ಬ್ರೇಕಿಂಗ್ ನ್ಯೂಸ್
04-06-24 04:27 pm HK News Desk ದೇಶ - ವಿದೇಶ
ಕೊಯಮತ್ತೂರು, ಜೂ.04: ಜನ್ಮದಿನದ ಸಂಭ್ರಮದಲ್ಲಿರುವ ತಮಿಳುನಾಡು ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ ಸೋಲಿನ ಆಘಾತ ಎದುರಾಗಿದೆ. ತಮಿಳುನಾಡಿನ ಕೊಯಮತ್ತೂರು ಲೋಕಸಭೆ ಕ್ಷೇತ್ರದ ಚುನಾವಣೆ ಕುತೂಹಲ ಮೂಡಿಸಿತ್ತು. ಇಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ, ಡಿಎಂಕೆಯ ಗಣಪತಿ ರಾಜ್ಕುಮಾರ್ ಪಿ ಮತ್ತು ಎಐಎಡಿಎಂಕೆಯ ಸಿಂಗೈ ಜಿ ರಾಮಚಂದ್ರನ್ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು.
ಆರಂಭದ ಮತ ಎಣಿಕೆಯಲ್ಲಿ ಅಣ್ಣಾಮಲೈ ಮುನ್ನಡೆ ಪಡೆದಿದ್ದರಿಂದ ಅವರಿಂದ ಪ್ರಬಲ ಪೈಪೋಟಿ ನಿರೀಕ್ಷಿಸಲಾಗಿತ್ತು. ಆದರೆ ನಂತರದ ಸುತ್ತುಗಳಲ್ಲಿ ಎರಡನೇ ಸ್ಥಾನಕ್ಕೆ ಕುಸಿದ ಅವರು, ಡಿಎಂಕೆ ಅಭ್ಯರ್ಥಿಯನ್ನು ಹಿಂದಿಕ್ಕುವ ಯಾವುದೇ ಸೂಚನೆ ನೀಡಲಿಲ್ಲ. ಅಂತಿಮವಾಗಿ ಅಣ್ಣಾಮಲೈ ಅವರಿಗೆ ಹುಟ್ಟುಹಬ್ಬದಂದೇ ಸೋಲಿನ ಕಹಿ ಎದುರಾಗಿದೆ. ಸುಮಾರು 17 ಸಾವಿರ ಮತಗಳ ಅಂತರದಿಂದ ಅಣ್ಣಾಮಲೈ ಸೋಲು ಅನುಭವಿಸಿದ್ದಾರೆ.
ಆರಂಭದ ಸುತ್ತುಗಳಲ್ಲಿ ಡಿಎಂಕೆ ಅಭ್ಯರ್ಥಿ 12,841 ಮತಗಳನ್ನು ಪಡೆದಿದ್ದು, ಅಣ್ಣಾಮಲೈ ಅವರಿಗಿಂತ 3454 ಮತಗಳಿಂದ ಮುನ್ನಡೆ ಪಡೆದಿದ್ದರು. ಅಣ್ಣಾಮಲೈ ಅವರಿಗೆ 9387 ಮತಗಳು ದೊರಕಿದ್ದವು.
ಅವರು ಹಂತದ ಮತ ಎಣಿಕೆಯಲ್ಲಿ ಕೆ ಅಣ್ಣಾಮಲೈ ಮುನ್ನಡೆ ಸಾಧಿಸಿದ್ದರು. ಆದರೆ ಅಂಚೆ ಮತಗಳ ಎಣಿಕೆ ಮುಗಿದಾಗ ಡಿಎಂಕೆ ಮುನ್ನಡೆ ಸಾಧಿಸಿದೆ. ಡಿಎಂಕೆ 5127 ಮತಗಳು, ಬಿಜೆಪಿ 1852 ಮತಗಳು ಹಾಗೂ ಎಐಎಡಿಎಂಕೆ 1541 ಮತಗಳನ್ನು ಪಡೆದಿದ್ದವು.
ತಮಿಳುನಾಡಿನಲ್ಲಿ ಬಿಜೆಪಿಗೆ ಭದ್ರ ನೆಲೆ ಇಲ್ಲದಿದ್ದರೂ, ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ಕೇಸರಿ ಪಕ್ಷ ಉತ್ತಮ ಬೆಂಬಲ ಹೊಂದಿದೆ. ಸಿಪಿಐಎಂ ಪಕ್ಷದ ಭದ್ರ ಕೋಟೆಯಾಗಿರುವ ಈ ಕ್ಷೇತ್ರದಲ್ಲಿ, ಬಿಜೆಪಿ ಕೂಡ ತನ್ನದೇ ಮತ ಬ್ಯಾಂಕ್ ಪಡೆದಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸಿಪಿಎಂ ನಾಯಕ ಪಿ. ಆರ್. ನಟರಾಜನ್ ಅವರು ಲೋಕಸಭೆಗೆ ಆಯ್ಕೆಯಾಗಿದ್ದರು. ಬಿಜೆಪಿಯ ಸಿ. ಪಿ. ರಾಧಾಕೃಷ್ಣನ್ ಅವರು ಎರಡನೇ ಸ್ಥಾನ ಪಡೆದಿದ್ದರು. ಆದರೆ ಅವರು ಸರಿಸುಮಾರು 4 ಲಕ್ಷ ಮತಗಳನ್ನು ಗಳಿಸುವ ಮೂಲಕ ಭರ್ಜರಿ ಪೈಪೋಟಿಯನ್ನೇ ನೀಡಿದ್ದರು. ಹೀಗಾಗಿ, 2024ರ ಲೋಕಸಭಾ ಚುನಾವಣೆಯಲ್ಲಿ ಕೆ. ಅಣ್ಣಾಮಲೈ ಅವರು ಪ್ರಾಬಲ್ಯ ಸಾಧಿಸಬಹುದು ಎಂಬ ಕುತೂಹಲ ಮೂಡಿತ್ತು.
BJP state president K Annamalai is staring at defeat in Coimbatore as he is trailing behind DMK candidate Ganapathy P Rajkumar by 25,000 votes at the end of round 5 of the counting.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm