ಬ್ರೇಕಿಂಗ್ ನ್ಯೂಸ್
22-05-24 10:36 pm HK News Desk ದೇಶ - ವಿದೇಶ
ನ್ಯೂಯಾರ್ಕ್, ಮೇ.22: ಅಮೆರಿಕದ ಜಾರ್ಜಿಯಾದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿದ್ದಾರೆ.
ಜಾರ್ಜಿಯಾ ರಾಜ್ಯದ ಅಲ್ಫಾರೆಟ್ಟಾದಲ್ಲಿ ಕಳೆದ ವಾರ ಕಾರು ಅಪಘಾತ ಸಂಭವಿಸಿತ್ತು. ಮೃತ ವಿದ್ಯಾರ್ಥಿಗಳನ್ನು ಆರ್ಯನ್ ಜೋಶಿ, ಶ್ರೀಯಾ ಅವಸರಲಾ ಹಾಗೂ ಅನ್ವಿ ಶರ್ಮಾ ಎಂದು ಗುರುತಿಸಲಾಗಿದೆ. ರಿತ್ವಿಕ್ ಸೋಮಪಲ್ಲಿ ಮತ್ತು ಮೊಹಮ್ಮದ್ ಲಿಯಾಕತ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅತಿಯಾದ ವೇಗ ಅಪಘಾತಕ್ಕೆ ಕಾರಣ ಎಂದು ಅಮೆರಿಕ ಪೊಲೀಸರು ಶಂಕಿಸಿದ್ದಾರೆ. 18 ವರ್ಷ ವಯಸ್ಸಿನ ಐವರು ವಿದ್ಯಾರ್ಥಿಗಳು ಆಲ್ಫಾರೆಟ್ಟಾ ಹೈಸ್ಕೂಲ್ ಮತ್ತು ಜಾರ್ಜಿಯಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದರು.
ಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಬಂದ ವಾಹನವು ಪಲ್ಟಿಯಾಗಿ ಬಿದ್ದಿದೆ. ಆರ್ಯನ್ ಜೋಶಿ ಮತ್ತು ಶ್ರೀಯಾ ಅವಸರಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅನ್ವಿ ಶರ್ಮಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ರಿಥ್ವಾಕ್ ಸೋಮೆಪಲ್ಲಿ ಮತ್ತು ಮೊಹಮ್ಮದ್ ಲಿಯಾಕತ್ ಅವರಿಗೆ ಅಲ್ಫರೆಟ್ಟಾದ ನಾರ್ತ್ ಫುಲ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀಯಾ ಅವಸರಲಾ ಯುಜಿಎ ಶಿಕಾರಿ ನೃತ್ಯ ತಂಡದ ಸದಸ್ಯರಾಗಿದ್ದರು. ಅನ್ವಿ ಶರ್ಮಾ ಯುಜಿಎ ಕಲಾಕಾರ ಮತ್ತು ಕ್ಯಾಪೆಲ್ಲಾ ತಂಡದ ಹಾಡುಗಾರ್ತಿಯಾಗಿದ್ದರು. ಇವರಿಬ್ಬರ ಸಾವಿಗೂ ತಂಡಗಳು ಸಂತಾಪ ಸೂಚಿಸಿವೆ.
The victims, all 18 years old, were identified as Aryan Joshi, Sriya Avasarala, and Anvi Sharma. Who were Sriya Avasarala, Aryan Joshi and Anvi Sharma? Aryan Joshi has just completed his senior year at Alpharetta High School, whereas Sriya Avasarala and Anvi Sharma are first-year university students at the University of Georgia.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm