ಬ್ರೇಕಿಂಗ್ ನ್ಯೂಸ್
04-12-20 01:11 pm Headline Karnataka News Network ದೇಶ - ವಿದೇಶ
ಲಂಡನ್, ಡಿ.4: ವಾರ್ಕಿ ಫೌಂಡೇಷನ್ ನೀಡುವ ಜಾಗತಿಕ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ಮಹಾರಾಷ್ಟ್ರದ ಶಿಕ್ಷಕ ರಣಜಿತ್ಸಿನ್ಹಾ ದಿಸಾಲೆ ಪಾತ್ರರಾಗುವ ಮೂಲಕ 7.5 ಕೋಟಿ ರೂ.ಗಳನ್ನು ಪ್ರಶಸ್ತಿ ರೂಪದಲ್ಲಿ ಗೆದ್ದಿದ್ದಾರೆ.
ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪರಿಟೆವಾಡಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ರಣಜಿತ್, ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಸಿಗಬೇಕೆಂದು ಹೋರಾಟ ನಡೆಸಿದ್ದರಲ್ಲದೆ ಗ್ರಾಮೀಣ ಪ್ರದೇಶಗಳಲ್ಲೂ ಕ್ಯು ಆರ್ ಕೋಡ್ ಮೂಲಕ ಸುಲಭ ರೀತಿಯಲ್ಲಿ ಪಠ್ಯಗಳನ್ನು ಪರಿಚಯಿಸಿದ ಖ್ಯಾತಿ ಹೊಂದಿದ್ದಾರೆ.
ರಣಜಿತ್ ಸಿನ್ಹಾ ಅವರು ಕ್ಯು ಆರ್ ಕೋಡ್ ಅನ್ನು ಪರಿಚಯಿಸಿ ಅದರ ಮೂಲಕ ಬೇರೆ ಭಾಷೆಗಳಲ್ಲಿನ ಪಠ್ಯಪುಸ್ತಕಗಳಲ್ಲಿನ ಪಾಠಗಳನ್ನು ಮಾತೃಭಾಷೆಗೆ ತರ್ಜುಮೆ ಮಾಡಿದ್ದಲ್ಲದೆ, ವಿಡಿಯೋ ಪಾಠ, ಆಡಿಯೋ ಗೀತೆ, ಮಕ್ಕಳಿಗೆ ಇಷ್ಟವಾಗುವಂತಹ ಕಥೆಯನ್ನು ಇದರಲ್ಲಿ ಅಳವಡಿಸಿದ್ದರು.
ಈ ಪಠ್ಯವನ್ನು ಮಹಾರಾಷ್ಟ್ರ ಸರ್ಕಾರ ಪ್ರಾಥಮಿಕ ಶಾಲಾ ಹಂತದಲ್ಲಿ ಬಳಸಿಕೊಳ್ಳಲು ಅನುಮತಿ ನೀಡಿತ್ತು.
ಈ ಬಾರಿಯ ಜಾಗತಿಕ ಶಿಕ್ಷಕ ಪ್ರಶಸ್ತಿಯ ಅಂತಿಮ ಸುತ್ತಿನಲ್ಲಿ ವಿಶ್ವದ ಹಲವೆಡೆಯಿಂದ 10 ಮಂದಿ ಪ್ರವೇಶ ಪಡೆದಿದ್ದರು, ಆದರೆ ರಣಜಿತ್ ಸಿನ್ಹಾ 7.5 ಕೋಟಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ರಣಜಿತ್ ಸಿನ್ಹಾ ಅವರು ತಾವು ಗೆದ್ದ ಬಹುಮಾನದಲ್ಲಿ ಅಂತಿಮ ಸುತ್ತಿಗೆ ಬಂದಿದ್ದ ಉಳಿದ 9 ಮಂದಿಗೆ ತಲಾ 40 ಲಕ್ಷ ರೂ.ಗಳನ್ನು ನೀಡಲು ನಿರ್ಧರಿಸಿದ್ದಾರೆ. 2014ರಲ್ಲಿ ಸ್ಥಾಪನೆಕೊಂಡ ವಾರ್ಕಿ ಫೌಂಡೇಷನ್ ನೀಡುವ ಜಾಗತಿಕ ಪ್ರಶಸ್ತಿ ಗೆದ್ದ ಶಿಕ್ಷಕ ರಣಜಿತ್ಸಿನ್ಹಾ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಭವ್ಠಾಕ್ರೆ ಅಭಿನಂದಿಸಿದ್ದಾರೆ.
This year’s Global Teacher Prize has been awarded to Ranjitsinh Disale for his work helping girls, most of them from poor tribal communities, at a village school in western India.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm