ಬ್ರೇಕಿಂಗ್ ನ್ಯೂಸ್
02-06-24 07:39 pm HK News Desk ದೇಶ - ವಿದೇಶ
ನವದೆಹಲಿ, ಜೂನ್.2: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧಿಸಿ ಮಧ್ಯಂತರ ಜಾಮೀನು ಪೂರ್ತಿಗೊಂಡ ಹಿನ್ನೆಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭಾನುವಾರ ಸಂಜೆ ತಿಹಾರ್ ಜೈಲಿಗೆ ಶರಣಾಗಿದ್ದಾರೆ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನು ಜೂನ್ 1 ರಂದು ಕೊನೆಗೊಂಡಿತ್ತು. ಹೀಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ತಿಹಾರ್ ಜೈಲಿಗೆ ಬಂದು ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ.
ಲೋಕಸಭೆ ಚುನಾವಣೆಗೆ ಪ್ರಚಾರ ನಡೆಸಲು ಕೇಜ್ರಿವಾಲ್ ಗೆ ಷರತ್ತಿನ ಜಾಮೀನು ನೀಡಲಾಗಿತ್ತು. ಶರಣಾಗುವ ಮುನ್ನ ಕೇಜ್ರಿವಾಲ್ ಅವರು ರಾಜ್ ಘಾಟ್ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದರು. ಬಳಿಕ ಕನ್ನಾಟ್ ನಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದಕ್ಕೂ ಮೊದಲು ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಈ ವೇಳೆ, ''ನಾನು ಮತ್ತೆ ಜೈಲಿಗೆ ಹೋಗುತ್ತಿರುವುದು ಭ್ರಷ್ಟಾಚಾರದಲ್ಲಿ ತೊಡಗಿದ್ದಕ್ಕಾಗಿ ಅಲ್ಲ, ನಾನು ಸರ್ವಾಧಿಕಾರದ ವಿರುದ್ಧ ಧ್ವನಿ ಎತ್ತಿದ್ದರಿಂದ ಜೈಲಿಗೆ ಹೋಗುತ್ತಿದ್ದೇನೆ. ನನಗೆ ಸುಪ್ರೀಂ ಕೋರ್ಟ್ 21 ದಿನಗಳ ಅವಕಾಶ ನೀಡಿತ್ತು. ಈ 21 ದಿನಗಳು ಅವಿಸ್ಮರಣೀಯ. ನಾನು ಒಂದು ನಿಮಿಷವೂ ವ್ಯರ್ಥ ಮಾಡಲಿಲ್ಲ. ನಾನು ದೇಶವನ್ನು ಉಳಿಸಲು ಪ್ರಚಾರ ಮಾಡಿದ್ದೇನೆ. ಎಎಪಿಗಿಂತ ಮೊದಲು ನನಗೆ ನನ್ನ ದೇಶ ಮುಖ್ಯ ಎಂದು ಕೇಜ್ರಿವಾಲ್ ಹೇಳಿದರು. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಮೂರನೇ ಬಾರಿಗೆ ಅಧಿಕಾರಿದ ಗದ್ದುಗೆ ಏರಲಿದೆ ಎಂಬ ಭವಿಷ್ಯ ನುಡಿಯುವ ಎಲ್ಲಾ ಎಕ್ಸಿಟ್ ಪೋಲ್ಗಳು "ನಕಲಿ" ಎಂದು ಕೇಜ್ರಿವಾಲ್ ಪ್ರತಿಪಾದಿಸಿದರು.
Delhi Chief Minister Arvind Kejriwal on Sunday surrender at the Tihar jail after 21 days interim bail granted to him by the Supreme Court to campaign for Lok Sabha elections ended.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm