ಬ್ರೇಕಿಂಗ್ ನ್ಯೂಸ್
27-04-24 05:46 pm HK News Desk ದೇಶ - ವಿದೇಶ
ನವದೆಹಲಿ, ಎ.27: ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ, ಕರ್ನಾಟಕ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.
ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಎ.26ರ ಶುಕ್ರವಾರ ಮತದಾನ ನಡೆದಿತ್ತು. ತಿಂಗಳ ಹಿಂದೆಯೇ ರಾಜ್ಯದ ಕಾಂಗ್ರೆಸ್ ಸರ್ಕಾರ, ಬರ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ್ದ ಕೋರ್ಟ್, ಬರ ಪರಿಹಾರ ವಿಚಾರದಲ್ಲಿ ವಿಳಂಬ ತೋರಿದ್ದಕ್ಕೆ ಛೀಮಾರಿ ಹಾಕಿತ್ತು. ಕರ್ನಾಟಕದಲ್ಲಿ ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ತೀವ್ರ ಬರಗಾಲ ಉಂಟಾಗಿದ್ದರಿಂದ 2023ರ ಸೆಪ್ಟೆಂಬರ್ನಲ್ಲಿ ರಾಜ್ಯ ಸರ್ಕಾರ ಬರ ಪರಿಹಾರಕ್ಕಾಗಿ 18,172 ಕೋಟಿ ಹಣದ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ತಿಂಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜ್ಯದ ಸಿಎಂ ಸಿದ್ದರಾಮಯ್ಯ ಟೀಕಾ ಪ್ರಹಾರ ನಡೆಸುತ್ತಿದ್ದರು.

ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಆದೇಶ ಮಾಡಲಾಗಿತ್ತು. ಕಳೆದ ವಾರ ಕೇಂದ್ರ ಸರ್ಕಾರದ ಪರ ವಕೀಲರು ಪರಿಹಾರ ಬಿಡುಗಡೆ ಮಾಡುವುದಾಗಿ ಕೋರ್ಟ್ನಲ್ಲಿ ಒಪ್ಪಿಕೊಂಡಿದ್ದರು. ಅದರಂತೆ ಕೇಂದ್ರ ಸರ್ಕಾರ ಚುನಾವಣೆ ನಡುವಲ್ಲೇ ಬರ ಪರಿಹಾರ ಘೋಷಣೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂ. ಪರಿಹಾರವನ್ನು ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಘೋಷಿಸಿದೆ.
The Centre has released Rs 3,454 crore to Karnataka to take up its drought relief works.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm