ಬ್ರೇಕಿಂಗ್ ನ್ಯೂಸ್
04-05-24 03:27 pm HK News Desk ದೇಶ - ವಿದೇಶ
ನವದೆಹಲಿ, ಮೇ.4: ಸೂರತ್ ಮತ್ತು ಇಂದೋರ್ ನಂತರ ಒಡಿಶಾದ ಪುರಿ ಲೋಕಸಭೆ ಕ್ಷೇತ್ರದಲ್ಲಿಯೂ ಕಾಂಗ್ರೆಸಿಗೆ ಭಾರಿ ಶಾಕ್ ಉಂಟಾಗಿದೆ. ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಚರಿತ ಮೊಹಾಂತಿ ಅವರು ಪಕ್ಷ ಹಣ ನೀಡಿಲ್ಲ ಎಂದು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸುಚರಿತ ಮೊಹಾಂತಿ ಅವರಿಗೆ ಟಿಕೆಟ್ ನೀಡಿತ್ತು. ಆದರೆ ಸುಚರಿತ ಅವರು ಟಿಕೆಟ್ ವಾಪಸ್ ನೀಡಿದ್ದು ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ಇಲ್ಲಿ ಬಿಜೆಪಿಯ ಹಿರಿಯ ನಾಯಕ ಸಂಭಿತ್ ಪಾತ್ರಾ ಸ್ಪರ್ಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದರಿಂದ ಬಿಜೆಪಿ ಹಾದಿ ಸುಲಭವಾಗಿದೆ.
ಇದಕ್ಕೂ ಮೊದಲು ಗುಜರಾತಿನ ಸೂರತ್ ಮತ್ತು ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ತಮ್ಮ ನಾಮಪತ್ರ ಹಿಂಪಡೆದು ಪಕ್ಷದ ನಾಯಕರಿಗೆ ಶಾಕ್ ನೀಡಿದ್ದರು. ಇಂದೋರ್ ಕಾಂಗ್ರೆಸ್ ಅಭ್ಯರ್ಥಿ ನಂತರ ಬಿಜೆಪಿ ಸೇರಿದ್ದರೆ, ಅತ್ತ ಸೂರತ್ನಲ್ಲಿ ಬೇರಾವುದೇ ಅಭ್ಯರ್ಥಿ ಇಲ್ಲದೇ ಇದ್ದುದರಿಂದ ಬಿಜೆಪಿ ಅಭ್ಯರ್ಥಿ ಜಯಶಾಲಿ ಎಂದು ಘೋಷಿಸಲಾಗಿತ್ತು.
ಸುಚರಿತ ಮೊಹಾಂತಿ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಪತ್ರ ಬರೆದು, ಚುನಾವಣೆಗೆ ಸ್ಪರ್ಧಿಸಲು ಪಕ್ಷ ನೀಡಿರುವ ಮೊತ್ತವನ್ನು ತಮಗೆ ನೀಡಿಲ್ಲ ಎಂದಿದ್ದಾರೆ. ಹಣದ ಕೊರತೆಯಿಂದ ಪ್ರಚಾರಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಮೇ 25ರಂದು ಪುರಿ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಅದಕ್ಕೂ ಮುನ್ನವೇ ಕಾಂಗ್ರೆಸ್ಗೆ ಹೊಡೆತ ಬಿದ್ದಿದೆ.
In a setback for Congress, its Puri Lok Sabha candidate Sucharita Mohanty has declined to contest, citing little financial support from the cash-strapped party.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm