ಬ್ರೇಕಿಂಗ್ ನ್ಯೂಸ್
27-04-24 02:20 pm HK News Desk ದೇಶ - ವಿದೇಶ
ನವದೆಹಲಿ, ಎ.27: ನ್ಯಾಯಾಂಗ ಬಂಧನಕ್ಕೀಡಾಗಿ ಜೈಲಿನಲ್ಲಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದೆ ಅರವಿಂದ್ ಕೇಜ್ರಿವಾಲ್ ಅಧಿಕಾರಕ್ಕೆ ಅಂಟಿಕೊಂಡಿದ್ದಾರೆ. ಅವರಿಗೆ ರಾಷ್ಟ್ರೀಯ, ಜನಹಿತಕ್ಕಿಂತ ವೈಯಕ್ತಿಕ ಹಿತಾಸಕ್ತಿಯೇ ಮುಖ್ಯವಾಗಿದೆ ಎಂದು ಅವರನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಶಾಲೆಗಳಲ್ಲಿ ಪಠ್ಯಪುಸ್ತಕ ಮತ್ತು ಸಮವಸ್ತ್ರ ಲಭ್ಯತೆಯಿಲ್ಲದ ವಿಚಾರದಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಸರಕಾರವನ್ನು ತರಾಟೆಗೆತ್ತಿಕೊಂಡಿದೆ. ದೆಹಲಿ ನಗರಾಭಿವೃದ್ಧಿ ಸಚಿವ ಸೌರಭ್ ಭಾರದ್ವಾಜ್ ವಿದ್ಯಾರ್ಥಿಗಳ ಕಷ್ಟ ನೋಡಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ, ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿದ್ದು ಆಡಳಿತ ನಡೆಸುತ್ತಿರುವುದರಿಂದ ದೆಹಲಿಯ ವಿದ್ಯಾರ್ಥಿಗಳು ಮತ್ತು ಜನರು ತೊಂದರೆ ಎದುರಿಸುತ್ತಿದ್ದಾರೆ ಎಂದು ಕೋರ್ಟ್ ಛೀಮಾರಿ ಹಾಕಿದೆ.

5 ಕೋಟಿಗೂ ಹೆಚ್ಚು ಮೌಲ್ಯದ ಸರ್ಕಾರಿ ಗುತ್ತಿಗೆಗಳನ್ನು ಹಂಚಿಕೆ ಮಾಡಲು ದೆಹಲಿ ಸರ್ಕಾರದ ಸ್ಥಾಯಿ ಸಮಿತಿಯ ಅನುಮೋದನೆ ಅಗತ್ಯವಿದೆ. ಆದರೆ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವ ಕಾರಣ ಈ ಸಮಿತಿ ಸಕ್ರಿಯವಾಗಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳ ಸಮವಸ್ತ್ರ, ಪುಸ್ತಕ, ಶಾಲಾ ಬ್ಯಾಗ್, ಲೇಖನ ಸಾಮಗ್ರಿಗಳಿಗೆ ಸಂಬಂಧಿಸಿದ ಗುತ್ತಿಗೆ ಹಂಚಿಕೆ ಸಾಧ್ಯವಾಗುತ್ತಿಲ್ಲ ಎಂದು ಅರ್ಜಿದಾರರ ಪರ ವಕೀಲರು ಕೋರ್ಟ್ ಗಮನಕ್ಕೆ ತಂದಿದ್ದಾರೆ. ದೆಹಲಿ ಸರ್ಕಾರಕ್ಕೆ ಸೇರಿದ ಈ ವಿಚಾರದಲ್ಲಿ ನೇರವಾಗಿ ಮಧ್ಯಪ್ರವೇಶ ಮಾಡುವ ಅಧಿಕಾರ ಕೋರ್ಟಿಗಿಲ್ಲ. ಸರ್ಕಾರ ಮಾಡಬೇಕಾದ್ದನ್ನು ಮಾಡಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.
The Delhi High Court on Friday came down heavily on Arvind Kejriwal for not resigning as the Chief Minister. The court said that Arvind Kejriwal put personal interest over national interest by not resigning as Chief Minister after his arrest.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm