ಬ್ರೇಕಿಂಗ್ ನ್ಯೂಸ್
02-12-20 11:15 am Headline Karnataka News Network ದೇಶ - ವಿದೇಶ
ಮಧ್ಯಪ್ರದೇಶ, ಡಿ.2 : ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಲ್ಲಿ ಎಂಟು ನವಜಾತ ಶಿಶುಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಈ ಸಾವಿಗೆ ಕಾರಣವಾದ ಅಂಶಗಳ ಪತ್ತೆಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಉನ್ನತ ಮಟ್ಟದ ತನಿಖೆ ನಡೆಸಲು ಆದೇಶಿಸಿದ್ದಾರೆ.
ಆಸ್ಪತ್ರೆಯ ಅಸ್ವಸ್ಥ ನವಜಾತ ಶಿಶು ಆರೈಕೆ ಘಟಕ ಮತ್ತು ಮಕ್ಕಳ ತೀವ್ರ ನಿಗಾ ಘಟಕದಲ್ಲಿ ಈ ಸಾವುಗಳು ಸಂಭವಿಸಿವೆ. ಮೃತಪಟ್ಟ ಮಕ್ಕಳು ಬುಡಕಟ್ಟು ಜನಾಂಗದವರೇ ಅಧಿಕ ಇರುವ ಶಾಡೋಲ್, ಉಮರಿಯಾ ಮತ್ತು ಅನುಪ್ಪೂರ್ ಜಿಲ್ಲೆಗೆ ಸೇರಿದವರು.

ಅನಿಯಂತ್ರಿತ ನ್ಯುಮೋನಿಯಾ ಮತ್ತು ಉಸಿರಾಟದ ಸಂಕೀರ್ಣತೆಗಳಿಂದ ಬಹುತೇಕ ಮಕ್ಕಳು ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಆರೋಗ್ಯ ಸಚಿವ ಡಾ.ಪ್ರಭುರಾಮ್ ಚೌಧರಿ ಹೇಳಿದ್ದಾರೆ.
"ಮುಖ್ಯಮಂತ್ರಿ ಆದೇಶದಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮುಹಮ್ಮದ್ ಸುಲೈಮಾನ್ ಅವರಿಗೆ ಶಾಡೋಲ್ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಮಕ್ಕಳ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಲಾಗಿದೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಈ ಸಾವಿಗೆ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯ ಕಾರಣವೇ ಎಂದು ಪತ್ತೆ ಮಾಡುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಗತ್ಯವಿದ್ದಲ್ಲಿ ಜಬಲ್ಪುರದಿಂದ ಶಾಡೋಲ್ಗೆ ತಜ್ಞ ವೈದ್ಯರನ್ನು ಕಳುಹಿಸುವಂತೆಯೂ ಅವರು ಸಲಹೆ ಮಾಡಿದ್ದಾರೆ. ಕಳೆದ ಜನವರಿಯಲ್ಲಿ ಆರು ದಿನದಿಂದ ಆರು ತಿಂಗಳು ಪ್ರಾಯದ ಆರು ಬುಡಕಟ್ಟು ಮಕ್ಕಳು ಇದೇ ಆಸ್ಪತ್ರೆಯಲ್ಲಿ 15 ಗಂಟೆಯೊಳಗೆ ಮೃತಪಟ್ಟಿದ್ದವು.
As many as eight infants died during treatment at the district hospital at Shahdol in Madhya Pradesh in the last four days, prompting the state government to launch an inquiry, officials said on Tuesday.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
ಎಐಸಿಸಿ ಸೆಕ್ರಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm