ಬ್ರೇಕಿಂಗ್ ನ್ಯೂಸ್
04-05-24 03:27 pm HK News Desk ದೇಶ - ವಿದೇಶ
ನವದೆಹಲಿ, ಮೇ.4: ಸೂರತ್ ಮತ್ತು ಇಂದೋರ್ ನಂತರ ಒಡಿಶಾದ ಪುರಿ ಲೋಕಸಭೆ ಕ್ಷೇತ್ರದಲ್ಲಿಯೂ ಕಾಂಗ್ರೆಸಿಗೆ ಭಾರಿ ಶಾಕ್ ಉಂಟಾಗಿದೆ. ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಚರಿತ ಮೊಹಾಂತಿ ಅವರು ಪಕ್ಷ ಹಣ ನೀಡಿಲ್ಲ ಎಂದು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸುಚರಿತ ಮೊಹಾಂತಿ ಅವರಿಗೆ ಟಿಕೆಟ್ ನೀಡಿತ್ತು. ಆದರೆ ಸುಚರಿತ ಅವರು ಟಿಕೆಟ್ ವಾಪಸ್ ನೀಡಿದ್ದು ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ಇಲ್ಲಿ ಬಿಜೆಪಿಯ ಹಿರಿಯ ನಾಯಕ ಸಂಭಿತ್ ಪಾತ್ರಾ ಸ್ಪರ್ಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದರಿಂದ ಬಿಜೆಪಿ ಹಾದಿ ಸುಲಭವಾಗಿದೆ.
ಇದಕ್ಕೂ ಮೊದಲು ಗುಜರಾತಿನ ಸೂರತ್ ಮತ್ತು ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ತಮ್ಮ ನಾಮಪತ್ರ ಹಿಂಪಡೆದು ಪಕ್ಷದ ನಾಯಕರಿಗೆ ಶಾಕ್ ನೀಡಿದ್ದರು. ಇಂದೋರ್ ಕಾಂಗ್ರೆಸ್ ಅಭ್ಯರ್ಥಿ ನಂತರ ಬಿಜೆಪಿ ಸೇರಿದ್ದರೆ, ಅತ್ತ ಸೂರತ್ನಲ್ಲಿ ಬೇರಾವುದೇ ಅಭ್ಯರ್ಥಿ ಇಲ್ಲದೇ ಇದ್ದುದರಿಂದ ಬಿಜೆಪಿ ಅಭ್ಯರ್ಥಿ ಜಯಶಾಲಿ ಎಂದು ಘೋಷಿಸಲಾಗಿತ್ತು.
ಸುಚರಿತ ಮೊಹಾಂತಿ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಪತ್ರ ಬರೆದು, ಚುನಾವಣೆಗೆ ಸ್ಪರ್ಧಿಸಲು ಪಕ್ಷ ನೀಡಿರುವ ಮೊತ್ತವನ್ನು ತಮಗೆ ನೀಡಿಲ್ಲ ಎಂದಿದ್ದಾರೆ. ಹಣದ ಕೊರತೆಯಿಂದ ಪ್ರಚಾರಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಮೇ 25ರಂದು ಪುರಿ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಅದಕ್ಕೂ ಮುನ್ನವೇ ಕಾಂಗ್ರೆಸ್ಗೆ ಹೊಡೆತ ಬಿದ್ದಿದೆ.
In a setback for Congress, its Puri Lok Sabha candidate Sucharita Mohanty has declined to contest, citing little financial support from the cash-strapped party.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm