ಬ್ರೇಕಿಂಗ್ ನ್ಯೂಸ್
17-04-24 07:07 pm HK News Desk ದೇಶ - ವಿದೇಶ
ಗಾಂಧಿನಗರ, ಏ.17: ಗುಜರಾತ್ನ ಖೇಡಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನದಿಯಾಡ್ ನಗರದ ಬಳಿಯ ಅಹಮದಾಬಾದ್-ವಡೋದರ ಎಕ್ಸ್ಪ್ರೆಸ್ವೇನಲ್ಲಿ ಟ್ರಕ್ಗೆ ಕಾರು ಗುದ್ದಿದ್ದು, ಕಾರಿನಲ್ಲಿದ್ದ ಎಲ್ಲ 10 ಜನ ಮೃತಪಟ್ಟಿದ್ದಾರೆ.
ವಡೋದರದಿಂದ ಎರ್ಟಿಗಾ ಕಾರು ಅಹಮದಾಬಾದ್ಗೆ ತೆರಳುತ್ತಿತ್ತು. ವೇಗವಾಗಿ ಚಲಿಸುವ ವೇಳೆ, ಹೈವೇ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಟ್ರಕ್ಗೆ ಹಿಂಬದಿಯಿಂದ ಗುದ್ದಿದೆ. ರಭಸವಾಗಿ ಚಲಿಸುತ್ತಿದ್ದ ಕಾರು ನಿಂತಿದ್ದ ಟ್ರಕ್ಗೆ ಗುದ್ದಿದ ಪರಿಣಾಮ ಕಾರ್ನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ. 8 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಇಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂಬುದಾಗಿ ನದಿಯಾಡ್ ಗ್ರಾಮೀಣ ಪೊಲೀಸ್ ಸ್ಟೇಷನ್ ಇನ್ಸ್ಪೆಕ್ಟರ್ ಕಿರಿತ್ ಚೌಧರಿ ಮಾಹಿತಿ ನೀಡಿದ್ದಾರೆ.
ಅಹಮದಾಬಾದ್ಗೆ ತೆರಳುತ್ತಿದ್ದ ಟ್ರಕ್ ಎಕ್ಸ್ಪ್ರೆವೇನ ಎಡ ಭಾಗದಲ್ಲಿ ನಿಂತಿತ್ತು. ತಾಂತ್ರಿಕ ಸಮಸ್ಯೆಯಿಂದಾಗಿ ಟ್ರಕ್ಅನ್ನು ನಿಲ್ಲಿಸಲಾಗಿತ್ತು. ಕಾರು ವೇಗವಾಗಿ ಚಲಿಸುತ್ತಿದ್ದ ಕಾರಣ ಟ್ರಕ್ ಸಮೀಪ ಬಂದಾಗ ಏಕಾಏಕಿ ನಿಲ್ಲಿಸಲಾಗದೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸುತ್ತಲೇ ಹೆದ್ದಾರಿ ಪ್ಯಾಟ್ರೋಲಿಂಗ್ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ, ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ. ಎರಡು ಆಂಬುಲೆನ್ಸ್ಗಳನ್ನೂ ಕರೆಸಿ, ಗಾಯಾಳುಗಳನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಆದರೆ, ಕಾರಿನಲ್ಲಿದ್ದ ಒಬ್ಬರೂ ಬದುಕುಳಿಯಲಿಲ್ಲ. ಭೀಕರ ಅಪಘಾತದ ಹಿನ್ನೆಲೆಯಲ್ಲಿ ಎಕ್ಸ್ಪ್ರೆಸ್ವೇನಲ್ಲಿ ಕೆಲ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.
अहमदाबाद बडौदा एक्सप्रेस वे पर नडियाद के पास सडक हादसा हुआ,
— Bharat J Panchal (@bjpanchal64) April 17, 2024
10 लोगो की मौत#Ahmedabad #Vadodara #Accident #Gujarat #Expressway pic.twitter.com/xGajFxATJL
A terrible road accident has occurred in Kheda district of Gujarat. A car rammed into a truck on the Ahmedabad-Vadodara Expressway near Nadiad Nagar, killing all 10 people in the car. The over speeding car hit the truck from behind causing the car to be completely mangled. The police informed that 8 people died on the spot due to the severity of the accident, while two others died on the way to the hospital.
21-01-25 10:59 pm
HK News Desk
BJP MLA BP Harish, B. Y. Vijayendra, Yatnal:...
20-01-25 07:00 pm
Hassan Suicide, Online Gaming: ಅಮ್ಮಾ ನನ್ನನ್ನು...
20-01-25 04:24 pm
ಕೇಸರಿ ಮನೆಯಲ್ಲಿ ಬಣ ಬಡಿದಾಟ ಜೋರು ; ಯತ್ನಾಳ್ ಬಣದ ಎ...
19-01-25 08:30 pm
ಮುಡಾ ಸೈಟ್ ಹಗರಣ ; 300 ಕೋಟಿ ಮೌಲ್ಯದ 142 ಆಸ್ತಿಗಳನ...
18-01-25 05:05 pm
21-01-25 11:02 pm
HK News Desk
ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ; ಸಿಲಿಂಡರ್ಗಳ ನಿರಂತ...
19-01-25 08:17 pm
Israel War: ಕಡೆಗೂ ಕದನ ವಿರಾಮ ಘೋಷಿಸಿದ ಇಸ್ರೇಲ್ ;...
19-01-25 06:35 pm
ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಎನ್ಎಂಡಿ...
18-01-25 06:20 pm
Vijay Kiran Anand 2025: ಮಹಾ ಕುಂಭ ಮೇಳದ ಮುಖ್ಯ ಉ...
16-01-25 09:01 pm
21-01-25 11:51 pm
Mangalore Correspondent
Mangalore Praveen Nettaru murder case, NIA ar...
21-01-25 09:43 pm
Mangalore University, Phd courses: ಪಿಎಚ್ ಡಿ ಪ...
21-01-25 08:11 pm
Mangalore Kotekar bank robbery, president: 15...
21-01-25 07:43 pm
Mangalore Kotekar Bank Robbery, Accused Photo...
21-01-25 12:21 pm
21-01-25 06:00 pm
Mangaluru Correspondent
Hubballi Bank Robbery, Kotekar, Bidar: ಬೀದರ್...
20-01-25 10:18 pm
Mangalore Kotekar Bank Robbery, Three Arreste...
20-01-25 07:19 pm
Mangalore Kotekar Robbery, Davanagere: ಮಂಗಳೂರ...
20-01-25 05:20 pm
Mysuru Robbery, Bidar Mangalore, Crime; ಬೀದರ್...
20-01-25 01:25 pm