ಬ್ರೇಕಿಂಗ್ ನ್ಯೂಸ್
08-05-24 10:44 am HK News Desk ದೇಶ - ವಿದೇಶ
ಹೈದರಾಬಾದ್, ಮೇ 8: ಹೈದರಾಬಾದ್ನಲ್ಲಿ ಮಂಗಳವಾರ ಸಂಜೆ ಸುರಿದ ಭಾರೀ ಮಳೆಯಿಂದ ಬಾಚುಪಲ್ಲಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್ಮೆಂಟ್ನ ತಡೆಗೋಡೆ ಕುಸಿದು 4 ವರ್ಷದ ಮಗು ಸೇರಿದಂತೆ ಏಳು ಮಂದಿ ದುರಂತ ಸಾವಿಗೀಡಾಗಿದ್ದಾರೆ.
ಮೃತರನ್ನು ಒಡಿಶಾ ಮತ್ತು ಛತ್ತೀಸ್ಗಢ ನಿವಾಸಿಗಳೆಂದು ಗುರುತಿಸಲಾಗಿದೆ.

ಈ ಘಟನೆ ರೇಣುಕಾ ಎಲ್ಲಮ್ಮ ಕಾಲನಿಯಲ್ಲಿ ನಡೆದಿದೆ. ಅಪಾರ್ಟ್ಮೆಂಟ್ನ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರು ತಾತ್ಕಾಲಿಕ ಶೆಡ್ನಲ್ಲಿ ವಾಸಿಸುತ್ತಿದ್ದರು. ಭಾರಿ ಮಳೆಗೆ ನಿರ್ಮಾಣ ಹಂತದಲ್ಲಿದ್ದ ಗೋಡೆ, ಶೆಡ್ ಮೇಲೆ ಕುಸಿದು ಅವಘಡ ಸಂಭವಿಸಿದೆ. ಇದರಿಂದ ಮಗು ಸೇರಿದಂತೆ ಶೆಡ್ನಲ್ಲಿದ್ದ ಏಳು ಮಂದಿ ಮೃತಪಟ್ಟಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಜಿಎಚ್ಎಂಸಿ ಮತ್ತು ಎನ್ಡಿಆರ್ಎಫ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದರು. ಜೆಸಿಬಿಗಳ ಸಹಾಯದಿಂದ ಮೃತದೇಹಗಳನ್ನು ಹೊರ ತೆಗೆಯಲಾಯಿತು.
ಮೃತರನ್ನು ರಾಜು (25), ರಾಮ್ ಯಾದವ್ (34), ಗೀತಾ (32), ಹಿಮಾಂಶು (4), ಖುಷಿ, ತಿರುಪತಿ ರಾವ್ (20) ಮತ್ತು ಶಂಕರ್ (22) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಒಡಿಶಾ ಮತ್ತು ಛತ್ತೀಸ್ಗಢದಿಂದ ಉದ್ಯೋಗಕ್ಕಾಗಿ ಹೈದರಾಬಾದ್ಗೆ ಬಂದಿದ್ದರು ಎಂದು ತಿಳಿದುಬಂದಿದೆ.
ರೈಸ್ ಡೆವಲಪರ್ಸ್ ನಿರ್ಮಾಣದ ಆವರಣದಲ್ಲಿ ಈ ಘಟನೆ ನಡೆದಿದೆ. ಅಪಘಾತದ ವಿಷಯ ತಿಳಿದ ಕುಕ್ಕಟಪಲ್ಲಿ ಎಸಿಪಿ ಶ್ರೀನಿವಾಸ ರಾವ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಂದಹಾಗೆ ಮಂಗಳವಾರ ತೆಲಂಗಾಣದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಸುರಿದಿದ್ದು, ಕೆಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಹೈದರಾಬಾದ್ ನಗರದ ಹಲವೆಡೆ ಜಲಾವೃತಗೊಂಡು ಸಂಚಾರ ದಟ್ಟಣೆ ಉಂಟಾಗಿದೆ. ಮಳೆ ಮತ್ತು ಗುಡುಗು ಸಹಿತ ಮಳೆಯಿಂದಾಗಿ ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿದ್ದು, ಮರಗಳು ಧರೆಗುರುಳಿವೆ. ತೆಲಂಗಾಣ ರಾಜ್ಯ ಅಭಿವೃದ್ಧಿ ಯೋಜನಾ ಸೊಸೈಟಿಯ ಪ್ರಕಾರ, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಹೆಚ್ಎಂಸಿ) ಕೇಂದ್ರ ಕಚೇರಿಯ ಸ್ಥಳದಲ್ಲಿ ಮಂಗಳವಾರ ಸಂಜೆ 6 ಗಂಟೆಗೆ 84.5 ಮಿಮೀ ಮಳೆಯಾಗಿದೆ.
As many as seven persons, including a four-year-old child, were killed when a retaining wall at an under-construction apartment came crashing down due to heavy rain in Bachupally area here, police said on Wednesday. According to Bachupally police, the victims were migrant workers who belonged to Odisha and Chhattisgarh and the incident happened on Tuesday evening.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm