ಬ್ರೇಕಿಂಗ್ ನ್ಯೂಸ್
24-05-24 10:43 pm HK News Desk ದೇಶ - ವಿದೇಶ
ನವದೆಹಲಿ, ಮೇ.24: ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸಲು ಕೇಂದ್ರ ಸರಕಾರ ಮುಂದಾಗಿದೆ. ಈ ಬಗ್ಗೆ ಪ್ರಾಥಮಿಕವಾಗಿ ವಿದೇಶಾಂಗ ಸಚಿವಾಲಯ, ಪ್ರಜ್ವಲ್ ಗೆ ನಿಮ್ಮ ಪಾಸ್ ಪೋರ್ಟ್ ಯಾಕೆ ರದ್ದುಪಡಿಸಬಾರದು ಎಂದು ನೋಟೀಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಕರ್ನಾಟಕದ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿಗೆ ಮೇ 23ರಂದು ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದುಪಡಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, ಪಾಸ್ ಪೋರ್ಟ್ ರದ್ದತಿಯ ಬಗ್ಗೆ ಕ್ರಮ ಕೈಗೊಳ್ಳುತ್ತಿರುವುದಾಗಿ ಹೇಳಿತ್ತು.
ಪ್ರಜ್ವಲ್ ಸದ್ಯ ಜರ್ಮನಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ನಡುವೆ, ಮಾಜಿ ಪ್ರಧಾನಿ ದೇವೇಗೌಡರು ಬಹಿರಂಗ ಪತ್ರ ಬರೆದಿದ್ದು ಎಲ್ಲಿದ್ದರೂ ಮರಳಿ ಬರುವಂತೆ ಕೇಳಿಕೊಂಡಿದ್ದರು. ಇಲ್ಲದೇ ಇದ್ದರೆ, ಕುಟುಂಬದಿಂದ ದೂರ ಇರಬೇಕಾಗುತ್ತದೆ, ನಾವು ಸಂಬಂಧ ಕಡಿದುಕೊಳ್ಳುತ್ತೇವೆ. ನಮಗೆ ಸಂತ್ರಸ್ತರಿಗೆ ನ್ಯಾಯ ಸಿಗುವುದು ಮುಖ್ಯ ಎನ್ನುವ ರೀತಿಯಲ್ಲಿ ಪತ್ರ ಬರೆದಿದ್ದರು. ಇದೇ ವೇಳೆ, ವಿದೇಶಾಂಗ ಇಲಾಖೆ ಪಾಸ್ ಪೋರ್ಟ್ ರದ್ದತಿಗೆ ಮುಂದಾಗಿದ್ದು, ಇಮೇಲ್ ಮೂಲಕ ನೋಟೀಸ್ ಜಾರಿ ಮಾಡಿದೆ.
ಒಂದ್ವೇಳೆ, ಪಾಸ್ ಪೋರ್ಟ್ ರದ್ದಾದರೆ ಪ್ರಜ್ವಲ್ ವಿದೇಶದಲ್ಲಿ ಇರುವುದು ಅಕ್ರಮವಾಗುತ್ತದೆ. ಅಲ್ಲಿನ ಪ್ರಜೆ ಆಗಿಲ್ಲದೇ ಇದ್ದರೆ ಪಾಸ್ ಪೋರ್ಟ್ ಇಲ್ಲದೆ ಯಾವುದೇ ದೇಶದಲ್ಲಿ ನೆಲೆಸುವಂತಿಲ್ಲ. ಪಾಸ್ ಪೋರ್ಟ್ ರದ್ದಾದ ಕೂಡಲೇ ಅಲ್ಲಿನ ಅಧಿಕಾರಿಗಳಿಗೆ ಕ್ರಮ ಜರುಗಿಸಲು ಭಾರತದಿಂದ ಕೋರಿಕೆ ಕಳಿಸುವ ಅವಕಾಶ ಇರುತ್ತದೆ.
The Ministry of External Affairs (MEA) has served a show-cause notice to suspended JD(S) MP Prajwal Revanna asking why his diplomatic passport should not be cancelled as sought by the Karnataka government in view of allegations of sexual abuse against him, people familiar with the matter said on May 24.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm