ಬ್ರೇಕಿಂಗ್ ನ್ಯೂಸ್
20-05-24 11:35 am HK News Desk ದೇಶ - ವಿದೇಶ
ನವದೆಹಲಿ, ಮೇ.20: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಇಲಾಖೆ ಮಂತ್ರಿ ಹುಸೇನ್ ಅಮೀರಬ್ದುಲ್ಲಾ ಅವರು ಹೆಲಿಕಾಪ್ಟರ್ ದುರಂತದಲ್ಲಿ ದುರಂತ ಸಾವಿಗೀಡಾಗಿದ್ದಾರೆ.
ಭಾನುವಾರ ಸಂಜೆ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅರಣ್ಯ ಭಾಗದಲ್ಲಿ ಪತನಗೊಂಡಿದ್ದ ಬಗ್ಗೆ ಇರಾನ್ ದೇಶದ ಅಧಿಕಾರಿಗಳು ಮಾಹಿತಿ ನೀಡಿದ್ದರು. ಆದರೆ, ಯಾರು ಬದುಕಿದ್ದಾರೆ, ಅಧ್ಯಕ್ಷ ಇಬ್ರಾಹಿಂ ರೈಸಿ ಸ್ಥಿತಿ ಹೇಗಿದೆ ಎಂದು ಮಾಹಿತಿ ಇರಲಿಲ್ಲ. ರಾತ್ರಿಯಾಗಿದ್ದರಿಂದ ಕಾರ್ಯಾಚರಣೆ ಮತ್ತು ಆ ಜಾಗಕ್ಕೆ ತಲುಪುವುದು ಸಾಧ್ಯವಾಗಿರಲಿಲ್ಲ. ಸೋಮವಾರ ಬೆಳಗ್ಗೆ ಹೆಲಿಕಾಪ್ಟರಿನಲ್ಲಿದ್ದ ಎಲ್ಲರೂ ಸಾವಿಗೀಡಾಗಿದ್ದಾರೆ. ಹೆಲಿಕಾಪ್ಟರ್ ಪೂರ್ತಿ ಸುಟ್ಟು ಹೋಗಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ದುರಂತಕ್ಕೂ ಮುನ್ನ ಇಬ್ರಾಹಿಂ ರೈಸಿ ಅವರು ಹೆಲಿಕಾಪ್ಟರಿನಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಫೋಟೋ ವೈರಲ್ ಆಗಿದೆ. ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಪ್ರಯಾಣಿಸುತ್ತಿದ್ದಾಗಿನ ಫೋಟೋ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಪಶ್ಚಿಮ ಅಜರ್ ಬೈಜಾನ್ ಪ್ರದೇಶದ ಜೋಲ್ಫಾ ಪ್ರಾಂತದಲ್ಲಿ ಹೆಲಿಕಾಪ್ಟರ್ ಪ್ರಯಾಣಿಸುತ್ತಿದ್ದಾಗಿನ ಚಿತ್ರ ಎಂದು ಹೇಳಲಾಗುತ್ತಿದೆ. ಅಮೆರಿಕದಿಂದ ಖರೀದಿಸಿದ್ದ ಹತ್ತು ವರ್ಷ ಹಳೆಯ ಮಾದರಿಯ ಬೆಲ್ 212 ಹೆಲಿಕಾಪ್ಟರ್ ಇದಾಗಿದ್ದು, ಅಸುರಕ್ಷತೆಯಿಂದ ಕೂಡಿತ್ತು ಎಂದು ಬಿಬಿಸಿ ವರದಿ ಮಾಡಿದೆ.
ಹೆಲಿಕಾಪ್ಟರ್ ನಲ್ಲಿ ಇಬ್ರಾಹಿಂ ರೈಸಿ ಸೇರಿದಂತೆ 9 ಮಂದಿ ಇದ್ದರು. ಮೂವರು ಇರಾನ್ ದೇಶದ ಅಧಿಕಾರಿಗಳು ಹಾಗೂ ಒಬ್ಬರು ಇಮಾಮ್ ಇದ್ದರು ಎನ್ನುವ ಮಾಹಿತಿ ಇದೆ. ಘಟನೆ ನಡೆದಿರುವ ಪಶ್ಚಿಮ ಅಜರ್ ಬೈಜಾನ್ ಪ್ರದೇಶದಲ್ಲಿ ಮಂಜು ಮುಸುಕಿದ ಮತ್ತು ಶೀತ ವಾತಾವರಣ ಇದೆ. ಹೀಗಾಗಿ ದುರಂತ ನಡೆದಿರುವ ಜಾಗಕ್ಕೆ ರಕ್ಷಣಾ ತಂಡ ತೆರಳಲು ಸಾಧ್ಯವಾಗಿಲ್ಲ. ರಕ್ಷಣಾ ಕಾರ್ಯಾಚರಣೆಗೆ ಟರ್ಕಿಯ ಡ್ರೋಣ್ ಮತ್ತು ರಷ್ಯಾ ಸ್ಪೆಷಲ್ ಹೆಲಿಕಾಪ್ಟರ್ ಕಳಿಸಿಕೊಟ್ಟಿದೆ. ಅಲ್ಲದೆ, 50 ಮಂದಿ ವಿಶೇಷ ಪರಿಣತಿಯ ಯೋಧರನ್ನು ಕಳಿಸಲು ರಷ್ಯಾ ಏರ್ಪಾಡು ಮಾಡಿದೆ. ಇನ್ನೆರಡು ಹೆಲಿಕಾಪ್ಟರ್ ಕಳಿಸಿಕೊಡಲಾಗುವುದು. ರಕ್ಷಣಾ ಕಾರ್ಯಾಚರಣೆಗೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಹೇಳಿದ್ದಾರೆ.
ಇತ್ತೀಚೆಗೆ ಇಸ್ರೇಲ್ ಮೇಲೆ ಪರಮಾಣು ದಾಳಿಗೂ ನಾವು ತಯಾರಿ ನಡೆಸಿದ್ದೇವೆ ಎಂದು ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೇಳಿದ್ದರು. ಇಸ್ರೇಲ್ ಮೇಲೆ ಆಗಿಂದಾಗ್ಗೆ ದಾಳಿ ಘಟನೆಗಳು ನಡೆಯುತ್ತಿರುವಾಗಲೇ ಇರಾನ್ ಅಧ್ಯಕ್ಷ ದುರಂತ ಸಾವಿಗೀಡಾಗಿದ್ದಾರೆ.
Iran President Ebrahim Raisi helicopter crash: Iranian state media confirmed Ebrahim Raisi died in the chopper crash. He along with Iranian Foreign Minister Hossein Amirabdollhian and other senior officials have all died in the incident that happened on Sunday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm