ಬ್ರೇಕಿಂಗ್ ನ್ಯೂಸ್
16-04-24 07:50 pm HK News Desk ದೇಶ - ವಿದೇಶ
ನವದೆಹಲಿ, ಎ.16: ಛತ್ತೀಸ್ಗಢ ರಾಜ್ಯದ ಕಂಕೇರ್ ಜಿಲ್ಲೆಯಲ್ಲಿ 18 ಮಂದಿ ನಕ್ಸಲರನ್ನು ಬಿಎಸ್ಎಫ್ ಭದ್ರತಾ ಪಡೆಗಳು ಗುಂಡಿಟ್ಟು ಹತ್ಯೆಗೈದ ಘಟನೆ ನಡೆದಿದೆ. ಮೂವರು ಭದ್ರತಾ ಸಿಬಂದಿ ಗಾಯಗೊಂಡಿದ್ದು, ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಮೃತರಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಶಂಕರ್ ರಾವ್ ಸೇರಿದ್ದಾನೆ. ಆತನ ತಲೆಗೆ ಛತ್ತೀಸ್ಗಢ ರಾಜ್ಯ ಸರಕಾರ 25 ಲಕ್ಷ ಬಹುಮಾನ ಘೋಷಿಸಿತ್ತು. ಬೈನಗೊಂಡ ಮತ್ತು ಕೊರೊನಾರ್ ಗ್ರಾಮದ ಹಪತೋಲ ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನ 2 ಗಂಟೆ ವೇಳೆಗೆ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಿಎಸ್ಎಫ್ ಯೋಧರು ಮತ್ತು ಜಿಲ್ಲಾ ಸಶಸ್ತ್ರ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ. ಬಿಎಸ್ಎಫ್ ಪಡೆಯನ್ನು ನಕ್ಸಲ್ ಪೀಡಿತ ಕಂಕೇರ್ ಜಿಲ್ಲೆಯಾದ್ಯಂತ ನಿಯೋಜನೆ ಮಾಡಲಾಗಿದೆ.
ಎನ್ಕೌಂಟರ್ ನಡೆದ ಸ್ಥಳದಲ್ಲಿ 18 ಮಂದಿ ಮಾವೋವಾದಿ ನಕ್ಸಲರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಏಳು ಎಕೆ -47 ರೈಫಲ್ ಮತ್ತು ಮೂರು ಮೆಶಿನ್ ಗನ್ ವಶಕ್ಕೆ ಪಡೆಯಲಾಗಿದೆ. ಒಬ್ಬರು ಬಿಎಸ್ಎಫ್ ಯೋಧರ ಕಾಲಿಗೆ ಗುಂಡೇಟು ತಗಲಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಬಿಎಸ್ಎಫ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಕಂಕೇರ್ ಜಿಲ್ಲೆಯಲ್ಲಿ ಎ.26ರಂದು ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಕ್ಸಲರು ಅಲರ್ಟ್ ಆಗಿದ್ದರು. ಜನರಲ್ಲಿ ಭಯ ಹುಟ್ಟಿಸಿ ಚುನಾವಣೆಯಲ್ಲಿ ಸಕ್ರಿಯವಾಗದಂತೆ ಯತ್ನ ಮಾಡಿದ್ದರು. ಹೀಗಾಗಿ ರಾಜ್ಯ ಪೊಲೀಸರು ಮತ್ತು ಬಿಎಸ್ಎಫ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದವು. ಸ್ಥಳದಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ.
At least twenty-nine Naxalites were killed in an encounter with the police in Chhattisgarh's Kanker district on Tuesday, the Border Security Force said.
26-07-24 10:39 pm
HK News Desk
Greater Bengalore, DK Shivakumar: ರಾಮನಗರ ಇನ್ನ...
26-07-24 09:58 pm
MUDA Scam, Byrathi Suresh: ಕೇಂದ್ರ ಸಚಿವ ಕುಮಾರಸ...
26-07-24 09:27 pm
Shalini Rajneesh, Rajneesh Goyal: ಮುಖ್ಯ ಕಾರ್ಯ...
26-07-24 09:00 pm
Bangalore bike wheelie: ಬೆಂಗಳೂರಿನಲ್ಲಿ ಹೆಚ್ಚಾಯ...
26-07-24 08:50 pm
26-07-24 05:51 pm
HK News Desk
ಬಯಲು ಶೌಚಕ್ಕೆ ಹೋದವನ ಕತ್ತಿಗೆ ಸುತ್ತಿಕೊಂಡ 13 ಅಡಿ...
25-07-24 01:03 pm
ನೇಪಾಳ ; ಟೇಕಾಫ್ ವೇಳೆ ರನ್ ವೇನಲ್ಲೇ ಹೊತ್ತಿ ಉರಿದ...
24-07-24 01:48 pm
ಪ್ಯಾರಿಸ್ ಒಲಿಂಪಿಕ್ಸ್ ಗೆ ಭಯೋತ್ಪಾದಕ ದಾಳಿ ಬೆದರಿಕೆ...
24-07-24 12:25 pm
IAS Wife Suicide, Rowdy, Crime; ರೌಡಿ ಹಿಂದೆ ಓಡ...
23-07-24 08:45 pm
26-07-24 10:24 pm
Mangalore Correspondent
Mangalore rain, Uchila, Someshwara beach: ಸೋಮ...
26-07-24 09:06 pm
Mangalore Liquid Lounge News: ವಿದ್ಯಾರ್ಥಿಗಳೇ ಬ...
26-07-24 05:07 pm
Mangalore, Vinay Kulkarni, Koragajja: ತುಳುನಾಡ...
26-07-24 02:11 pm
Mangalore rain, Ullal house collapsed: ಉಳ್ಳಾಲ...
25-07-24 11:19 pm
26-07-24 03:42 pm
Bangalore Correspondent
Mangalore Jail Raid: ನಸುಕಿನಲ್ಲಿ ಮಂಗಳೂರು ಜೈಲಿಗ...
25-07-24 11:44 am
Shivamogga Murder News: ಪ್ರೀತಿಸಿದ ಯುವತಿಯನ್ನೇ...
24-07-24 06:45 pm
Bangalore PG Murder: ಬೆಂಗಳೂರು ; ಲೇಡಿಸ್ ಪಿಜಿಗೆ...
24-07-24 05:09 pm
Ramnagara rape, crime: ಐಸ್ಕ್ರೀಮ್ ಕೊಡಿಸೋ ನೆಪ...
23-07-24 03:03 pm