ಬ್ರೇಕಿಂಗ್ ನ್ಯೂಸ್
04-06-24 01:34 pm HK News Desk ದೇಶ - ವಿದೇಶ
ತಿರುವನಂತಪುರಂ, ಜೂ 04: ಕೊನೆಗೂ ಬಿಜೆಪಿಯ ಕನಸು ನನಸಾಗಿದೆ. ಕೇರಳದಲ್ಲಿ ಮೊದಲ ಬಾರಿಗೆ ಖಾತೆ ತೆರೆದಿದೆ. ತ್ರಿಶ್ಯೂರ್ನಲ್ಲಿ ನಟ, ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಜಯ ಗಳಿಸಿದ್ದಾರೆ. ಇವರು ಕಾಂಗ್ರೆಸ್ನ ಕೆ. ಮುರಳೀಧರನ್ ಮತ್ತು ಸಿಪಿಐಯ ವಿ.ಎಸ್. ಸುನೀಲ್ ಕುಮಾರ್ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಈ ಹಿಂದಿನ ಲೋಕಸಭೆ ಚುನಾವಣೆ ಯಲ್ಲಿಯೂ ಸುರೇಶ್ ಗೋಪಿ ಉತ್ತಮ ಪ್ರದರ್ಶನ ತೋರಿದ್ದರು. ಶೇ. 28.19ರಷ್ಟು ಮತಗಳನ್ನು ತನ್ನದಾಗಿಸಿಕೊಂಡಿದ್ದರು. ಆ ಸಮಯದಲ್ಲಿ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಶೇ. 30.85 ಮತ ಪಡೆದಿದ್ದರು. ಕಾಂಗ್ರೆಸ್ನ ಟಿ.ಎಸ್.ಪಾರ್ಥಪನ್ ಶೇ. 39.83ರಷ್ಟು ಮತ ಪಡೆದು ಜಯ ಗಳಿಸಿದ್ದರು. ಅವರು 4,15,089 ಮತಗಳನ್ನು ಗಳಿಸಿ 3,21,456 ಮತಗಳನ್ನು ಪಡೆದ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಅವರನ್ನು ಸೋಲಿಸಿದ್ದರು.
ಮಾಲಿವುಡ್ನ ಜನಪ್ರಿಯ ನಟರಲ್ಲಿ ಸುರೇಶ್ ಗೋಪಿ ಕೂಡ ಒಬ್ಬರು. 65 ವರ್ಷದ ಸೂರೇಶ್ ಗೋಪಿ ಮಲಯಾಳಂ ಜತೆಗೆ ಕನ್ನಡ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳ ಕೆಲವು ಚಿತ್ರಗಳಲ್ಲಿಯೂ ನಟಿಸಿದ್ದಾರೆ. 1988ರಲ್ಲಿ ತೆರೆಕಂಡ ʼನ್ಯೂ ಡೆಲ್ಲಿʼ ಸಿನಿಮಾ ಮೂಲಕ ಅವರು ಸ್ಯಾಂಡಲ್ವುಡ್ಗೆ ಕಾಲಿಟ್ಟಿದ್ದರು. 1997ರಲ್ಲಿ ತೆರೆಕಂಡ ಮಲಯಾಳಂನ ʼಕಲಿಯಾಟ್ಟಂʼ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಖಡಕ್ ಪೊಲೀಸ್ ಮತ್ತು ಆಯಕ್ಷನ್ ಚಿತ್ರಗಳಿಗೆ ಅವರು ಪ್ರಸಿದ್ಧರಾಗಿದ್ದು, ರಿಯಾಲಿಟಿ ಶೋಗಳನ್ನೂ ನಡೆಸಿಕೊಟ್ಟಿದ್ದಾರೆ. ಕಾಲೇಜು ದಿನಗಳಲ್ಲಿ ಎಡ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅವರು 2016ರಲ್ಲಿ ಅವರು ಬಿಜೆಪಿ ಸೇರ್ಪಡೆಯಾಗಿದ್ದರು. ಅಂದು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು, 2021ರಲ್ಲಿ ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಇದೀಗ ಎರಡನೇ ಪ್ರಯತ್ನದಲ್ಲಿ ಗೆದ್ದು ಬೀಗಿದ್ದಾರೆ. ಸುಮಾರು 30 ಸಾವಿರ ಅಂತರದಿಂದ ಗೆದ್ದಿದ್ದಾರೆ.
The BJP's dream has finally come true. This is the first time it has opened an account in Kerala. Actor-turned-BJP candidate Suresh Gopi has won in Thrissur. He is the Congress's K. Muraleedharan and CPI's V.S. He defeated Sunil Kumar to achieve a historic feat.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm