ಬ್ರೇಕಿಂಗ್ ನ್ಯೂಸ್
27-04-24 05:46 pm HK News Desk ದೇಶ - ವಿದೇಶ
ನವದೆಹಲಿ, ಎ.27: ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ, ಕರ್ನಾಟಕ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.
ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಎ.26ರ ಶುಕ್ರವಾರ ಮತದಾನ ನಡೆದಿತ್ತು. ತಿಂಗಳ ಹಿಂದೆಯೇ ರಾಜ್ಯದ ಕಾಂಗ್ರೆಸ್ ಸರ್ಕಾರ, ಬರ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ್ದ ಕೋರ್ಟ್, ಬರ ಪರಿಹಾರ ವಿಚಾರದಲ್ಲಿ ವಿಳಂಬ ತೋರಿದ್ದಕ್ಕೆ ಛೀಮಾರಿ ಹಾಕಿತ್ತು. ಕರ್ನಾಟಕದಲ್ಲಿ ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ತೀವ್ರ ಬರಗಾಲ ಉಂಟಾಗಿದ್ದರಿಂದ 2023ರ ಸೆಪ್ಟೆಂಬರ್ನಲ್ಲಿ ರಾಜ್ಯ ಸರ್ಕಾರ ಬರ ಪರಿಹಾರಕ್ಕಾಗಿ 18,172 ಕೋಟಿ ಹಣದ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ತಿಂಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜ್ಯದ ಸಿಎಂ ಸಿದ್ದರಾಮಯ್ಯ ಟೀಕಾ ಪ್ರಹಾರ ನಡೆಸುತ್ತಿದ್ದರು.

ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಆದೇಶ ಮಾಡಲಾಗಿತ್ತು. ಕಳೆದ ವಾರ ಕೇಂದ್ರ ಸರ್ಕಾರದ ಪರ ವಕೀಲರು ಪರಿಹಾರ ಬಿಡುಗಡೆ ಮಾಡುವುದಾಗಿ ಕೋರ್ಟ್ನಲ್ಲಿ ಒಪ್ಪಿಕೊಂಡಿದ್ದರು. ಅದರಂತೆ ಕೇಂದ್ರ ಸರ್ಕಾರ ಚುನಾವಣೆ ನಡುವಲ್ಲೇ ಬರ ಪರಿಹಾರ ಘೋಷಣೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂ. ಪರಿಹಾರವನ್ನು ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಘೋಷಿಸಿದೆ.
The Centre has released Rs 3,454 crore to Karnataka to take up its drought relief works.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm