ಬ್ರೇಕಿಂಗ್ ನ್ಯೂಸ್
14-05-24 02:17 pm HK News Desk ದೇಶ - ವಿದೇಶ
ಹೈದರಾಬಾದ್, ಮೇ 14: ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ 4ನೇ ಹಂತದ ಮತದಾನ ಚಾಲ್ತಿಯಲ್ಲಿರುವಂತೆಯೇ ಅತ್ತ ಆಂಧ್ರ ಪ್ರದೇಶದಲ್ಲಿ ಮತದಾರನೋರ್ವ ಸರತಿ ಸಾಲಲ್ಲಿ ನಿಲ್ಲದ ಶಾಸಕನಿಗೇ ಕಪಾಳಮೋಕ್ಷ ಮಾಡಿರುವ ಘಟನೆ ವರದಿಯಾಗಿದೆ.
ಮತಗಟ್ಟೆಯಲ್ಲಿಯೂ ವಿಐಪಿ ಸಂಸ್ಕೃತಿ ಪ್ರದರ್ಶಿಸಲು ಹೊರಟ ಶಾಸಕ, ಮತದಾರನ ಜತೆ ಕಿತ್ತಾಡಿದ ಘಟನೆ ಆಂಧ್ರ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಗುಂಟೂರು ಜಿಲ್ಲೆಯ ಮತಗಟ್ಟೆಯೊಂದರಲ್ಲಿ ಸರದಿ ಸಾಲು ತಪ್ಪಿಸಿಕೊಂಡು ಬಂದ ಶಾಸಕನ ವರ್ತನೆಗೆ ಮತದಾರರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಕುಪಿತಗೊಂಡ ಶಾಸಕ, ಆ ಮತದಾರನ ಕೆನ್ನೆಗೆ ಬಾರಿಸಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ತೆನಾಲಿ ಕ್ಷೇತ್ರದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಶಾಸಕ ಎ ಶಿವಕುಮಾರ್ ಹಾಗೂ ಅವರ ಬೆಂಬಲಿಗರು ಮತಗಟ್ಟೆಯಲ್ಲಿಯ ದುಂಡಾವರ್ತನೆ ತೋರಿದ್ದಾರೆ. ಮತದಾರನ ಬಳಿ ತೆರಳಿದ ಶಿವಕುಮಾರ್, ಅವರ ಮುಖದ ಮೇಲೆ ಹೊಡೆದಿದ್ದಾರೆ. ಕೂಡಲೇ ಆ ಮತದಾರ ಶಾಸಕರಿಗೆ ತಿರುಗಿ ಕಪಾಳಮೋಕ್ಷ ಮಾಡಿದ್ದಾರೆ. ಈ ವೇಳೆ ಶಾಸಕರ ಜತೆಗಿದ್ದ ಬೆಂಬಲಿಗರು ಮತದಾರನ ಮೇಲೆ ಮುಗಿಬಿದ್ದು ಹಿಗ್ಗಾಮುಗ್ಗಾ ಥಳಿಸಿ ಅಮಾನುಷವಾಗಿ ವರ್ತಿಸಿದ್ದಾರೆ. ಸರದಿ ಸಾಲಿನಲ್ಲಿ ನಿಂತಿದ್ದ ಇತರೆ ಮತದಾರರು ವ್ಯಕ್ತಿ ಮೇಲಿನ ಹಲ್ಲೆಯನ್ನು ತಡೆಯಲು ಪ್ರಯತ್ನಿಸಿದ್ದಾರೆ. ಆದರೆ ಎಂಎಲ್ಎ ಬೆಂಬಲಿಗರು ದಾಳಿ ಮುಂದುವರಿಸಿದ್ದಾರೆ.
ವೈರಲ್ ಆಗಿರುವ 10 ಸೆಕೆಂಡುಗಳ ವಿಡಿಯೋದಲ್ಲಿ ಮತದಾರನನ್ನು ರಕ್ಷಿಸಲು ಯಾವುದೇ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶ ಮಾಡುವುದು ಕಾಣಿಸಿಲ್ಲ.
ಕೈಕೈ ಮಿಲಾಯಿಸುವ ಘಟನೆಗೆ ನಿಜವಾದ ಕಾರಣ ಏನು ಎನ್ನುವುದು ಸ್ಪಷ್ಟವಾಗಿಲ್ಲ. ಆದರೆ ಮತದಾರನ ಮೇಲೆ ಕೈ ಮಾಡಿದ ಶಾಸಕನ ದುರ್ವರ್ತನೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಹಾಲಿ ಅಭ್ಯರ್ಥಿಯೂ ಆಗಿರುವ ಅನ್ನಬಾತುನಿ ಶಿವಕುಮಾರ್, ಮತದಾರರ ಸರತಿ ಸಾಲಿನಲ್ಲಿ ನಿಲ್ಲದೆ, ನೇರವಾಗಿ ಮತಗಟ್ಟೆ ಒಳಗೆ ಹೋಗಿ ಮತಚಲಾಯಿಸಲು ಪ್ರಯತ್ನಿಸಿದ್ದರು. ಇದನ್ನು ಆ ಮತದಾರ ಪ್ರಶ್ನಿಸಿದ್ದರು ಎನ್ನಲಾಗಿದೆ.
ಆಂಧ್ರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಜತೆಗೆ ವಿಧಾನಸಭೆಗೂ ಚುನಾವಣೆ ನಡೆಯುತ್ತಿದೆ. 25 ಸಂಸತ್ ಹಾಗೂ 175 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ಜರುಗುತ್ತಿದೆ. ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷವು ಮರು ಆಯ್ಕೆಗೆ ಬಯಸಿದ್ದರೆ, ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಎನ್ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದ ಮೈತ್ರಿಕೂಟ ಪ್ರಬಲ ಪೈಪೋಟಿ ನಿರೀಕ್ಷೆಯಲ್ಲಿದೆ. ಕಾಂಗ್ರೆಸ್ ಕೂಡ ತನ್ನ ಅಸ್ತಿತ್ವ ಮರಳಿ ಕಂಡುಕೊಳ್ಳುವ ಉತ್ಸಾಹದಲ್ಲಿದೆ.
Sitting YSRCP MLA from Tenali Annabathuni Sivakumar slaps a voter at the polling booth.
— Karthik Reddy (@bykarthikreddy) May 13, 2024
Voter slaps back and MLA's henchmen rain back blows to the voter.
All because of issue in queuing up. pic.twitter.com/E0W1SlVFsf
Violent clashes marred the simultaneous assembly and Lok Sabha polls held in Andhra Pradesh on Monday, with an MLA slapping a voter, stone pelting between party workers, and a TDP MLA's three cars destroyed at a polling station, among other incidents.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm