ಬ್ರೇಕಿಂಗ್ ನ್ಯೂಸ್
27-04-24 02:20 pm HK News Desk ದೇಶ - ವಿದೇಶ
ನವದೆಹಲಿ, ಎ.27: ನ್ಯಾಯಾಂಗ ಬಂಧನಕ್ಕೀಡಾಗಿ ಜೈಲಿನಲ್ಲಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದೆ ಅರವಿಂದ್ ಕೇಜ್ರಿವಾಲ್ ಅಧಿಕಾರಕ್ಕೆ ಅಂಟಿಕೊಂಡಿದ್ದಾರೆ. ಅವರಿಗೆ ರಾಷ್ಟ್ರೀಯ, ಜನಹಿತಕ್ಕಿಂತ ವೈಯಕ್ತಿಕ ಹಿತಾಸಕ್ತಿಯೇ ಮುಖ್ಯವಾಗಿದೆ ಎಂದು ಅವರನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಶಾಲೆಗಳಲ್ಲಿ ಪಠ್ಯಪುಸ್ತಕ ಮತ್ತು ಸಮವಸ್ತ್ರ ಲಭ್ಯತೆಯಿಲ್ಲದ ವಿಚಾರದಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಸರಕಾರವನ್ನು ತರಾಟೆಗೆತ್ತಿಕೊಂಡಿದೆ. ದೆಹಲಿ ನಗರಾಭಿವೃದ್ಧಿ ಸಚಿವ ಸೌರಭ್ ಭಾರದ್ವಾಜ್ ವಿದ್ಯಾರ್ಥಿಗಳ ಕಷ್ಟ ನೋಡಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ, ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿದ್ದು ಆಡಳಿತ ನಡೆಸುತ್ತಿರುವುದರಿಂದ ದೆಹಲಿಯ ವಿದ್ಯಾರ್ಥಿಗಳು ಮತ್ತು ಜನರು ತೊಂದರೆ ಎದುರಿಸುತ್ತಿದ್ದಾರೆ ಎಂದು ಕೋರ್ಟ್ ಛೀಮಾರಿ ಹಾಕಿದೆ.

5 ಕೋಟಿಗೂ ಹೆಚ್ಚು ಮೌಲ್ಯದ ಸರ್ಕಾರಿ ಗುತ್ತಿಗೆಗಳನ್ನು ಹಂಚಿಕೆ ಮಾಡಲು ದೆಹಲಿ ಸರ್ಕಾರದ ಸ್ಥಾಯಿ ಸಮಿತಿಯ ಅನುಮೋದನೆ ಅಗತ್ಯವಿದೆ. ಆದರೆ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವ ಕಾರಣ ಈ ಸಮಿತಿ ಸಕ್ರಿಯವಾಗಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳ ಸಮವಸ್ತ್ರ, ಪುಸ್ತಕ, ಶಾಲಾ ಬ್ಯಾಗ್, ಲೇಖನ ಸಾಮಗ್ರಿಗಳಿಗೆ ಸಂಬಂಧಿಸಿದ ಗುತ್ತಿಗೆ ಹಂಚಿಕೆ ಸಾಧ್ಯವಾಗುತ್ತಿಲ್ಲ ಎಂದು ಅರ್ಜಿದಾರರ ಪರ ವಕೀಲರು ಕೋರ್ಟ್ ಗಮನಕ್ಕೆ ತಂದಿದ್ದಾರೆ. ದೆಹಲಿ ಸರ್ಕಾರಕ್ಕೆ ಸೇರಿದ ಈ ವಿಚಾರದಲ್ಲಿ ನೇರವಾಗಿ ಮಧ್ಯಪ್ರವೇಶ ಮಾಡುವ ಅಧಿಕಾರ ಕೋರ್ಟಿಗಿಲ್ಲ. ಸರ್ಕಾರ ಮಾಡಬೇಕಾದ್ದನ್ನು ಮಾಡಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.
The Delhi High Court on Friday came down heavily on Arvind Kejriwal for not resigning as the Chief Minister. The court said that Arvind Kejriwal put personal interest over national interest by not resigning as Chief Minister after his arrest.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm