ಬ್ರೇಕಿಂಗ್ ನ್ಯೂಸ್
17-05-24 05:59 pm HK News Desk ದೇಶ - ವಿದೇಶ
ಲಕ್ನೋ, ಮೇ.17: ಎಸ್ಪಿ ಮತ್ತು ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರಾಮನ ಮಂದಿರಕ್ಕೆ ಬುಲ್ಡೋಜರ್ ನುಗ್ಗಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಮಾಜವಾದಿ ಪಾರ್ಟಿಯ ಮುಖಂಡನೊಬ್ಬ ರಾಮ ನವಮಿಯಂದೇ ರಾಮನ ಮಂದಿರ ಉಪಯೋಗಕ್ಕಿಲ್ಲದ್ದು ಎಂದು ಹೇಳುತ್ತಾನೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್, ಸುಪ್ರೀಂ ಕೋರ್ಟಿನ ತೀರ್ಪನ್ನು ರದ್ದುಪಡಿಸುವ ಬಗ್ಗೆ ಮಾತನಾಡುತ್ತದೆ. ಅವರಿಗೆ ಕುಟುಂಬ ಮತ್ತು ಅಧಿಕಾರ ಮಾತ್ರ ಬೇಕು. ಎಸ್ಪಿ ಅಧಿಕಾರಕ್ಕೆ ಬಂದರೆ ರಾಮನ ಮಂದಿರಕ್ಕೆ ಬುಲ್ಜೋಜರ್ ನುಗ್ಗಿಸಿ, ರಾಮನನ್ನು ಮತ್ತೆ ಟೆಂಟಿನಲ್ಲಿ ಕೂರಿಸುವ ಕೆಲಸ ಮಾಡಲಿದ್ದಾರೆ ಎಂದು ಆರೋಪಿಸಿದ ಮೋದಿ, ಆದರೆ ಬುಲ್ಡೋಜರ್ ಎಲ್ಲಿಗೆ ನುಗ್ಗಿಸಬೇಕು ಎನ್ನುವುದನ್ನು ಕಾಂಗ್ರೆಸ್ ಮತ್ತು ಎಸ್ಪಿ ನಾಯಕರು ಉತ್ತರ ಪ್ರದೇಶದ ಸಿಎಂ ಯೋಗಿ ಬಳಿ ಕಲಿಯಬೇಕು ಎಂದು ಹೇಳಿದ್ದಾರೆ.
ಎಸ್ಪಿ- ಕಾಂಗ್ರೆಸ್ ಪಾಲಿಗೆ ವೋಟ್ ಬ್ಯಾಂಕಿಗಿಂತ ಮೇಲಿನದ್ದು ಯಾವುದೂ ಇಲ್ಲ. ತುಷ್ಟೀಕರಣಕ್ಕಾಗಿಯೇ ಶರಣಾಗತಿ ಮಾಡಿಕೊಂಡಿದೆ. ಮೋದಿ ಈ ದೇಶಕ್ಕೆ ತುಷ್ಟೀಕರಣ ರಾಜಕೀಯದ ಸತ್ಯವನ್ನು ಹೇಳುತ್ತಿದ್ದರೆ, ಎಸ್ಪಿ- ಕಾಂಗ್ರೆಸ್ ಮಾತ್ರ ಮೋದಿ ಹಿಂದು- ಮುಸ್ಲಿಮರನ್ನು ಒಡೆಯುತ್ತಿದ್ದಾರೆ ಎಂದು ದೂರುತ್ತಿದೆ. ಇವರ ವೋಟ್ ಬ್ಯಾಂಕ್ ರಾಜಕೀಯವನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ. ಮುಸ್ಲಿಂ ಸೋದರಿಯರು ಮತ್ತು ತಾಯಂದಿರು ತ್ರಿಪಲ್ ತಲಾಖ್ ನಿಷೇಧದಿಂದ ಸಂತಸಗೊಂಡಿದ್ದು, ಬಿಜೆಪಿಯನ್ನು ಹರಸಲಿದ್ದಾರೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದರು.
ಮೋದಿ ಸರ್ಕಾರ ಮತ್ತೆ ಗೆಲುವು ಸಾಧಿಸುವುದನ್ನು ತಿಳಿದು ಇಂಡಿಯಾ ಒಕ್ಕೂಟ ನಡುಗುತ್ತಿದೆ. ಜೂನ್ 4ರ ದಿನ ಹೆಚ್ಚು ದೂರವಿಲ್ಲ. ಇಡೀ ಜಗತ್ತು ನೋಡುತ್ತಿದೆ, ಮೋದಿ ಸರಕಾರ ಹ್ಯಾಟ್ರಿಕ್ ಆಗುವುದನ್ನು ಕಾಯುತ್ತಿದೆ ಎಂದು ಮೋದಿ ಹೇಳಿದ್ದಾರೆ.
Prime Minister Narendra Modi on Friday claimed that the Congress and Samajwadi Party would bulldoze the Ram temple if elected to power. He suggested they take “tuition” from Uttar Pradesh Chief Minister Yogi Adityanath on “where to run bulldozers.” The Prime Minister made the comment while addressing an election rally in Barabanki, Uttar Pradesh.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm