ಬ್ರೇಕಿಂಗ್ ನ್ಯೂಸ್
24-04-24 05:01 pm HK News Desk ದೇಶ - ವಿದೇಶ
ರಾಜಸ್ಥಾನ, ಏ.24: ಇನ್ನೇನು ಕೆಲವೇ ಗಂಟೆಯಲ್ಲಿ ಹಸೆಮಣೆ ಏರಬೇಕಿದ್ದ ವರನೋರ್ವ ಮದುವೆಯ ಮೊದಲ ನಡೆಯುವ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶಿಸಿ ಇಹಲೋಕ ತ್ಯಜಿಸಿದ ಆಘಾತಕಾರಿ ಘಟನೆ ರಾಜಸ್ಥಾನದ ಕೋಟಾ ನಗರದ ನಂಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಮೂಲತಃ ಕೋಟಾ ನಗರದ ಕೇಶವಪುರ ನಿವಾಸಿಯಾದ ಸೂರಜ್ ಸಕ್ಸೇನಾ (30) ಎಂದು ಗುರುತಿಸಲಾಗಿದೆ.

ಕೋಟಾ ನಗರದ ಕೇಶವಪುರ ನಿವಾಸಿಯಾದ ಸೂರಜ್ ಸಕ್ಸೇನಾ ಅವರ ವಿವಾಹ ಏಪ್ರಿಲ್ 24 ರಂದು ನಿಶ್ಚಯವಾಗಿತ್ತು ಅದರಂತೆ ಬುಧವಾರ ಬಂಡಿ ರಸ್ತೆಯಲ್ಲಿರುವ ಮೆನಾಲ್ ರೆಸಿಡೆನ್ಸಿ ರೆಸಾರ್ಟ್ನಲ್ಲಿ ವಿವಾಹ ಸಮಾರಂಭ ಆಯೋಜಿಸಲಾಗಿತ್ತು, ಈ ಶುಭ ಕಾರ್ಯಕ್ರಮಕ್ಕೆ ಎಲ್ಲ ಸಿದ್ದತೆಗಳು ನಡೆದಿತ್ತು ಅದರಂತೆ ಸೋಮವಾರ ಮದುವೆಯ ಮೊದಲ ಶಾಸ್ತ್ರವಾದ ಹಳದಿ ಶಾಸ್ತ್ರ ನಡೆಯುತ್ತಿತ್ತು ಈ ವೇಳೆ ಹಳದಿ ಸಂಭ್ರಮದಲ್ಲಿದ್ದ ವರ ಅಲ್ಲೇ ಇದ್ದ ಈಜುಕೊಳದ ಬಳಿ ನಡೆದುಕೊಂಡು ಹೋಗಿದ್ದಾನೆ ಅಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಿದ್ದ ಕಬ್ಬಿಣದ ಕಂಬವನ್ನು ಮುಟ್ಟಿದ್ದಾನೆ ಈ ವೇಳೆ ಆತನಿಗೆ ಒಮ್ಮೆಲೇ ವಿದ್ಯುತ್ ಶಾಕ್ ಹೊಡೆದು ಕುಸಿದು ಬಿದ್ದಿದ್ದಾನೆ ಇದನ್ನು ಕಂಡ ಅಲ್ಲಿದ್ದವರು ಓಡಿ ಬಂದು ಸೂರಜ್ ನನ್ನು ಉಪಚರಿಸಿದ್ದಾರೆ ಆದರೆ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದ ಸೂರಜ್ ಪ್ರಜ್ಞೆ ತಪ್ಪಿದ್ದ, ಕೂಡಲೇ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿತಾದರೂ ಅಷ್ಟೋತ್ತಿಗಾಗಲೇ ಸೂರಜ್ ಪ್ರಾಣ ಪಕ್ಷಿ ಹಾರಿಹೋಗಿತ್ತು,
ಇತ್ತ ಸೂರಜ್ ಮೃತಪಟ್ಟ ವಿಚಾರ ತಿಳಿಯುತ್ತಲೇ ಕುಟುಂಬದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ ಅಷ್ಟು ಮಾತ್ರವಲ್ಲದೆ ವಧುವಿನ ಮನೆಯಲ್ಲೂ ನೀರವ ಮೌನ ಆವರಿಸಿದೆ.
ಮದುವೆಯ ಸಂಭ್ರಮದಲ್ಲಿದ್ದ ಎರಡೂ ಮನೆಯಲ್ಲೂ ನೀರವ ಮೌನ, ಬದುಕಿ ಬಾಳಬೇಕಿದ್ದ ಜೀವ ಸಣ್ಣ ವಯಸ್ಸಿನಲ್ಲೇ ಕೊನೆಗೊಂಡಿದ್ದು ವಿಧಿಯ ವಿಪರ್ಯಾಸವೇ ಸರಿ. ಘಟನೆ ಸಂಬಂಧ ನಂಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Just hours before tying the nuptial knot, a 30-year-old man died of an electric shock during his ‘haldi’ ceremony in a hotel here on Tuesday, police said.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 11:31 am
Mangalore Correspondent
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm