ಬ್ರೇಕಿಂಗ್ ನ್ಯೂಸ್
21-05-24 01:33 pm HK News Desk ದೇಶ - ವಿದೇಶ
ಅಹಮದಾಬಾದ್, ಮೇ 21: ಸಿರಿಯಾದ ಐಸಿಸ್ ಸಂಘಟನೆಗೆ ಸೇರಿದ ನಾಲ್ವರು ಶಂಕಿತ ಉಗ್ರರನ್ನು ಗುಜರಾತ್ ಪೊಲೀಸರು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಸೋಮವಾರ ಬಂಧಿಸಿದ್ದಾರೆ. ಇವರು ಶ್ರೀಲಂಕಾ ಪ್ರಜೆಗಳಾಗಿದ್ದು ಚೆನ್ನೈ ಮೂಲಕ ಅಹಮದಾಬಾದ್ಗೆ ಆಗಮಿಸಿದ್ದರು.
ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿದ್ದಾಗ ಪಾಕಿಸ್ತಾನಿ ಹ್ಯಾಂಡ್ಲರ್ಗಳಿಂದ ಸಂದೇಶಕ್ಕಾಗಿ ಕಾಯುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ನಾಲ್ವರ ಮೊಬೈಲ್ ಫೋನ್ಗಳಲ್ಲಿ ನಿಗೂಢ ಭಾಷೆಯಲ್ಲಿರುವ ಕೆಲವು ಚಾಟ್ಗಳನ್ನು ಪೊಲೀಸರು ಪತ್ತೆ ಮಾಡಿದ್ದು ಐಸಿಸ್ ನೆಟ್ವರ್ಕ್ ಹೊಂದಿದ್ದಾರೆ ಎಂಬ ಶಂಕೆ ಮೂಡಿತ್ತು. ಪಾಕಿಸ್ತಾನದ ಏಜೆಂಟರು ಇವರಿಗೆ ಆಯುಧಗಳನ್ನು ನೀಡುವ ಭರವಸೆ ನೀಡಿದ್ದರು. ಆದರೆ ಅದಕ್ಕೂ ಮುನ್ನವೇ ಉಗ್ರರನ್ನು ಬಂಧಿಸಲಾಗಿದೆ. ಬಂಧಿತರನ್ನು ಮೊಹಮದ್ ನುಸ್ರತ್, ಮೊಹಮದ್ ನಫ್ರಾನ್, ಮೊಹಮದ್ ಫಾರಿಸ್ ಮತ್ತು ಮೊಹಮದ್ ರಸ್ದೀನ್ ಎಂದು ಗುರುತಿಸಲಾಗಿದೆ ಎಂದು ಗುಜರಾತ್ ಎಟಿಎಸ್ ಘಟಕದ ಪೊಲೀಸರು ತಿಳಿಸಿದ್ದಾರೆ.
ಯಹೂದಿಗಳಿಗೆ ಸೇರಿದ ಸ್ಥಳಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಹೊಣೆಗಾರಿಕೆಯನ್ನು ಈ ನಾಲ್ವರಿಗೆ ವಹಿಸಲಾಗಿತ್ತು ಎಂದು ಮೂಲಗಳು ಹೇಳಿವೆ. ಇವರು ಕೊಲಂಬೋದಿಂದ ಚೆನ್ನೈಗೆ ಬಂದಿದ್ದರು. ಬಳಿಕ ಭಾನುವಾರ ಅಹಮದಾಬಾದ್ ತಲುಪಿದ್ದರು. ವಿಮಾನ ಅಥವಾ ರೈಲಿನ ಮೂಲಕ ಮೇ 18 ಅಥವಾ 19ರಂದು ನಾಲ್ವರು ಉಗ್ರರು ಅಹಮದಾಬಾದ್ ತಲುಪಲಿದ್ದಾರೆ ಎಂಬ ಮಾಹಿತಿ ಬಂದಿತ್ತು. ಮಾಹಿತಿ ಆಧಾರದಲ್ಲಿ ತಂಡಗಳನ್ನು ರಚಿಸಿ, ಕಾರ್ಯತಂತ್ರ ರೂಪಿಸಲಾಗಿತ್ತು. ದಕ್ಷಿಣದಿಂದ ಬರುವ ಎಲ್ಲ ರೈಲು ಹಾಗೂ ವಿಮಾನಗಳ ಪ್ರಯಾಣಿಕರ ಪಟ್ಟಿ ಪರಿಶೀಲನೆ ನಡೆಸಲಾಗಿತ್ತು. ನಾಲ್ಕೂ ಮಂದಿ ಇಂಡಿಗೋ ವಿಮಾನದಲ್ಲಿ ಒಂದೇ ಪಿಎನ್ಆರ್ ಸಂಖ್ಯೆಯಲ್ಲಿ ಚೆನ್ನೈನಿಂದ ಅಹಮದಾಬಾದ್ಗೆ ಬಂದಿದ್ದರು ಎಂದು ಡಿಜಿಪಿ ವಿಕಾಸ್ ಸಹಾಯ್ ಹೇಳಿದ್ದಾರೆ.
ಏಪ್ರಿಲ್ನಲ್ಲಿ, ಗುಜರಾತ್ ಎಟಿಎಸ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಗುಜರಾತ್ ಕರಾವಳಿಯಲ್ಲಿ 14 ಮಂದಿ ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿತ್ತು. ಅವರಿಂದ ಸುಮಾರು 602 ಕೋಟಿ ರೂ. ಮೌಲ್ಯದ 86 ಕೆಜಿ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು.
Four suspected terrorists believed to be associated with the Islamic State of Iraq and Syria (ISIS) have been arrested at Sardar Vallabhbhai Patel International Airport in Ahmedabad on May 20. The four suspected terrorists are being interrogated by the Gujarat ATS officials who believe identified the four as Sri Lankan nationals.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm