ಬ್ರೇಕಿಂಗ್ ನ್ಯೂಸ್
04-06-24 01:34 pm HK News Desk ದೇಶ - ವಿದೇಶ
ತಿರುವನಂತಪುರಂ, ಜೂ 04: ಕೊನೆಗೂ ಬಿಜೆಪಿಯ ಕನಸು ನನಸಾಗಿದೆ. ಕೇರಳದಲ್ಲಿ ಮೊದಲ ಬಾರಿಗೆ ಖಾತೆ ತೆರೆದಿದೆ. ತ್ರಿಶ್ಯೂರ್ನಲ್ಲಿ ನಟ, ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಜಯ ಗಳಿಸಿದ್ದಾರೆ. ಇವರು ಕಾಂಗ್ರೆಸ್ನ ಕೆ. ಮುರಳೀಧರನ್ ಮತ್ತು ಸಿಪಿಐಯ ವಿ.ಎಸ್. ಸುನೀಲ್ ಕುಮಾರ್ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಈ ಹಿಂದಿನ ಲೋಕಸಭೆ ಚುನಾವಣೆ ಯಲ್ಲಿಯೂ ಸುರೇಶ್ ಗೋಪಿ ಉತ್ತಮ ಪ್ರದರ್ಶನ ತೋರಿದ್ದರು. ಶೇ. 28.19ರಷ್ಟು ಮತಗಳನ್ನು ತನ್ನದಾಗಿಸಿಕೊಂಡಿದ್ದರು. ಆ ಸಮಯದಲ್ಲಿ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಶೇ. 30.85 ಮತ ಪಡೆದಿದ್ದರು. ಕಾಂಗ್ರೆಸ್ನ ಟಿ.ಎಸ್.ಪಾರ್ಥಪನ್ ಶೇ. 39.83ರಷ್ಟು ಮತ ಪಡೆದು ಜಯ ಗಳಿಸಿದ್ದರು. ಅವರು 4,15,089 ಮತಗಳನ್ನು ಗಳಿಸಿ 3,21,456 ಮತಗಳನ್ನು ಪಡೆದ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಅವರನ್ನು ಸೋಲಿಸಿದ್ದರು.
ಮಾಲಿವುಡ್ನ ಜನಪ್ರಿಯ ನಟರಲ್ಲಿ ಸುರೇಶ್ ಗೋಪಿ ಕೂಡ ಒಬ್ಬರು. 65 ವರ್ಷದ ಸೂರೇಶ್ ಗೋಪಿ ಮಲಯಾಳಂ ಜತೆಗೆ ಕನ್ನಡ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳ ಕೆಲವು ಚಿತ್ರಗಳಲ್ಲಿಯೂ ನಟಿಸಿದ್ದಾರೆ. 1988ರಲ್ಲಿ ತೆರೆಕಂಡ ʼನ್ಯೂ ಡೆಲ್ಲಿʼ ಸಿನಿಮಾ ಮೂಲಕ ಅವರು ಸ್ಯಾಂಡಲ್ವುಡ್ಗೆ ಕಾಲಿಟ್ಟಿದ್ದರು. 1997ರಲ್ಲಿ ತೆರೆಕಂಡ ಮಲಯಾಳಂನ ʼಕಲಿಯಾಟ್ಟಂʼ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಖಡಕ್ ಪೊಲೀಸ್ ಮತ್ತು ಆಯಕ್ಷನ್ ಚಿತ್ರಗಳಿಗೆ ಅವರು ಪ್ರಸಿದ್ಧರಾಗಿದ್ದು, ರಿಯಾಲಿಟಿ ಶೋಗಳನ್ನೂ ನಡೆಸಿಕೊಟ್ಟಿದ್ದಾರೆ. ಕಾಲೇಜು ದಿನಗಳಲ್ಲಿ ಎಡ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅವರು 2016ರಲ್ಲಿ ಅವರು ಬಿಜೆಪಿ ಸೇರ್ಪಡೆಯಾಗಿದ್ದರು. ಅಂದು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು, 2021ರಲ್ಲಿ ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಇದೀಗ ಎರಡನೇ ಪ್ರಯತ್ನದಲ್ಲಿ ಗೆದ್ದು ಬೀಗಿದ್ದಾರೆ. ಸುಮಾರು 30 ಸಾವಿರ ಅಂತರದಿಂದ ಗೆದ್ದಿದ್ದಾರೆ.
The BJP's dream has finally come true. This is the first time it has opened an account in Kerala. Actor-turned-BJP candidate Suresh Gopi has won in Thrissur. He is the Congress's K. Muraleedharan and CPI's V.S. He defeated Sunil Kumar to achieve a historic feat.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm