ಬ್ರೇಕಿಂಗ್ ನ್ಯೂಸ್
14-05-24 07:21 pm HK News Desk ದೇಶ - ವಿದೇಶ
ಹೈದರಾಬಾದ್, ಮೇ.14: ನಾಯಿಯೊಂದು ಐದು ತಿಂಗಳ ಮಗುವನ್ನು ಕಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ.
ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ಬೀದಿ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ. ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.
ಈ ಆಘಾತಕಾರಿ ಘಟನೆಯು ದೇಶದಲ್ಲಿ ನಾಯಿ ಕಡಿತ ಮತ್ತು ನಾಯಿ ದಾಳಿಯ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ. 2022 ರಿಂದ 2023 ರವರೆಗೆ ನಾಯಿ ಕಡಿತದ ಘಟನೆಗಳು ವರ್ಷದಿಂದ ವರ್ಷಕ್ಕೆ ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಡಿಸೆಂಬರ್ನಲ್ಲಿ ವರದಿ ಮಾಡಿತ್ತು.
ಕಳೆದ ತಿಂಗಳು ಬೀದಿ ನಾಯಿಗಳ ದಾಳಿಯಲ್ಲಿ ಕನಿಷ್ಠ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. ಏಪ್ರಿಲ್ 14 ರಂದು ಹೈದರಾಬಾದ್ನ ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ ಬಳಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಬಾಲಕಿಯನ್ನು ಬೀದಿ ನಾಯಿಗಳು ಕಚ್ಚಿ ಕೊಂದಿದ್ದವು. ಮತ್ತೊಂದು ದುರಂತ ಘಟನೆಯಲ್ಲಿ, ಏಪ್ರಿಲ್ 13 ರಂದು ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಬೀದಿ ನಾಯಿಗಳು ದಾಳಿ ಮಾಡಿ ನಾಲ್ಕು ವರ್ಷದ ಬಾಲಕಿಯನ್ನು ಕೊಂದಿದ್ದವು.
A five-month-old baby was mauled to death by a dog at Tandur in Telangana's Vikarabad district today. The boy, Babusai, was sleeping at his home, unattended, when the dog entered and attacked him.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm