ಬ್ರೇಕಿಂಗ್ ನ್ಯೂಸ್
11-05-24 03:13 pm HK News Desk ದೇಶ - ವಿದೇಶ
ಭೋಪಾಲ್, ಮೇ.11: ತನ್ನ ಪುಸ್ತಕದಲ್ಲಿ ʼಬೈಬಲ್ʼ ಪದವನ್ನು ಬಳಸಿದ ಕಾರಣಕ್ಕೆ ಬಾಲಿವುಡ್ ನಟಿ ಕರೀನಾ ಕಪೂರ್ ವಿರುದ್ಧ ಮಧ್ಯ ಪ್ರದೇಶ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
2021ರಲ್ಲಿ ನಟಿ ಕರೀನಾ ಕಪೂರ್ ತಮ್ಮ ಗರ್ಭಾವಸ್ಥೆ ಕುರಿತು ಗರ್ಭಧಾರಣೆಯ ಸಮಯ ಮತ್ತು ನಿರೀಕ್ಷಿತ ತಾಯಂದಿರಿಗೆ ಸಲಹೆಗಳನ್ನು ನೀಡುವ ಪುಸ್ತಕವೊಂದನ್ನು ಬರೆದಿದ್ದರು. ಇದಕ್ಕೆ “ಕರೀನಾ ಕಪೂರ್ ಖಾನ್ಸ್ ಪ್ರೆಗ್ನೆನ್ಸಿ ಬೈಬಲ್” ಎನ್ನುವ ಟೈಟಲ್ ಇಟ್ಟಿದ್ರು.
ಪುಸ್ತಕದಲ್ಲಿನ ಬೈಬಲ್ ಪದ ಬಳಕೆಗೆ ಆಕ್ಷೇಪಿಸಿ ಜಬಲ್ಪುರ್ ನಿವಾಸಿ ಕ್ರಿಸ್ಟೋಫರ್ ಅಂಥೋನಿ ಎನ್ನುವವರು ಅರ್ಜಿ ಸಲ್ಲಿಸಿದ್ದಾರೆ. ಕರೀನಾ ಕಪೂರ್ ಖಾನ್ ಹಾಗೂ ಪುಸ್ತಕ ಮಾರಾಟಗಾರರ ವಿರುದ್ಧ ಪ್ರಕರಣ ದಾಖಲಿಸುವಂತೆ ಕ್ರಿಸ್ಟೋಫರ್ ಆಂಥೋನಿ ಒತ್ತಾಯಿಸಿದ್ದಾರೆ. ಪುಸ್ತಕದ ಶೀರ್ಷಿಕೆಯಲ್ಲಿ “ಬೈಬಲ್” ಪದವನ್ನು ಏಕೆ ಬಳಸಲಾಗಿದೆ ಎಂಬುದರ ಕುರಿತು ನ್ಯಾಯಾಲಯ ನಟಿಯಿಂದ ಪ್ರತಿಕ್ರಿಯೆ ಕೇಳಿ ನ್ಯಾ. ಗುರುಪಲ್ ಸಿಂಗ್ ಅಹ್ಲುವಾಲಿಯಾ ಅವರಿದ್ದ ಪೀಠ ನಟಿಗೆ ನೋಟಿಸ್ ಜಾರಿ ಮಾಡಿದೆ.
ಪುಸ್ತಕದಲ್ಲಿನ ʼಬೈಬಲ್ʼ ಪದ ಬಳಕೆಯು ಕ್ರಿಶ್ಚಿಯನ್ ಸಮುದಾಯದ ಭಾವನೆಗೆ ಧಕ್ಕೆ ತಂದಿದೆ ಎಂದು ಅರ್ಜಿದಾರ ಕ್ರಿಸ್ಟೋಫರ್ ಅಂಥೋನಿ ಉಲ್ಲೇಖಿಸಿದ್ದಾರೆ.
“ಬೈಬಲ್ ಪ್ರಪಂಚದಾದ್ಯಂತದ ಕ್ರಿಶ್ಚಿಯನ್ ಧರ್ಮದ ಪವಿತ್ರ ಗ್ರಂಥ. ಇದನ್ನು ಕರೀನಾ ಕಪೂರ್ ಗರ್ಭಧಾರಣೆಯನ್ನು ಬೈಬಲ್ ನೊಂದಿಗೆ ಹೋಲಿಸುವುದು ತಪ್ಪು” ಎಂದು ಕ್ರಿಸ್ಟೋಫರ್ ಹೇಳಿದ್ದಾರೆ.
ನಟಿ ತನ್ನ ಪುಸ್ತಕಕ್ಕೆ “ಅಗ್ಗದ ಪ್ರಚಾರ” ವನ್ನು (ಚೀಪ್ ಪಬ್ಲಿಸಿಟಿ) ಪಡೆಯಲು ಈ ಪದವನ್ನು ಬಳಸಿದ್ದಾರೆ ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಅರ್ಜಿದಾರರು ಮೊದಲು ನಟಿಯ ವಿರುದ್ಧ ಎಫ್ಐಆರ್ ದಾಖಲಿಸಲು ಪೊಲೀಸರನ್ನು ಸಂಪರ್ಕಿಸಿದ್ದರು ಆದರೆ ಅವರು ಪ್ರಕರಣವನ್ನು ದಾಖಲಿಸಲು ನಿರಾಕರಿಸಿದಾಗ, ನಟಿಯ ವಿರುದ್ಧ ದೂರು ದಾಖಲಿಸಲು ಕೆಳ ನ್ಯಾಯಾಲಯಕ್ಕೆ ತೆರಳಿ ಇರುವುದಾಗಿ ಹೇಳಿದ್ದಾರೆ.
ಇದಾದ ಬಳಿಕ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಅಲ್ಲಿ ʼಬೈಬಲ್ʼ ಎನ್ನುವ ಪದವು ಹೇಗೆ ಕ್ರಿಶ್ಚಿಯನ್ ಸಮುದಾಯದ ಭಾವನೆಗೆ ಹೇಗೆ ಧಕ್ಕೆ ಆಗುತ್ತದೆ ಎಂದು ಕೋರ್ಟ್ ಕೇಳಿತ್ತು. ಆದರೆ ಅದಕ್ಕೆ ಉತ್ತರಿಸಲು ಅರ್ಜಿದಾರ ವಿಫಲರಾದ ಕಾರಣಕ್ಕೆ ಅವರ ಅರ್ಜಿ ವಜಾ ಆಗಿತ್ತು. ಇದಾದ ಬಳಿಕ ಅವರು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಮೆಟ್ಟಿಲು ಏರಿದ್ದರು. ಇಲ್ಲೂ ಕೂಡ ಪರಿಹಾರ ಕಾಣದ ಹಿನ್ನೆಲೆ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ನಟಿಗೆ ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯ ಪ್ರಕ್ರಿಯೆ ಶುಲ್ಕವನ್ನು ಆರ್ಎಡಿ ಮೋಡ್ನಲ್ಲಿ ಪಾವತಿಸಲು ನೋಡಿಸ್ ನೀಡಿದ್ದು, ಇದನ್ನು ಏಳು ದಿನಗಳಲ್ಲಿ ಪಾವತಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.
The Madhya Pradesh High Court issued a notice to Bollywood actor Kareena Kapoor Khan on a petition against her new pregnancy memoir "Kareena Kapoor Khan's Pregnancy Bible." The notice was issued after an advocate approached the court against the use of the word "bible" in the book's title.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm