ಬ್ರೇಕಿಂಗ್ ನ್ಯೂಸ್
26-04-24 02:58 pm HK News Desk ದೇಶ - ವಿದೇಶ
ಬಿಹಾರ, ಏ 26: ಬೆಂಕಿ ಅನಾಹುತದಿಂದ ಮದುವೆ ಮನೆ ಅಕ್ಷರಶಃ ಶೋಕದ ಮನೆಯಾಗಿ ಮಾರ್ಪಟ್ಟಿರುವ ಘಟನೆ ನಡೆದಿದೆ. ಮದುವೆ ಮೆರವಣಿಗೆ ಸಂಭ್ರಮದಲ್ಲಿ ಹಚ್ಚಿದ್ದ ಪಟಾಕಿ ಕಿಡಿಯಿಂದ ಆದ ಅಗ್ನಿ ಅನಾಹುತದಲ್ಲಿ ಮೂರು ಜಾನುವಾರು, ನವ ದಂಪತಿ ಸೇರಿ ಆರು ಮಂದಿ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ದರ್ಬಾಂಗ್ನಲ್ಲಿ ನಡೆದಿದೆ.
ಗುರುವಾರ ರಾತ್ರಿ ಮದುವೆ ಮೆರವಣಿಗೆ ಹಿನ್ನೆಲೆ ಸಂಭ್ರಮದಿಂದ ಪಟಾಕಿ ಹೊಡೆಯಲಾಗಿದ್ದು, ಈ ಬೆಂಕಿ ಕಿಡಿ ಸಿಲಿಂಡರ್ ಮತ್ತು ಡೀಸೆಲ್ ಸಂಗ್ರಹಕ್ಕೆ ಬಿದ್ದ ಪರಿಣಾಮ ಈ ಭಾರಿ ಅನಾಹುತ ಸಂಭವಿಸಿದೆ. ಘಟನೆ ಬೆಳಕಿಗೆ ಬಂದಾಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಅಗ್ನಿ ಶಾಮಕದಳ ಕೂಡ ಬೆಂಕಿ ಆರಿಸುವ ಯತ್ನದಲ್ಲಿ ನಿರತರವಾಯಿತು.
ಬಹೇರಾ ಪೊಲೀಸ್ ಠಾಣೆಯ ಅಂತೋರ್ ಗ್ರಾಮದಲ್ಲಿ ಛಗನ್ ಪಾಸ್ವಾನ್ ಅವರ ಮಗಳ ಮದುವೆ ಸಮಾರಂಭ ಅದ್ದೂರಿಯಾಗಿ ಏರ್ಪಡಿಸಲಾಗಿತ್ತು. ಸಮಾರಂಭದ ಹಿನ್ನೆಲೆ ಮನೆಯ ಪಕ್ಕದಲ್ಲಿ ಅತಿಥಿಗಳು ತಂಗಲು ಮತ್ತು ಊಟದ ವ್ಯವಸ್ಥೆ ಮಾಡಲಾಗಿತ್ತು. ಗುರುವಾರ ರಾತ್ರಿ ಮದುವೆ ದಿಬ್ಬಣ ಬಂದಿದ್ದು, ಅದ್ದೂರಿಯಾಗಿ ಸಂಭ್ರಮಾಚರಣೆ ಸಾಗಿತ್ತು. ಈ ವೇಳೆ ಪಟಾಕಿ ಹೊಡೆಯಾಗಿದ್ದು, ಇದರ ಕಿಡಿ ಹಾಕಿದ್ದ ಶಾಮೀಯಾನದ ಮೇಲೆ ಬಿದ್ದ ಪರಿಣಾಮ ಇಡೀ ಟೆಂಟ್ ಹೊತ್ತಿ ಉರಿದಿದೆ. ಈ ವೇಳೆ ಅಲ್ಲಿಯೇ ಇದ್ದ ಸಿಲಿಂಡರ್ ಮತ್ತು ಡೀಸೆಲ್ ಸಂಗ್ರಹಕ್ಕೂ ಕಿಡಿ ತಗುಲಿದ್ದು, ಭಾರೀ ಅನಾಹುತ ಸಂಭವಿಸಿತು. ನವ ದಂಪತಿ ಸೇರಿ 6 ಮಂದಿ ಸಜೀವ ದಹನ ಆಗಿದ್ದಾರೆ.
ದುರ್ಘಟನೆ ತಿಳಿದಾಕ್ಷಣ ಗ್ರಾಮಸ್ಥರು ಆಗಮಿಸಿ ಬೆಂಕಿ ನಿಯಂತ್ರಿಸಲು ಹರಸಾಹಸ ಮಾಡಿದರು. ಆದರೆ, ಸಿಲಿಂಡರ್ ಮತ್ತು ಡೀಸೆಲ್ ಗೆ ಕಿಡಿ ತಗುಲಿದ ಹಿನ್ನಲೆ ಬೆಂಕಿ ಕೆನ್ನಾಲಿಗೆ ಚಾಚಿತು. ಇದರಿಂದ ಮೂರು ಜಾನುವಾರು ಸೇರಿದಂತೆ 6 ಮಂದಿಯನ್ನ ರಕ್ಷಿಸುವ ಯತ್ನವೂ ವಿಫಲವಾಯಿತು.
At least six people were killed and six others injured after a cylinder exploded during a wedding ceremony in Bihar’s Darbhanga on Thursday night, police said on Friday. The incident took place after a major blaze erupted due to bursting fireworks at the wedding in Antor village of the Bahera police station area, they said.
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm