ಬ್ರೇಕಿಂಗ್ ನ್ಯೂಸ್
13-05-24 07:56 pm HK News Desk ದೇಶ - ವಿದೇಶ
ವಾರಾಣಸಿ, ಮೇ 13: ಬಿಹಾರದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಮುಗಿಸಿ ವಾರಾಣಸಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ಶೋ ನಡೆಸಿದರು. ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಿಂದಲೇ ಬಿಜೆಪಿ ಅಭ್ಯರ್ಥಿಯಾಗಿ ಮೋದಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್ಶೋ ನಡೆಸಿರುವ ಮೋದಿಗೆ ಅಪಾರ ಜನ ಬೆಂಬಲ ವ್ಯಕ್ತವಾಗಿದೆ. ರೋಡ್ಶೋ ಆರಂಭದಲ್ಲಿ ಅವರು ಪಂಡಿತ್ ಮದನ್ ಮೋಹನ್ ಮಾಳವಿಯಾ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ವಾರಾಣಸಿಯ ಹಾಲಿ ಸಂಸದರಾಗಿರುವ ಪ್ರಧಾನಿ ಮೋದಿ ಅವರು ಮೂರನೇ ಬಾರಿಗೆ ಇದೇ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.






ಸೋಮವಾರದ ರೋಡ್ಶೋನಲ್ಲಿ ಮೋದಿ ಅವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಾಥ್ ಕೊಟ್ಟರು. ಮೋದಿ ಅವರು ಸಾಗುವ ಹಾದಿಯುದ್ದಕ್ಕೂ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದರು. ಮೆರವಣಿಗೆಯಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮುಂಚೂಣಿಯಲ್ಲಿದ್ದರು. ಮರಾಠಿ, ಗುಜರಾತಿ, ತಮಿಳರು, ಬೆಂಗಾಲಿ, ಮಹೇಶ್ವರಿ, ಮಾರವಾಡಿಗಳು, ಪಂಜಾಬಿಗಳು ಸೇರಿದಂತೆ ಇತರೆ ಸಮುದಾಯದವರು ರೋಡ್ಶೋ ಉದ್ದಕ್ಕೂ 11 ವಲಯಗಳಲ್ಲಿ ಮೋದಿ ಅವರಿಗೆ ವಿಶೇಷ ಸ್ವಾಗತ ಕೋರಿದರು.

ಕಣ್ಣು ಹಾಯಿಸುವಷ್ಟು ದೂರದಲ್ಲೂ ಕೇಸರಿ ಧ್ವಜಗಳ, ಬಲೂನ್, ಬ್ಯಾನರ್ಗಳು ಕಾಣುತ್ತಿದ್ದವು. ವಾರಾಣಸಿಯ ಲಂಕಾ ಚೌಕದಿಂದ ಸುಮಾರು 6 ಕಿಲೋ ಮೀಟರ್ ದೂರದವರೆಗೂ ಮೋದಿ ರೋಡ್ಶೋ ನಡೆಸಿದರು. ವಾರಾಣಸಿಯಲ್ಲಿಯೇ ರಾತ್ರಿ ಉಳಿಯಲಿರುವ ಮೋದಿ, ಮಂಗಳವಾರ ಬೆಳಿಗ್ಗೆ ಗಂಗಾ ನದಿಯಲ್ಲಿ ಸ್ನಾನ ಮಾಡಿ, ಪೂಜೆ ಸಲ್ಲಿಸ ಬಳಿಕ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ.
ವಾರಾಣಸಿ ಲೋಕಸಭಾ ಕ್ಷೇತ್ರಕ್ಕೆ ಜೂನ್ 1ರಂದು ಕೊನೆಯ ಹಂತದಲ್ಲಿ ಮತದಾನ ನಿಗದಿಯಾಗಿದೆ. ಮೋದಿ ಅವರು ವಾರಾಣಸಿಯಿಂದ ಎರಡು ಬಾರಿ ಗೆಲುವು ದಾಖಲಿಸಿದ್ದು ಮೂರನೇ ಬಾರಿಯೂ ಇಲ್ಲಿಂದಲೇ ಜನಾಭಿಪ್ರಾಯಕ್ಕೆ ಮುಂದಾಗಿದ್ದಾರೆ. ಕಣದಲ್ಲಿ ಕಾಂಗ್ರೆಸ್ನಿಂದ ಉತ್ತರ ಪ್ರದೇಶ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ರಾಯ್ ಅವರನ್ನು ಕಣಕ್ಕಿಳಿಸಿದೆ.
The streets of Varanasi are set to witness a spectacle on Monday evening for a roadshow by Prime Minister Narendra Modi, who is poised to file his nomination for a third consecutive term from the parliamentary constituency, a day later.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm