ಬ್ರೇಕಿಂಗ್ ನ್ಯೂಸ್
08-05-24 11:59 am HK News Desk ದೇಶ - ವಿದೇಶ
ನವದೆಹಲಿ, ಮೇ 8: ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮ ಆಗುತ್ತೆ ಎಂಬ ದೃಢೀಕರಣದ ಬಗ್ಗೆ ತೀವ್ರ ಆಕ್ರೋಶ ಕೇಳಿಬರುತ್ತಿದ್ದಂತೆ ಲಸಿಕೆಯ ಜನಕ ಬ್ರಿಟನ್ ಮೂಲದ ಆಸ್ಟ್ರಾ ಜೆನೆಕಾ ಕಂಪನಿ, ಲಸಿಕೆಯನ್ನು ಜಾಗತಿಕವಾಗಿ ಹಿಂಪಡೆಯುತ್ತಿರುವುದಾಗಿ ಘೋಷಣೆ ಮಾಡಿದೆ.
ಇತ್ತೀಚೆಗೆ ಕೋವಿಶೀಲ್ಡ್ ಲಸಿಕೆಯಿಂದ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್ ಲೆಟ್ಸ್ ಕಡಿಮೆಯಾಗುವ ಅಡ್ಡ ಪರಿಣಾಮದ ಬಗ್ಗೆ ಮಾತೃ ಕಂಪೆನಿ ಆಸ್ಟ್ರಾ ಜೆನೆಕಾ ಇಂಗ್ಲೆಂಡ್ ಕೋರ್ಟಿನಲ್ಲಿ ಒಪ್ಪಿಕೊಂಡಿತ್ತು. ಆಕ್ಸ್ ಫರ್ಡ್ ಯುನಿವರ್ಸಿಟಿ ಮತ್ತು ಆಸ್ಟ್ರಾ ಜೆನೆಕಾ ಕೋವಿಡ್ 19 ಸೋಂಕಿನ ವಿರುದ್ಧವಾಗಿ ಕೋವಿಶೀಲ್ಡ್ ಲಸಿಕೆಯನ್ನು ಅಭಿವೃದ್ಧಿ ಪಡಿಸಿತ್ತು. ಭಾರತದಲ್ಲಿ ಇದೇ ಲಸಿಕೆಯನ್ನು ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಕಂಪನಿ ದೊಡ್ಡ ಮಟ್ಟದಲ್ಲಿ ಮರು ತಯಾರಿ ಮಾಡಿತ್ತು.
ಭಾರತದಲ್ಲಿ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನು ದೇಶಾದ್ಯಂತ ಜನರಿಗೆ ನೀಡಲಾಗಿತ್ತು. ಆದರೆ ಲಸಿಕೆಯನ್ನು ಪಡೆದವರಿಗೆ ಅಕಾಲಿಕ ಹೃದಯಾಘಾತ ತೊಂದರೆ ಎದುರಾಗಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ವೈದ್ಯರು ಮಾತ್ರ ಲಸಿಕೆಯ ಅಡ್ಡ ಪರಿಣಾಮ ಎಂಬುದನ್ನು ಒಪ್ಪಿರಲಿಲ್ಲ. ಆನಂತರ, ಕೋವಿಶೀಲ್ಡ್ ಲಸಿಕೆಯ ವಿರುದ್ಧ ಇಂಗ್ಲೆಂಡಿನಲ್ಲಿ ಅಡ್ಡ ಪರಿಣಾಮ ಎದುರಿಸಿದವರೇ ಕೋರ್ಟ್ ಮೆಟ್ಟಿಲೇರಿದ್ದರು. ಮೂರು ವರ್ಷಗಳ ಹೋರಾಟದ ಬಳಿಕ ಲಸಿಕೆ ತಯಾರಿಸಿದ ಕಂಪನಿ, ಇದರಿಂದ ಅಡ್ಡ ಪರಿಣಾಮದ ಸಾಧ್ಯತೆಗಳಿವೆ ಎಂಬುದನ್ನು ಇತ್ತೀಚೆಗೆ ಕೋರ್ಟಿನಲ್ಲಿ ಒಪ್ಪಿಕೊಂಡಿತ್ತು. ಸಂತ್ರಸ್ತರಿಗೆ 100 ಮಿಲಿಯನ್ ಪೌಂಡ್ ಪರಿಹಾರ ನೀಡಬೇಕೆಂದು ಕೋರ್ಟಿನಲ್ಲಿ ವಾದ ಮಂಡಿಸಲಾಗಿದೆ.
ಆದರೆ, ಈಗ ಹೇಳಿಕೆ ಬಿಡುಗಡೆ ಮಾಡಿರುವ ಆಸ್ಟ್ರಾ ಜೆನೆಕಾ ಕಂಪೆನಿ, ಸದ್ಯಕ್ಕೆ ಕೋವಿಡ್ ಸೋಂಕಿಗೆ ಸುಧಾರಿತ ಮಟ್ಟದ ಲಸಿಕೆಗಳು ಮಾರುಕಟ್ಟೆಯಲ್ಲಿ ಲಭ್ಯ ಇವೆ. ಮಾರುಕಟ್ಟೆ ಎದುರಿಸಲು ಸಾಧ್ಯವಾಗದೆ ತಮ್ಮ ಲಸಿಕೆಯನ್ನು ಹಿಂದಕ್ಕೆ ಪಡೆಯುತ್ತಿರುವುದಾಗಿ ಹೇಳಿಕೊಂಡಿದೆ. ಭಾರತದಲ್ಲಿಯೂ ಲಸಿಕೆಯ ಅಡ್ಡ ಪರಿಣಾಮದಿಂದಾಗಿ ತೀವ್ರ ತೊಂದರೆಗಳನ್ನು ಎದುರಿಸಿದವರಿದ್ದಾರೆ. ಅಕಾಲಿಕವಾಗಿ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದವರಿದ್ದಾರೆ. ಇದಕ್ಕೆಲ್ಲ ಕೋವಿಶೀಲ್ಡ್ ಕಾರಣ ಎನ್ನುವ ಆರೋಪ ಕೇಳಿಬರುತ್ತಿದೆ. ಅಲ್ಲದೆ, ಅಕಾಲಿಕ ಸಾವಿಗೆ ತುತ್ತಾದವರಿಗೆ ಸರಕಾರವೇ ಪರಿಹಾರ ನೀಡಬೇಕೆಂಬ ಒತ್ತಾಯವೂ ಕೇಳಿಬರುತ್ತಿದೆ.
The pharmaceutical giant AstraZeneca's Covid-19 vaccine is being withdrawn globally after the company acknowledged in court documents that it can cause a rare and dangerous side effect. However, the pharma giant said that the vaccine is being removed from the markets for commercial reasons.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm