ಬ್ರೇಕಿಂಗ್ ನ್ಯೂಸ್
29-05-24 12:12 pm HK News Desk ದೇಶ - ವಿದೇಶ
ನವದೆಹಲಿ, ಮೇ 29: ಭಾರತದ ಜೊತೆ ಮಾಡಿಕೊಂಡಿದ್ದ 1999ರ ಲಾಹೋರ್ ಒಪ್ಪಂದವನ್ನು ಪಾಕಿಸ್ತಾನವೇ ಮುರಿದಿತ್ತು. ಅದು ನಮ್ಮ ಅತಿ ದೊಡ್ಡ ಪ್ರಮಾದ ಆಗಿತ್ತು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಬಹಿರಂಗ ಹೇಳಿಕೆ ನೀಡಿದ್ದಾರೆ. ಕಾರ್ಗಿಲ್ ಯುದ್ಧ ಜನರಲ್ ಫರ್ವೇಜ್ ಮುಷರಫ್ ಅವರ ಕುಕೃತ್ಯವಾಗಿತ್ತು ಎಂಬುದನ್ನು ಪರೋಕ್ಷವಾಗಿ ಹೇಳಿಕೊಂಡಿದ್ದಾರೆ.
ಪಾಕಿಸ್ತಾನ ಮುಸ್ಲಿಂ ಲೀಗ್ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಪ್ರಧಾನಿ ನವಾಜ್ ಷರೀಫ್ ಪಕ್ಷದ ಸಭೆಯಲ್ಲಿ ಈ ಹೇಳಿಕೆ ನೀಡಿದ್ದು ಇದರ ವಿಡಿಯೋ ವೈರಲ್ ಆಗಿದೆ. ಮೇ 28, 1998 ರಂದು ಪಾಕಿಸ್ತಾನ ಐದು ಅಣು ಬಾಂಬ್ ಪರೀಕ್ಷೆ ನಡೆಸಿತ್ತು. ಇದಾದ ಬಳಿಕ ಅಂದಿನ ಭಾರತದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇಲ್ಲಿಗೆ ಬಂದು ನಮ್ಮ ಜೊತೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ನಾವು ಮಾತ್ರ ಆ ಒಪ್ಪಂದವನ್ನು ಮುರಿದಿದ್ದು ನಾವು ಮಾಡಿದ ಅತಿ ದೊಡ್ಡ ತಪ್ಪಾಗಿತ್ತು ಎಂದರು.
ಫೆಬ್ರವರಿ 21, 1999 ರಂದು ವೈರಿ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಭಾರತ ಲಾಹೋರ್ ಒಪ್ಪಂದಕ್ಕೆ ಸಹಿ ಹಾಕಿದ್ದವು. ನೆರೆಹೊರ ರಾಷ್ಟ್ರಗಳ ನಡುವಿನ ಶಾಂತಿ ಒಪ್ಪಂದವು ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಲು ಉತ್ತೇಜಿಸಿತ್ತು. ಆದರೆ, ಕೆಲವು ತಿಂಗಳಲ್ಲೇ ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಗಡಿಯಲ್ಲಿ ಪಾಕಿಸ್ತಾನದ ಸೇನೆ ಮಾಡಿದ್ದ ಆಕ್ರಮಣವು ಎರಡು ರಾಷ್ಟ್ರಗಳ ನಡುವೆ ಕಾರ್ಗಿಲ್ ಯುದ್ಧಕ್ಕೆ ಕಾರಣವಾಗಿತ್ತು.
ಅಂದು ಪಾಕಿಸ್ತಾನ ಸೇನೆಯ ಜನರಲ್ ಆಗಿದ್ದ ಮುಷರಫ್ ದೇಶದ ಆಡಳಿತವನ್ನು ಕೈಗೆ ತೆಗೆದುಕೊಂಡು, ಕಾರ್ಗಿಲ್ ಮೂಲಕ ಪಾಕ್ ಸೇನೆಯನ್ನು ನುಗ್ಗಿಸಿ ಶಾಂತಿ ಒಪ್ಪಂದವನ್ನು ಮುರಿದಿದ್ದರು. ಆನಂತರ, ಭಾರತದ ಸೈನಿಕರು ಪ್ರತಿ ದಾಳಿ ನಡೆಸಿ ಯುದ್ಧವನ್ನು ಗೆದ್ದಿದ್ದರು. ಈ ಸಂರ್ಭದಲ್ಲಿ ನವಾಜ್ ಷರೀಫ್ ಪಾಕಿಸ್ತಾನದ ಪ್ರಧಾನಿ ಆಗಿದ್ದರೂ ಅಧಿಕಾರದ ನಿಯಂತ್ರಣ ಮುಷರಫ್ ಕೈಲಿತ್ತು. ಈಗ ಪಾಕಿಸ್ತಾನದಲ್ಲಿ ಆರ್ಥಿಕತೆ ಪಾತಾಳಕ್ಕೆ ಹೋಗಿದ್ದು ಕೆಲವು ನಾಯಕರು ಭಾರತದ ಸ್ನೇಹ ಮುರಿದುಕೊಂಡಿದ್ದೇ ಆಪತ್ತಿಗೆ ಕಾರಣವಾಯಿತು ಎಂದು ಹೇಳುತ್ತಿರುವಾಗಲೇ ಹಳೆಯ ಪ್ರಮಾದವನ್ನು ಹೇಳಿಕೊಂಡು ನವಾಜ್ ಷರೀಫ್ ಹಲುಬಿದ್ದಾರೆ.
Pakistan's former Prime Minister Nawaz Sharif admitted on Tuesday that the country had "violated" the 1999 Lahore Declaration agreement with India, which was signed by him and then Indian Prime Minister Atal Bihari Vajpayee. Indirectly referring to the Kargil misadventure by General Pervez Musharraf, he said, "It was our fault."
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 07:08 pm
Mangalore Correspondent
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm