ಬ್ರೇಕಿಂಗ್ ನ್ಯೂಸ್
16-04-24 07:50 pm HK News Desk ದೇಶ - ವಿದೇಶ
ನವದೆಹಲಿ, ಎ.16: ಛತ್ತೀಸ್ಗಢ ರಾಜ್ಯದ ಕಂಕೇರ್ ಜಿಲ್ಲೆಯಲ್ಲಿ 18 ಮಂದಿ ನಕ್ಸಲರನ್ನು ಬಿಎಸ್ಎಫ್ ಭದ್ರತಾ ಪಡೆಗಳು ಗುಂಡಿಟ್ಟು ಹತ್ಯೆಗೈದ ಘಟನೆ ನಡೆದಿದೆ. ಮೂವರು ಭದ್ರತಾ ಸಿಬಂದಿ ಗಾಯಗೊಂಡಿದ್ದು, ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಮೃತರಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಶಂಕರ್ ರಾವ್ ಸೇರಿದ್ದಾನೆ. ಆತನ ತಲೆಗೆ ಛತ್ತೀಸ್ಗಢ ರಾಜ್ಯ ಸರಕಾರ 25 ಲಕ್ಷ ಬಹುಮಾನ ಘೋಷಿಸಿತ್ತು. ಬೈನಗೊಂಡ ಮತ್ತು ಕೊರೊನಾರ್ ಗ್ರಾಮದ ಹಪತೋಲ ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನ 2 ಗಂಟೆ ವೇಳೆಗೆ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಿಎಸ್ಎಫ್ ಯೋಧರು ಮತ್ತು ಜಿಲ್ಲಾ ಸಶಸ್ತ್ರ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ. ಬಿಎಸ್ಎಫ್ ಪಡೆಯನ್ನು ನಕ್ಸಲ್ ಪೀಡಿತ ಕಂಕೇರ್ ಜಿಲ್ಲೆಯಾದ್ಯಂತ ನಿಯೋಜನೆ ಮಾಡಲಾಗಿದೆ.

ಎನ್ಕೌಂಟರ್ ನಡೆದ ಸ್ಥಳದಲ್ಲಿ 18 ಮಂದಿ ಮಾವೋವಾದಿ ನಕ್ಸಲರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಏಳು ಎಕೆ -47 ರೈಫಲ್ ಮತ್ತು ಮೂರು ಮೆಶಿನ್ ಗನ್ ವಶಕ್ಕೆ ಪಡೆಯಲಾಗಿದೆ. ಒಬ್ಬರು ಬಿಎಸ್ಎಫ್ ಯೋಧರ ಕಾಲಿಗೆ ಗುಂಡೇಟು ತಗಲಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಬಿಎಸ್ಎಫ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಕಂಕೇರ್ ಜಿಲ್ಲೆಯಲ್ಲಿ ಎ.26ರಂದು ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಕ್ಸಲರು ಅಲರ್ಟ್ ಆಗಿದ್ದರು. ಜನರಲ್ಲಿ ಭಯ ಹುಟ್ಟಿಸಿ ಚುನಾವಣೆಯಲ್ಲಿ ಸಕ್ರಿಯವಾಗದಂತೆ ಯತ್ನ ಮಾಡಿದ್ದರು. ಹೀಗಾಗಿ ರಾಜ್ಯ ಪೊಲೀಸರು ಮತ್ತು ಬಿಎಸ್ಎಫ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದವು. ಸ್ಥಳದಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ.
At least twenty-nine Naxalites were killed in an encounter with the police in Chhattisgarh's Kanker district on Tuesday, the Border Security Force said.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm