ಬ್ರೇಕಿಂಗ್ ನ್ಯೂಸ್
05-06-24 01:08 pm HK News Desk ದೇಶ - ವಿದೇಶ
ನವದೆಹಲಿ, ಜೂನ್.5: ಎನ್ ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೇರುತ್ತಾ ಎನ್ನುವ ಕುತೂಹಲದ ಪ್ರಶ್ನೆ ಎದ್ದಿರುವಾಗಲೇ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಎನ್ ಡಿಎ ಜೊತೆಗೇ ಇರುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.
ಮತದಾರರ ಬೆಂಬಲ ಖುಷಿ ನೀಡಿದೆ. ರಾಜಕಾರಣದಲ್ಲಿ ಏಳು ಬೀಳು ಸಹಜ. ಇದೊಂದು ಐತಿಹಾಸಿಕ ಚುನಾವಣೆ. ಐದು ವರ್ಷಗಳ ಹೋರಾಟದ ಬಳಿಕ ಟಿಡಿಪಿ ಇಂದು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪಕ್ಷದ ಕಾರ್ಯಕರ್ತರ ಶ್ರಮವಿದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
![]()
ದೆಹಲಿಯಲ್ಲಿ ಎನ್ ಡಿಎ ಸಭೆಗೆ ತೆರಳುವ ಮುನ್ನ ವಿಜಯವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಚಂದ್ರಬಾಬು ನಾಯ್ಡು, ದೇಶದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳನ್ನು ನೋಡಿದ್ದೇನೆ. ಇದರ ಬಗ್ಗೆ ನನಗೆ ಬಹಳಷ್ಟು ಅನುಭವವಿದೆ. ನಾವು ಎನ್ಡಿಎ ಮೈತ್ರಿ ಕೂಟದಲ್ಲಿಯೇ ಇರಲಿದ್ದೇವೆ. ಇವತ್ತು ದೆಹಲಿಯಲ್ಲಿ ನಡೆಯಲಿರುವ ಎನ್ಡಿಎ ಸಭೆಯಲ್ಲಿ ಭಾಗಿಯಾಗುತ್ತೇನೆ. ಮುಂದಿನ ಬೆಳವಣಿಗೆ ಬಗ್ಗೆ ನಿಮಗೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಚುನಾವಣೆ ಫಲಿತಾಂಶ ಘೋಷಣೆಯ ನಂತರ ಬಿಜೆಪಿಗೆ ಸ್ವಂತ ಬಲದ ಬಹುಮತ ದೊರೆಯದೆ ಇರುವುದರಿಂದ ಮೈತ್ರಿ ಪಕ್ಷಗಳಾದ ಟಿಡಿಪಿ ಹಾಗೂ ಜೆಡಿಯು ನೆರವಿನೊಂದಿಗೆ ಸರಕಾರ ರಚಿಸಬೇಕಾದ ಒತ್ತಡಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಇಂಡಿಯಾ ಒಕ್ಕೂಟ, ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಅವರನ್ನು ತನ್ನತ್ತ ಸೆಳೆಯಲು ಕಸರತ್ತು ನಡೆಸಿದ್ದಾರೆ. ಇದರ ಬೆನ್ನಲ್ಲೇ ಚಂದ್ರಬಾಬು ನಾಯ್ಡು ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದ್ದು, ಅಧಿಕಾರಕ್ಕೇರುವ ಆಸೆಯಲ್ಲಿದ್ದ ಕಾಂಗ್ರೆಸ್ ಒಕ್ಕೂಟಕ್ಕೆ ನಿರಾಸೆ ಮೂಡಿಸಿದೆ. ಅತ್ತ ನಿತೀಶ್ ಕುಮಾರ್ ಚುನಾವಣೆ ಬಳಿಕದ ಗುಟ್ಟು ಬಿಟ್ಟು ಕೊಟ್ಟಿಲ್ಲ.
As the BJP faces the challenge of possibly falling short in its Lok Sabha numbers, its partner, the Telugu Desam Party (TDP), has firmly committed its support to the National Democratic Alliance (NDA), rejecting any rumors about switching allegiance to the INDIA bloc.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm