ಬ್ರೇಕಿಂಗ್ ನ್ಯೂಸ್
28-04-24 10:51 am HK News Desk ದೇಶ - ವಿದೇಶ
ನವದೆಹಲಿ, ಏ.28: ಅರ್ಜೆಂಟೀನಾದ ಬ್ಯೂನಸ್ ಐರಿಸ್ ಪ್ರಾಂತ್ಯದ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ 60 ವರ್ಷದ ಮಹಿಳೆಯೊಬ್ಬರು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ವೃತ್ತಿಯಲ್ಲಿ ಪತ್ರಕರ್ತೆ, ವಕೀಲರಾದ 'ಅಲೆಜಾಂಡ್ರಾ ಮಾರಿಸಾ ರೊಡ್ರಿಗಸ್' ತನ್ನ 60ನೇ ವಯಸ್ಸಿನಲ್ಲಿ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆಯನ್ನು ಗೆದ್ದ ಮೊದಲ ಮಹಿಳೆ ಎಂಬ ದಾಖಲೆಯನ್ನೂ ಬರೆದಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ವಿಡಿಯೊಗಳ ಪ್ರಕಾರ, ಈ ಗೆಲುವಿನೊಂದಿಗೆ, ರೊಡ್ರಿಗಸ್ 2024ರ ಮೇ ತಿಂಗಳಲ್ಲಿ ಮಿಸ್ ಯೂನಿವರ್ಸ್ ಅರ್ಜೆಂಟೀನಾ ರಾಷ್ಟ್ರೀಯ ಆಯ್ಕೆಯಲ್ಲಿ ಬ್ಯೂನಸ್ ಐರಿಸ್ ಅನ್ನು ಪ್ರತಿನಿಧಿಸಲಿದ್ದಾರೆ. ಅಲ್ಲಿ ಗೆದ್ದರೆ ಮಿಸ್ ಯೂನಿವರ್ಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗುತ್ತಾರೆ. ಈ ಸ್ಪರ್ಧೆ 2024ರ ಸೆಪ್ಟೆಂಬರ್ 28ರಂದು ಮೆಕ್ಸಿಕೋದಲ್ಲಿ ನಡೆಯಲಿದೆ.




ಸೌಂದರ್ಯ ಸ್ಪರ್ಧೆಯ ಈ ಹೊಸ ಮಾದರಿಯಲ್ಲಿ ಭಾಗವಹಿಸಿ ನಾನು ರೋಮಾಂಚಿತಗೊಂಡಿದ್ದೇನೆ. ಏಕೆಂದರೆ ಮಹಿಳೆಯರ ಕೇವಲ ದೈಹಿಕ ಸೌಂದರ್ಯ ಮಾತ್ರವಲ್ಲ, ಮತ್ತೊಂದು ಮೌಲ್ಯಗಳನ್ನು ಗೌರವಿಸುವ ಹೊಸ ಮಾದರಿಯನ್ನು ಆರಂಭಿಸುತ್ತಿದ್ದೇವೆ' ಎಂದು ಗೆಲುವಿನ ಬಳಿಕ ಮಾಧ್ಯಮಗಳಿಗೆ ತಿಳಿಸಿದರು.
ಮಿಸ್ ಯೂನಿವರ್ಸ್ ಸಂಸ್ಥೆ ಕಳೆದ ವರ್ಷ ಸ್ಪರ್ಧಿಗಳ ವಯಸ್ಸಿನ ಮಿತಿಯನ್ನು ತೆಗೆದುಹಾಕಿದೆ. 18 ವರ್ಷ ಮೇಲ್ಪಟ್ಟ ಯಾವುದೇ ಮಹಿಳೆ ಸ್ಪರ್ಧಿಸಲು ಅರ್ಹರಾಗಿರುತ್ತಾರೆ ಎಂದು ಹೇಳಿದೆ. ಇದಕ್ಕೂ ಮೊದಲು 18-28 ವರ್ಷ ವಯಸ್ಸಿನ ಮಹಿಳೆಯರು ಮಾತ್ರ ಸ್ಪರ್ಧೆಯಲ್ಲಿ ಭಾಗವಹಿಸಬಹುದಿತ್ತು.
In a first, a 60-year-old lawyer scripted history after she won the Miss Universe Buenos Aires beauty pageant. Alejandra Rodríguez contested with 34 others, ranging in age from 18 to 73, to win the title.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm