ರೋಣ್, ಕ್ಷಿಪಣಿ ದಾಳಿಯಾಗಿದ್ದು, ಇಸ್ರೇಲ್ ಅದನ್ನು ಸಮರ್ಥವಾಗಿ ಪುಡಿಗಟ್ಟಿದೆ. ಇಸ್ರೇಲ್ ಮಿಲಿಟರಿ ಪ್ರಕಾರ, ಇರಾನ್ ಕಡೆಯಿಂದ 120 ಡ್ರೋಣ್, 30ಕ್ಕೂ ಹೆಚ್ಚು ಕ್ರೂಸ್ ಮಿಸೈಲ್ ಮತ್ತು 120ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಮಿಸೈಲ್ ದಾಳಿಯಾಗಿದೆ.
ಇದೇ ವೇಳೆ, ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಇಸ್ರೇಲ್ ಮೇಲಿನ ದಾಳಿಯನ್ನು ಖಂಡಿಸಿದ್ದು, ನಮ್ಮ ಬೆಂಬಲ ಇಸ್ರೇಲ್ ದೇಶಕ್ಕಿದೆ. ಇರಾನ್ ಕಡೆಯ ಮಿಸೈಲ್ ಗಳನ್ನು ಪುಡಿಗಟ್ಟುತ್ತೇವೆ ಎಂದಿದ್ದಾರೆ. ಜೋ ಬಿಡೆನ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ.

ಇರಾನ್ ದಾಳಿ ಬೆನ್ನಲ್ಲೇ ಇಸ್ರೇಲ್ ಮಿಲಿಟರಿ ಹೆಡ್ ಕ್ವಾರ್ಟರ್ ಟೆಲ್ ಅವೀವ್ ನಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಸಂಪುಟದ ಜೊತೆಗೆ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಹೇಳಿಕೆ ಬಿಡುಗಡೆ ಮಾಡಿದ್ದು, ಇಸ್ರೇಲ್ ಪಾಲಿಸುವ ತತ್ವ ಕ್ಲೀಯರ್ ಆಗಿದೆ. ನಮಗೆ ಯಾರು ಹಾನಿ ಮಾಡುತ್ತಾರೋ ಅವರ ಮೇಲೆ ನಾವು ಹಾನಿ ಮಾಡುತ್ತೇವೆ. ಯಾವುದೇ ರೀತಿಯ ಬೆದರಿಕೆಯನ್ನು ನಾವು ಎದುರಿಸುತ್ತೇವೆ. ಯಾವುದೇ ಸ್ಥಿತಿಯನ್ನು ಎದುರಿಸಲು ಸರ್ವ ಸನ್ನದ್ಧ ಇದ್ದೇವೆ ಎಂದು ಹೇಳಿದ್ದಾರೆ.
ಕ್ಷಿಪಣಿ ದಾಳಿಯನ್ನು ಎದುರಿಸಲು ನಮ್ಮ ಸೇನೆಯನ್ನು ಸಜ್ಜುಗೊಳಿಸಲಾಗಿದೆ. ಎದುರಿಸುವುದಕ್ಕೆ ಮತ್ತು ಪ್ರತಿ ದಾಳಿ ನಡೆಸುವುದಕ್ಕೆ ನಮ್ಮವರು ಸಿದ್ಧರಾಗಿದ್ದಾರೆ. ಈ ಹಂತದಲ್ಲಿ ನಮ್ಮ ಬೆಂಬಲಕ್ಕೆ ಬಂದಿರುವ ಅಮೆರಿಕ, ಯುಕೆ, ಫ್ರಾನ್ಸ್, ಜರ್ಮನಿ ಮತ್ತಿತರ ದೇಶಗಳಿಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ. ಇದೇ ವೇಳೆ, ಯುಕೆ ಪ್ರಧಾನಿ ರಿಷಿ ಸುನಕ್ ಇರಾನ್ ದಾಳಿಯನ್ನು ಖಂಡಿಸಿದ್ದು, ನಾವು ಇಸ್ರೇಲ್ ಜೊತೆಗಿದ್ದೇವೆ ಎಂದು ಹೇಳಿದ್ದಾರೆ. ಭಾರತ ಮಾತ್ರ ಯುದ್ಧ ಅನಗತ್ಯ, ಎರಡೂ ಕಡೆಯವರು ಶಾಂತಿ ಸ್ಥಾಪನೆಗೆ ಪ್ರಯತ್ನಿಸಬೇಕು ಎಂದು ಹೇಳಿದೆ.
Iran launched more than 200 drones and missiles at Israel in an unprecedented attack late Saturday, the Israeli army announced, in a major escalation of the long-running covert war between the regional foes. Iran's proxies and allies also carried out coordinated attacks on Israeli positions as sirens sounded in many places and AFP correspondents heard blasts in the skies above Jerusalem early Sunday.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 11:31 am
Mangalore Correspondent
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm