ಬ್ರೇಕಿಂಗ್ ನ್ಯೂಸ್
23-05-24 08:49 pm HK NEWS ದೇಶ - ವಿದೇಶ
ನವದೆಹಲಿ, ಮೇ 23 ಎರಡು ವರ್ಷಗಳ ಹಿಂದೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಿಷೇಧ ಸಂದರ್ಭದಲ್ಲಿ ಯುಎಪಿಎ ಕಾಯ್ದೆಯಡಿ ಬಂಧಿತರಾಗಿದ್ದ ಎಂಟು ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು ಕೂಡಲೇ ಆರೋಪಿಗಳನ್ನು ಜೈಲಿಗೆ ತಳ್ಳುವಂತೆ ಆದೇಶ ಮಾಡಿದೆ.
ರಾಷ್ಟ್ರೀಯ ಭದ್ರತೆಯೇ ಮುಖ್ಯ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಜಾಮೀನು ಪಡೆದ ಪಿಎಫ್ಐ ಕಾರ್ಯಕರ್ತರನ್ನು ತಕ್ಷಣವೇ ಜೈಲಿಗೆ ಕಳುಹಿಸಲು ಸೂಚಿಸಿದೆ. ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರಿದ್ದ ಪೀಠವು ಕಳೆದ ವರ್ಷ ಅಕ್ಟೋಬರ್ 19 ರಂದು ಹೈಕೋರ್ಟ್ನಿಂದ ಜಾಮೀನು ಪಡೆದ ಆರೋಪಿಗಳಿಗೆ ತಕ್ಷಣವೇ ಶರಣಾಗಿ ಜೈಲಿಗೆ ಹೋಗುವಂತೆ ಸೂಚಿಸಿದೆ.
ಭಯೋತ್ಪಾದನೆಗೆ ಸಂಬಂಧಿಸಿದ ಯಾವುದೇ ಕೃತ್ಯವನ್ನು ಲಘುವಾಗಿ ಪರಿಗಣಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪಿಎಫ್ಐ ಸಂಘಟನೆಯ ಪ್ರಮುಖರಿಗೆ ಜಾಮೀನು ನೀಡಿದ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠವು ಈ ತೀರ್ಪು ನೀಡಿದೆ.
ಪಿಎಫ್ಐ ಸಂಘಟನೆ ನಿಷೇಧ ಸಂದರ್ಭದಲ್ಲಿ ತಮಿಳುನಾಡು ಘಟಕದಲ್ಲಿ ಪ್ರಮುಖರಾಗಿದ್ದ ಬರ್ಕತುಲ್ಲಾ, ಇದ್ರಿಸ್, ಮೊಹಮ್ಮದ್ ಅಬುತಾಹಿರ್, ಖಾಲಿದ್ ಮೊಹಮ್ಮದ್, ಸಯೀದ್ ಇಶಾಕ್, ಖ್ವಾಜಾ ಮೊಹಿದಿನ್, ಯಾಸಿರ್ ಅರಾಫತ್ ಮತ್ತು ಫಯೇಜ್ ಅಹ್ಮದ್ ಅವರಿಗೆ ನೀಡಿದ್ದ ಜಾಮೀನನ್ನು ಈಗ ರದ್ದುಪಡಿಸಲಾಗಿದೆ. 2022ರ ಸೆಪ್ಟೆಂಬರ್ ತಿಂಗಳಲ್ಲಿ ಪಿಎಫ್ಐ ನಿಷೇಧ ಬೆನ್ನಲ್ಲೇ ಇವರನ್ನು ಬಂಧಿಸಲಾಗಿತ್ತು.
ಪಿಎಫ್ಐ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಯಾಗಿದ್ದು ಭಾರತದಲ್ಲಿ ಮುಸ್ಲಿಂ ಆಡಳಿತ ಸ್ಥಾಪಿಸಲು ಯೋಜನೆ ಹಾಕಿದೆ. ಷರಿಯಾ ಕಾನೂನು ಜಾರಿಗೊಳಿಸಿ ದೇಶವನ್ನು ಆಳಬೇಕೆಂಬ ಗುರಿಯನ್ನು ಪೂರೈಸಲು ಸ್ಥಾಪಿಸಲಾಗಿದೆ ಎಂದು ಎನ್ಐಎ ತನ್ನ ಅರ್ಜಿಯಲ್ಲಿ ಹೇಳಿಕೊಂಡಿತ್ತು.
The Supreme Court Wednesday faulted the “lenient view” taken by the Madras High Court in granting bail to eight members of the banned outfit Popular Front of India (PFI) and set aside its seven-month-old decision to set them free.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm