ಬ್ರೇಕಿಂಗ್ ನ್ಯೂಸ್
18-05-24 10:18 pm HK News Desk ದೇಶ - ವಿದೇಶ
ನವದೆಹಲಿ, ಮೇ 18: ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಸ್ಥಾನವನ್ನು ಅತ್ಯುತ್ತಮ ರೀತಿಯಲ್ಲಿ ನಿಭಾಯಿಸಲಿದ್ದಾರೆ, ಯಾಕಂದ್ರೆ ಅವರಿಗೆ ಈ ದೇಶದ ಜನರ ನಾಡಿಮಿಡಿತ ಗೊತ್ತಿದೆ. ಜನರನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಸೋದರಿ ಪ್ರಿಯಾಂಕ ಗಾಂಧಿ ಹೇಳಿದ್ದಾರೆ.
ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಪ್ರಿಯಾಂಕ ಗಾಂಧಿಗೆ, ರಾಹುಲ್ ಪ್ರಧಾನ ಮಂತ್ರಿ ಆಗುತ್ತಾರೆಯೇ ಎಂಬ ಪ್ರಶ್ನೆ ಬಂತು. ಇದಕ್ಕುತ್ತರಿಸಿದ ಪ್ರಿಯಾಂಕ, ಯಾಕೆ ರಾಹುಲ್ ಪಿಎಂ ಆಗಬಾರದು. ಅವರೊಬ್ಬ ಅತ್ಯುತ್ತಮ ಪ್ರಧಾನ ಮಂತ್ರಿ ಆಗಲಿದ್ದಾರೆ. ಈ ದೇಶದ ಜನರ ನಾಡಿ ಮಿಡಿತವನ್ನು ರಾಹುಲ್ ಗಾಂಧಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ ಎಂದು ಹೇಳಿದರು.
ರಾಹುಲ್ ಗಾಂಧಿ ಹಿಂದು ಧರ್ಮದ ಬಗ್ಗೆ ತಿಳಿದುಕೊಂಡಿದ್ದಾರೆ. ಮೋದಿ ಈ ಕುರಿತು ಡಿಬೇಟ್ ಗೆ ಬಂದರೂ ಅವರಿಗೆ ಹಿಂದು ಧರ್ಮದ ಬಗ್ಗೆ ರಾಹುಲ್ ಜೊತೆಗೆ ಮಾತನಾಡಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ಯಾರಿಗೂ ಹೆದರುವುದಿಲ್ಲ, ಸತ್ಯವನ್ನು ಹೇಳುವುದಕ್ಕೆ ಹಿಂಜರಿಕೆ ಇಲ್ಲ. ಇವರು ಸತ್ಯ ಹೇಳುತ್ತಾರೆ ಎಂಬುದನ್ನು ದೇಶ ಅರಿತುಕೊಂಡಿದೆ ಎಂದರು. ಬೇರಾವುದೇ ನಾಯಕ ಈ ಪರಿಯಾಗಿ ಟೀಕೆಯನ್ನು ಎದುರಿಸಿರಲಿಕ್ಕಿಲ್ಲ. ಬಿಜೆಪಿ ನಾಯಕರು ಸೇರಿದಂತೆ ಮೂಲೆ ಮೂಲೆಯಿಂದ ನಾನಾ ರೀತಿಯ ಟೀಕೆಯನ್ನು ಎದುರಿಸಿದ್ದಾರೆ. ಸಂಸತ್ತಿನಿಂದ ಅವರನ್ನು ಹೊರಕ್ಕಟ್ಟಿದರು, ದೇಶದ ವಿವಿಧ ಕಡೆ ಕೇಸುಗಳನ್ನು ಹಾಕಿದರು. ಆದರೆ ಅವನ್ನೆಲ್ಲ ರಾಹುಲ್ ಎದುರಿಸಿದ್ದಾರೆ. ಅವರನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಿಯಾಂಕ ಹೇಳಿದರು.
ಈ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಯಾರು ಪ್ರಧಾನಿ ಆಗಬೇಕೆಂದು ನಿರ್ಧಾರ ಮಾಡುತ್ತಾರೆ. ಯಾರು ಪ್ರಧಾನಿ ಆದ್ರೂ ಅವರಿಗೆ ನಮ್ಮ ಬೆಂಬಲ ಇದೆ ಎಂದು ಪ್ರಿಯಾಂಕ ಗಾಂಧಿ ಹೇಳಿದರು.
Congress General Secretary Priyanka Gandhi on Saturday stated that Rahul Gandhi would be a very good Prime Minister and that he has always stood for the people. She said Rahul Gandhi understands the pulse of the country, which makes him a perfect pick for PM.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm