ಬ್ರೇಕಿಂಗ್ ನ್ಯೂಸ್
16-04-24 07:50 pm HK News Desk ದೇಶ - ವಿದೇಶ
ನವದೆಹಲಿ, ಎ.16: ಛತ್ತೀಸ್ಗಢ ರಾಜ್ಯದ ಕಂಕೇರ್ ಜಿಲ್ಲೆಯಲ್ಲಿ 18 ಮಂದಿ ನಕ್ಸಲರನ್ನು ಬಿಎಸ್ಎಫ್ ಭದ್ರತಾ ಪಡೆಗಳು ಗುಂಡಿಟ್ಟು ಹತ್ಯೆಗೈದ ಘಟನೆ ನಡೆದಿದೆ. ಮೂವರು ಭದ್ರತಾ ಸಿಬಂದಿ ಗಾಯಗೊಂಡಿದ್ದು, ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಮೃತರಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಶಂಕರ್ ರಾವ್ ಸೇರಿದ್ದಾನೆ. ಆತನ ತಲೆಗೆ ಛತ್ತೀಸ್ಗಢ ರಾಜ್ಯ ಸರಕಾರ 25 ಲಕ್ಷ ಬಹುಮಾನ ಘೋಷಿಸಿತ್ತು. ಬೈನಗೊಂಡ ಮತ್ತು ಕೊರೊನಾರ್ ಗ್ರಾಮದ ಹಪತೋಲ ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನ 2 ಗಂಟೆ ವೇಳೆಗೆ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಿಎಸ್ಎಫ್ ಯೋಧರು ಮತ್ತು ಜಿಲ್ಲಾ ಸಶಸ್ತ್ರ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ. ಬಿಎಸ್ಎಫ್ ಪಡೆಯನ್ನು ನಕ್ಸಲ್ ಪೀಡಿತ ಕಂಕೇರ್ ಜಿಲ್ಲೆಯಾದ್ಯಂತ ನಿಯೋಜನೆ ಮಾಡಲಾಗಿದೆ.

ಎನ್ಕೌಂಟರ್ ನಡೆದ ಸ್ಥಳದಲ್ಲಿ 18 ಮಂದಿ ಮಾವೋವಾದಿ ನಕ್ಸಲರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಏಳು ಎಕೆ -47 ರೈಫಲ್ ಮತ್ತು ಮೂರು ಮೆಶಿನ್ ಗನ್ ವಶಕ್ಕೆ ಪಡೆಯಲಾಗಿದೆ. ಒಬ್ಬರು ಬಿಎಸ್ಎಫ್ ಯೋಧರ ಕಾಲಿಗೆ ಗುಂಡೇಟು ತಗಲಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಬಿಎಸ್ಎಫ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಕಂಕೇರ್ ಜಿಲ್ಲೆಯಲ್ಲಿ ಎ.26ರಂದು ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಕ್ಸಲರು ಅಲರ್ಟ್ ಆಗಿದ್ದರು. ಜನರಲ್ಲಿ ಭಯ ಹುಟ್ಟಿಸಿ ಚುನಾವಣೆಯಲ್ಲಿ ಸಕ್ರಿಯವಾಗದಂತೆ ಯತ್ನ ಮಾಡಿದ್ದರು. ಹೀಗಾಗಿ ರಾಜ್ಯ ಪೊಲೀಸರು ಮತ್ತು ಬಿಎಸ್ಎಫ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದವು. ಸ್ಥಳದಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ.
At least twenty-nine Naxalites were killed in an encounter with the police in Chhattisgarh's Kanker district on Tuesday, the Border Security Force said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm