ಬ್ರೇಕಿಂಗ್ ನ್ಯೂಸ್
18-05-24 11:54 am HK News Desk ದೇಶ - ವಿದೇಶ
ವಿಜಯವಾಡ, ಮೇ.18: ವಿದ್ಯುದಾಘಾತಕ್ಕೆ ಗುರಿಯಾಗಿ ಕುಸಿದು ಬಿದ್ದ ತಮ್ಮ ಮಗನನ್ನು ಹೊತ್ತು ಆಸ್ಪತ್ರೆಗೆ ಧಾವಿಸುತ್ತಿದ್ದ ಪೋಷಕರಿಗೆ ಆ ವೈದ್ಯೆ ದೇವತೆಯಂತೆ ಬಂದರು. ನಾನಿದ್ದೇನೆ ಎಂದು ಭರವಸೆ ನೀಡಿ ರಸ್ತೆಯಲ್ಲೇ ಸಿಪಿಆರ್ ಮಾಡಿ ಮಗುವಿಗೆ ಮತ್ತೊಂದು ಜನ್ಮ ಕೊಟ್ಟರು. ಆಂಧ್ರಪ್ರದೇಶದ ವಿಜಯವಾಡದಲ್ಲಿ ಇದೇ ತಿಂಗಳ 5ರಂದು ನಡೆದಿರುವ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಈಗ ಭಾರಿ ಸದ್ದು ಮಾಡುತ್ತಿದೆ.
ವಿಜಯವಾಡದ ಅಯ್ಯಪ್ಪನಗರದ ಆರು ವರ್ಷದ ಬಾಲಕ ಸಾಯಿ ಈ ತಿಂಗಳ 5 ರಂದು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ನೆಲಕ್ಕೆ ಕುಸಿದು ಬಿದ್ದಿದ್ದನು. ಹೆತ್ತವರು ಎಷ್ಟು ಗೋಗೆರೆದರು ಒಂದು ಮಾತೂ ಮಾತನಾಡಲಿಲ್ಲ. ಇದ್ದಕ್ಕಿದ್ದಂತೆ ಬಾಲಕನ ಹೃದಯ ನಿಂತು ಹೋಯಿತು. ದುಃಖವನ್ನು ನುಂಗಿಕೊಂಡ ಪೋಷಕರು ಮಗುವನ್ನು ಹೆಗಲ ಮೇಲೆ ಹೊತ್ತುಕೊಂಡು ಆಸ್ಪತ್ರೆಯತ್ತ ಓಡಿದರು. ಈ ದೃಶ್ಯ ಅಲ್ಲಿನ ಜನರನ್ನು ಮನಕಲುಕುವಂತೆ ಮಾಡಿದ್ದಂತೂ ಸುಳ್ಳಲ್ಲ.

ಮೆಡ್ಸಿ ಆಸ್ಪತ್ರೆಯ ಪ್ರಸೂತಿ ತಜ್ಞರಾದ ಡಾ.ನನ್ನಪನೇನಿ ರವಳಿ ಅವರು ಅದೇ ರಸ್ತೆ ಮೂಲಕ ಸಾಗುತ್ತಿದ್ದರು. ಈ ವೇಳೆ ಇದನ್ನೆಲ್ಲ ಗಮನಿಸಿದ ಅವರು, ಪೋಷಕರಿಗೆ ಧೈರ್ಯ ತುಂಬಿದರು. ರಸ್ತೆಯ ಮಧ್ಯೆದಲ್ಲೇ ಬಾಲಕನನ್ನು ಪರೀಕ್ಷಿಸಿ ಸಿಪಿಆರ್ ಅನ್ನು ಪ್ರಾರಂಭಿಸಿದರು. ಒಂದೆಡೆ ಡಾಕ್ಟರ್ ರವಳಿ ಬಾಲಕನ ಎದೆಯ ಮೇಲೆ ಕೈ ಒತ್ತುತ್ತಿದ್ದರು. ಇನ್ನೊಂದೆಡೆ ಅಲ್ಲಿದ್ದ ಮತ್ತೊಬ್ಬನಿಗೆ ಬಾಯಿಗೆ ಬಾಯಿಟ್ಟು ಗಾಳಿ ಊದುವಂತೆ ಸೂಚಿಸಿದರು. ಏಳು ನಿಮಿಷಕ್ಕೂ ಹೆಚ್ಚು ಕಾಲ ಸಿಪಿಆರ್ ಮಾಡಿದರು. ಕೊನೆಗೂ ಬಾಲಕ ಹೋದ ಪ್ರಾಣ ಮತ್ತೆ ತಿರುಗಿ ಬಂತು. ಬಳಿಕ ಹುಡುಗನ ಹೃದಯ ಬಡಿಯಲು ಆರಂಭಿಸಿತು, ಕೈಕಾಲುಗಳು ಆಡಲಾರಂಭಿಸಿದವು. ಒಟ್ಟಿನಲ್ಲಿ ವೈದ್ಯ ನನ್ನಪನೇನಿ ಶ್ರಮ ಫಲಕೊಟ್ಟಿತು. ಹೋದ ಬಾಲಕನ ಜೀವ ಬಂತು. ಆತಂಕದಲ್ಲಿದ್ದ ಪೋಷಕರ ಮುಖದಲ್ಲಿ ಸಂತಸ ಅರಳಿತು.
ಇನ್ನೂ ಪೋಷಕರು ಬಾಲಕನನ್ನು ಬೈಕ್ನಲ್ಲಿ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆಸ್ಪತ್ರೆಗೆ ಹೋಗುತ್ತಿರುವಾಗ ವೈದ್ಯೆ ರವಳಿ ಅವರು ಹುಡುಗನಿಗೆ ಸರಿಯಾಗಿ ಉಸಿರಾಡಲು ತಲೆಯನ್ನು ಸ್ವಲ್ಪ ಬಾಗಿಸಲು ಸಲಹೆ ನೀಡಿದರು. ಬಾಲಕ ಆಸ್ಪತ್ರೆಗೆ ತೆರಳಿದ ಕೂಡಲೇ ಚಿಕಿತ್ಸೆ ನೀಡಲಾಗಿದ್ದು, ಸಂಪೂರ್ಣ ಗುಣಮುಖರಾಗಿದ್ದಾರೆ. 24 ಗಂಟೆಗಳ ಕಾಲ ಅವರನ್ನು ನಿಗಾದಲ್ಲಿ ಇರಿಸಲಾಗಿತ್ತು. ಬಾಲಕನ ತಲೆಗೆ ಸಿಟಿ ಸ್ಕ್ಯಾನ್ ಮಾಡಿದಾಗ ಯಾವುದೇ ಸಮಸ್ಯೆ ಕಂಡು ಬಂದಿಲ್ಲ. ಬಳಿಕ ಬಾಲಕನನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿಕೊಡಲಾಗಿದೆ . ಈಗ ಹುಡುಗ ಸಂಪೂರ್ಣ ಆರೋಗ್ಯವಾಗಿದ್ದಾನೆ.ವೈದ್ಯೆ ರವಳಿ ಅವರು ನಡು ರಸ್ತೆಯಲ್ಲಿ ಬಾಲಕನಿಗೆ ಸಿಪಿಆರ್ ಮಾಡುತ್ತಿರುವಾಗ ಅಲ್ಲಿ ನೆರೆದಿದ್ದ ಜನ ವಿಡಿಯೋ ತೆಗೆದಿದ್ದರು. ಇದೀಗ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ವೈದ್ಯರಿಗೆ ಪ್ರಶಂಸೆಗಳ ಮಹಾಪೂರವೇ ಹರಿದು ಬರುತ್ತಿದೆ. ತುರ್ತು ಪರಿಸ್ಥಿತಿಯಲ್ಲಿ ಸಿಪಿಆರ್ ಎಷ್ಟು ಉಪಯುಕ್ತವಾಗಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.
ఆరేళ్ల బాలుడి ప్రాణాలు రక్షించిన డాక్డర్
— BIG TV Breaking News (@bigtvtelugu) May 17, 2024
రహదారి మీదే సీపీఆర్ చేయడంతో సత్ఫలితం.
సోషల్ మీడియా లోవైరల్ అవుతున్న వీడియో.
వైద్యురాలు రవళి కి ప్రజల నుంచి అభినందనలు.
విజయవాడ అయ్యప్పనగర్ లో విద్యుత్ ఘాతానికి గురైన బాలుడు సాయికి రోడ్డుపైనే సీపీఆర్ చేసిన డాక్డర్ రవళి.#AndhraPradesh… pic.twitter.com/x1fm3VRqxS
An Andhra doctor’s quick actions saved the life of a 6-year-old boy who was electrocuted in Ajayypa Nagar, Vijayawada. The boy was being carried by his frantic parents along the road when he suddenly suffered a cardiac arrest. Dr. Ravalika, a doctor who happened to be passing by, noticed the distress and immediately intervened.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm